ಕೊರೊನಾ ಸೋಂಕು ಯುವಕರಿಗೆ ಹೆಚ್ಚು ತಗುಲಿದೆ :ಊಹೆ ತಳ್ಳಿ ಹಾಕಿದ ಕೇಂದ್ರ
ನವದೆಹಲಿ, ಜೂನ್ 16: ಕೊರೊನಾ ಮೊದಲ ಅಲೆಯಲ್ಲಿ ಹಿರಿಯರಿಗೆ ಹೆಚ್ಚಿನ ಸೋಂಕು ತಗುಲಿದ್ದು, ಎರಡನೇ ಅಲೆಯಲ್ಲಿ ಯುವಕರಿಗೆ ಹೆಚ್ಚಿನ ಸೋಂಕು ತಗುಲಿದೆ ಎನ್ನುವ ಊಹೆಯನ್ನು ಕೇಂದ್ರ ಸರ್ಕಾರ ತಳ್ಳಿ ಹಾಕಿದೆ.
ಎರಡೂ ಅಲೆಗಳಲ್ಲಿ 1-20 ವಯಸ್ಸಿನ ಶೇ.12 ಮಂದಿಗಿಂತ ಕಡಿಮೆ ಜನರಲ್ಲಿ ಕೊರೊನಾ ಸೋಂಕು ವರದಿಯಾಗಿದೆ ಎಂದು ಹೇಳಿದೆ.
ಮೇ.10 ರಂದು ದೇಶಾದ್ಯಂತ ವರದಿಯಾಗಿದ್ದ ಅತಿ ಹೆಚ್ಚು ಕೊರೊನಾ ಪ್ರಕರಣಗಳ ಪೈಕಿ ಸಕ್ರಿಯ ಪ್ರಕರಣಗಳಲ್ಲಿ ಶೇ.75.6 ರಷ್ಟು ಕುಸಿತ ಕಂಡಿದೆ ಎಂದು ಸರ್ಕಾರ ಹೇಳಿದೆ.

ಎರಡನೇ ಅಲೆಯಲ್ಲಿ ಎಷ್ಟು ಮಂದಿಗೆ ಸೋಂಕು
ಕೊರೊನಾ ಎರಡನೇ ಅಲೆಯಲ್ಲಿ 1-20 ವರ್ಷದ ಶೇ.11.62 ಮಂದಿಗೆ ಸೋಂಕು ತಗುಲಿದ್ದರೆ (ಮಾರ್ಚ್ 15- ಮೇ 25 ವರೆಗೆ) ಮೊದಲ ಅಲೆಯಲ್ಲಿ (ಜುಲೈ 1-ಡಿಸೆಂಬರ್-31) ವರೆಗೆ ಇದೇ ವಯಸ್ಸಿನ ಶೇ.11.31 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಎರಡೂ ಅಲೆಯಲ್ಲಿ ಈ ವಯಸ್ಸಿನ ಗುಂಪಿನ ಜನರಿಗೆ ಸೋಂಕು ತಗುಲಿರುವ ಪ್ರಮಾಣದಲ್ಲಿ ಹೆಚ್ಚಿನ ಅಂತರವಿಲ್ಲ ಎಂದು ಸರ್ಕಾರ ಅಂಕಿ-ಅಂಶ ಸಹಿತವಾಗಿ ಮಾಹಿತಿ ನೀಡಿದೆ.

ಎರಡೂ ಅಲೆಗಳಲ್ಲಿ ತೊಂದರೆ ಅನುಭವಿಸಿದವರು
ಸರ್ಕಾರಿ ಅಂಕಿ-ಅಂಶಗಳ ಪ್ರಕಾರ 21-50 ವಯಸ್ಸಿನವರೇ ಎರಡೂ ಅಲೆಗಳಲ್ಲಿ ಅತಿ ಹೆಚ್ಚು ಬಾಧಿತರು ಎಂದು ತಿಳಿದುಬಂದಿದ್ದು ಈ ವಯಸ್ಸಿನ ಶೇ.59.74 ರಷ್ಟು ಮಂದಿಗೆ ಮೊದಲ ಅಲೆಯಲ್ಲಿ ಸೋಂಕು ತಗುಲಿತ್ತು, ಎರಡನೇ ಅಲೆಯಲ್ಲಿ ಇದೇ ವಯಸ್ಸಿನ ಶೇ.62.45 ರಷ್ಟು ಮಂದಿಗೆ ಸೋಂಕು ತಗುಲಿದೆ. 61 ರ ವಯಸ್ಸಿನ ಮೇಲ್ಪಟ್ಟ ಜನರಲ್ಲಿ ಶೇ.13.89 ರಷ್ಟು ಮಂದಿಗೆ ಮೊದಲ ಅಲೆಯಲ್ಲಿ ಸೋಂಕು ಬಾಧಿಸಿದ್ದರೆ ಶೇ.12.58 ರಷ್ಟು ಮಂದಿಗೆ ಎರಡನೇ ಅಲೆಯಲ್ಲಿ ಕೊರೊನಾ ಸೋಂಕು ತಗುಲಿದೆ.

