Get Updates
Get notified of breaking news, exclusive insights, and must-see stories!

ಜನಪ್ರತಿನಿಧಿಗಳಿಗೆ ಆಘಾತ ನೀಡುವ ಸುದ್ದಿಕೊಟ್ಟ ಆಯೋಗ

ನವದೆಹಲಿ, ಫೆಬ್ರವರಿ 12: ಕೇಂದ್ರ ಚುನಾವಣೆ ಆಯೋಗದ ಉದ್ದೇಶಿತ ಕ್ರಮವೊಂದು ಕಳಂಕಿತ ಜನಪ್ರತಿನಿಧಿಗಳಿಗೆ ಭಾರಿ ಆಘಾತ ನೀಡಲಿದೆ. 5 ವರ್ಷಗಳ ಕಾಲ ಶಿಕ್ಷೆ ಹೊಂದುವ ಆರೋಪ ಹೊತ್ತ ಕಳಂಕಿತ ಶಾಸಕ, ಸಂಸದರು ಚುನಾವಣೆ ಸ್ಪರ್ಧಿಸದಂತೆ ನಿರ್ಬಂಧ ಹೇರುವ ಸಾಧ್ಯತೆಗಳಿವೆ.

ಯಾವುದೇ ಶಾಸಕ ಅಥವ ಸಂಸದ ಎರಡು ವರ್ಷ ಜೈಲು ಶಿಕ್ಷೆ ಅನುಭವಿಸಿದರೆ, ಅವರ ಸ್ಥಾನವನ್ನು ರದ್ದುಗೊಳಿಸಬಹುದು ಎಂದು ಈ ಹಿಂದೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಈ ಮೂಲಕ 1951ರ ಜನಪ್ರತಿನಿಧಿ ಕಾಯ್ದೆಗೆ ಭಾರಿ ಬದಲಾವಣೆ ತರಲು ಯತ್ನಿಸಲಾಗುತ್ತಿದೆ.

Those facing serious offences should be barred from contesting polls: EC

ಆದರೆ, ಈಗ ಆಯೋಗವು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ಹೊಸ ಪ್ರಸ್ತಾವನೆಯಲ್ಲಿ 2 ವರ್ಷ ಜೈಲು ಶಿಕ್ಷೆ ಬದಲಿಗೆ ಗುರುತರ ಅಪರಾಧ ಪ್ರಕರಣಗಳಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ವರ್ಷ ಶಿಕ್ಷೆ ವಿಧಿಸಬಹುದಾದಂಥ ಆರೋಪ ಹೊತ್ತಿದ್ದರೆ ಸಾಕು ಅಂಥಾ ಶಾಸಕ, ಸಂಸದರು ಚುನಾವಣೆ ಸ್ಪರ್ಧಿಸುವ ಅರ್ಹತೆ ಕಳೆದುಕೊಳ್ಳಲಿದ್ದಾರೆ. ಇದರ ಜತೆಗೆ ಚುನಾವಣೆಗೂ 6 ತಿಂಗಳಿಗೂ ಮೊದಲು ಅವರ ವಿರುದ್ಧ ಪ್ರಕರಣ ದಾಖಲಾಗಿದ್ದರೆ ಅದನ್ನು ಪರಿಗಣಿಸಲಾಗುತ್ತದೆ.

ಜಸ್ಟೀಸ್ ದೀಪಕ್ ಮಿಶ್ರಾ ನೇತೃತ್ವದ ನ್ಯಾಯಪೀಠವು ಈ ಪ್ರಕರಣವನ್ನು ಕೈಗೆತ್ತಿಕೊಳ್ಳಲಿದೆ. ವಕೀಲ ಅಶ್ವಿನ್ ಕುಮಾರ್ ಉಪಾಧ್ಯಾಯ್ ಅವರು ಸುಪ್ರೀಂಕೋರ್ಟಿಗೆ ಸಲ್ಲಿಸಿರುವ ಅಫಿಡವಿಟ್ ನಂತೆ ಅಪರಾಧಿಗಳನ್ನು ಹೊಂದಿರುವ ಪಕ್ಷದ ಮಾನ್ಯತೆ ರದ್ದು ಮಾಡುವ ಅಧಿಕಾರವನ್ನು ಚುನಾವಣಾ ಆಯೋಗ ಹೊಂದಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+