ಮಕ್ಕಳಿಗೆ ಸೋಂಕು ತಗುಲುವ ಬಗ್ಗೆ ಸಾಕ್ಷ್ಯಾಧಾರಗಳಿಲ್ಲ
ಮೂರನೇ ಅಲೆಯಲ್ಲಿ ಮಕ್ಕಳು ಅತಿ ಹೆಚ್ಚು ಕೊರೊನಾ ಸೋಂಕಿಗೆ ಗುರಿಯಾಗಲಿದ್ದಾರೆ ಎಂಬ ಭೀತಿಯ ಬಗ್ಗೆ ಮಾಹಿತಿ ನೀಡಿರುವ ಲವ್ ಅಗರ್ವಾಲ್, ''ಇದಕ್ಕೆ ಯಾವುದೇ ಸೂಕ್ತ ಸಾಕ್ಷ್ಯಾಧಾರಗಳೂ ಇಲ್ಲ'' ಎಂದು ಹೇಳಿದ್ದಾರೆ. ಆದರೆ ಎಲ್ಲಾ ವಯಸ್ಸಿನವರೂ ಮೂರನೇ ಅಲೆಯ ಬಗ್ಗೆ ಎಚ್ಚರದಿಂದ ಇರಬೇಕೆಂದು ಹೇಳಿದ್ದಾರೆ. ಇನ್ನು ದೇಶದಲ್ಲಿ ಕೋವಿಡ್-19 ಪರಿಸ್ಥಿತಿ ಸುಧಾರಣೆಯಾಗುತ್ತಿದ್ದು, ದಿನನಿತ್ಯದ ಪ್ರಕರಣಗಳಲ್ಲಿ ಶೇ.85 ರಷ್ಟು ಇಳಿಕೆ ಕಂಡಿದೆ.

11-20ವರ್ಷದವರು ಎಷ್ಟು ಮಂದಿಗೆ ಸೋಂಕು ತಗುಲಿದೆ
ಇನ್ನು 11-20 ವಯಸ್ಸಿನ ಶೇ.8.03 ಮಂದಿ ಮೊದಲ ಅಲೆಯಲ್ಲಿ ಕೊರೊನಾ ಪೀಡಿತರಾಗಿದ್ದರೆ, ಎರಡನೇ ಅಲೆಯಲ್ಲಿ ಶೇ.8.57 ರಷ್ಟು ಮಂದಿ ಕೊರೊನಾ ಪೀಡಿತರಾಗಿದ್ದಾರೆ.

ಕೊರೊನಾ ಎರಡನೇ ಅಲೆ
ಮೊದಲ ಹಾಗೂ ಎರಡನೇ ಅಲೆಯಲ್ಲಿ ಸೋಂಕಿಗೆ ಗುರಿಯಾದವರ ವಯಸ್ಸಿನ ಅಂಕಿ-ಅಂಶಗಳನ್ನು ವಿಶ್ಲೇಷಿಸಿರುವ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್, ''1-10 ವರ್ಷದ ಶೇ.3.28 ರಷ್ಟು ಮಂದಿಗೆ ಮೊದಲ ಅಲೆಯಲ್ಲಿ ಕೊರೊನಾ ಬಂದಿತ್ತು, ಎರಡನೇ ಅಲೆಯಲ್ಲಿ ಈ ವಿಭಾಗದ ಶೇ.3.05 ಮಂದಿಗೆ ಕೊರೊನಾ ಬಂದಿದೆ'' ಎಂದು ಹೇಳಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications