ನಿತಿನ್ ಗಡ್ಕರಿಗೆ ಬೆದರಿಕೆ ಕರೆ: ಬೆಳಗಾವಿ ಜೈಲಿನಿಂದ ಆರೋಪಿಯನ್ನು ವಶಕ್ಕೆ ಪಡೆದ ನಾಗ್ಪುರ ಪೊಲೀಸರು
ನವದೆಹಲಿ, ಮಾರ್ಚ್, 28: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಕಚೇರಿಗೆ ಎರಡು ಬಾರಿ ಬೆದರಿಕೆ ಕರೆಗಳು ಬಂದಿದ್ದರು. ಬೆಳಗಾವಿಯ ಜೈಲಿನಿಂದ ಕೊಲೆ ಬೆದರಿಕೆ ಬಂದಿದ್ದು, ಕೊಲೆ ಪ್ರಕರಣದ ಆರೋಪಿಯನ್ನು ನಾಗ್ಪುರ ಪೊಲೀಸರು ಮಂಗಳವಾರ ಕಸ್ಟಡಿಗೆ ತೆಗೆದುಕೊಂಡಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.
ಕೊಲೆ ಆರೋಪಿಯನ್ನು ಜಯೇಶ್ ಪೂಜಾರಿ ಅಲಿಯಾಸ್ ಜಯೇಶ್ ಕಾಂತ ಎಂದು ಗುರುತಿಸಲಾಗಿದ್ದು, ಆತನನ್ನು ಹಿಂಡಲಗಾ ಜೈಲಿನಿಂದ ಬಂಧಿಸಿ ಬೆಳಗ್ಗೆ ವಿಮಾನದಲ್ಲಿ ನಾಗ್ಪುರಕ್ಕೆ ಕರೆತರಲಾಯಿತು ಎಂದು ನಾಗ್ಪುರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೂಜಾರಿ ಪೂಜಾರಿ ವಿರುದ್ಧ ನಗರದ ಧಾಂತೋಳಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ.

ಆರೋಪಿಯನ್ನ ವಶಕ್ಕೆ ಪಡೆದ ನಾಗ್ಪುರ ಪೊಲೀಸರು
ಕೇಂದ್ರ ಸಚಿವರಿಗೆ ಬೆದರಿಕೆ ಕರೆಗಳನ್ನು ಮಾಡಿನ ಹಿಂದಿನ ಉದ್ದೇಶವನ್ನು ಅರ್ಥಮಾಡಿಕೊಳ್ಳಲು ಅವರನ್ನು ವಿಚಾರಣೆಗೆ ಒಳಪಡಿಸಲಾಗುವುಸು. ಹಾಗೆಯೇ ಪೂಜಾರಿಯನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ತಿಳಿಸಿದ್ದರು. ಜನವರಿ 14 ರಂದು ಈತ ನಾಗ್ಪುರ ನಗರದ ಗಡ್ಕರಿ ಅವರ ಸಾರ್ವಜನಿಕ ಸಂಪರ್ಕ ಕಚೇರಿಗೆ ಬೆದರಿಕೆ ಕರೆ ಮಾಡಿ 100 ಕೋಟಿ ರೂಪಾಯಿ ಬೇಡಿಕೆ ಇಟ್ಟಿದ್ದ ಎನ್ನಲಾಗಿತ್ತು.
10 ಕೋಟಿ ರೂಪಾಯಿಗೆ ಬೇಡಿಕೆ
ಅಲ್ಲದೇ ಕರೆ ಮಾಡಿದ ವ್ಯಕ್ತಿ ತಾನು ದಾವೂದ್ ಇಬ್ರಾಹಿಂ ಗ್ಯಾಂಗ್ನ ಸದಸ್ಯ ಎಂದು ಹೇಳಿಕೊಂಡಿದ್ದ. ಕೊನೆಗೆ 10 ಕೋಟಿ ಪಾವತಿಸದಿದ್ದರೆ ಗಡ್ಕರಿ ಅವರಿಗೆ ಹಾನಿ ಮಾಡುವುದಾಗಿ ಬೆದರಿಕೆ ಹಾಕಿದ್ದ. ಮಾರ್ಚ್ 21ರಂದು ಕೇಂದ್ರ ಸಚಿವರ ಕಚೇರಿಗೆ ಮತ್ತೆ ಈತ ಕರೆ ಮಾಡಿದ್ದ ಎಂದು ಪೊಲೀಸ್ ತನಿಖೆ ಬಳಿಕ ಮಾಹಿತಿ ಬಹಿರಂಗಗೊಂಡಿದೆ.

ಬೆದರಿಕೆ ಕರೆಗಳ ನಂತರ ನಾಗ್ಪುರ ಸಂಸದರ ಮನೆ ಮತ್ತು ಕಚೇರಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕೊಲೆ ಪ್ರಕರಣದಲ್ಲಿ ಪೂಜಾರಿಗೆ ಮರಣದಂಡನೆ ವಿಧಿಸಲಾಗಿದ್ದು, ಈತ ವಿಚಾರಣೆ ವೇಳೆ ಬೆದರಿಕೆ ಕರೆಗಳಲ್ಲಿ ನಾನು ಭಾಗಿಯಾಗಿಲ್ಲ ಎಂದು ಹೇಳಿಕೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನಿತಿನ್ ಗಡ್ಕರಿಯವರಿಗೆ ಈ ಹಿಂದೆ ಕೊಲೆ ಬೆದರಿಕೆ ಬಂದಿತ್ತು. ಇತ್ತೀಚೆಗಷ್ಟೇ ಮತ್ತೊಮ್ಮೆ ಬೆದರಿಕೆ ಕರೆ ಬಂದಿದ್ದು, ಮನೆ ಮತ್ತು ಕಚೇರಿಯನ್ನು ಸ್ಫೋಟ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಯುವತಿಯ ನಂಬರ್ನಿಂದ ಕರೆ ಮಾಡಿದ ವ್ಯಕ್ತಿ ತನ್ನ ಹೆಸರು ಜಯೇಶ್ ಪೂಜಾರಿ ಎಂದು ಪರಿಚಯಿಸಿಕೊಂಡಿದ್ದಾನೆ ಅಂತಾ ಪೊಲೀಸರು ತಿಳಿಸಿದ್ದರು.
ಈ ಹಿಂದೆ ಕರೆ ಮಾಡಿದಾಗ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು 100 ಕೋಟಿ ರೂಪಾಯಿ ನೀಡಬೇಕೆಂದು ಬೆದರಿಕೆ ಹಾಕಿದ್ದರು. ಆದರೆ ಈ ಬಾರಿ 10 ಕೋಟಿ ರೂಪಾಯಿ ನೀಡಬೇಕು ಎಂದು ಬೆದರಿಕೆ ಒಡ್ಡಿದ್ದು, ಈ ಕುರಿತು ಪಶ್ಚಿಮ ನಾಗ್ಪುರದ ಖಮ್ಲಾದಲ್ಲಿರುವ ನಿತಿನ್ ಗಡ್ಕರಿ ಅವರ ಕಚೇರಿ ದೂರು ದಾಖಲಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪ್ರಕರಣ ದಾಖಲಿಸಿಕೊಂಡ ನಾಗ್ಪುರ ಪೊಲೀಸರು ತನಿಖೆ ಮುಂದುವರೆಸಿದ್ದರು.
ಪೊಲೀಸರ ನೀಡಿದ ಮಾಹಿತಿಯ ಪ್ರಕಾರ, ನಿತಿನ್ ಗಡ್ಕರಿಯವರ ಖಮ್ಲಾ ಕಚೇರಿಗೆ ಫೋನ್ ಕರೆ ಬಂದಿತ್ತು. ಕರೆ ಮಾಡಿದವರು ಮನೆ ಮತ್ತು ಕಚೇರಿಯನ್ನು ಸ್ಫೋಟಿಸುವುದಾಗಿ ಬೆದರಿಕೆಯೊಡ್ಡಿದ್ದರು. ಈ ಕರೆಗೆ ಬಳಸಲಾದ ಸಂಖ್ಯೆ ಬೆಂಗಳೂರಿನ ಯುವತಿಗೆ ಸಂಬಂಧಿಸಿದ್ದು ಎನ್ನಲಾಗಿತ್ತು. ಈ ಯುವತಿಯು ಈವೆಂಟ್ ಮ್ಯಾನೇಜ್ಮೆಂಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಈಕೆಯ ಸ್ನೇಹಿತ ಜೈಲಿನಲ್ಲಿದ್ದಾನೆ ಎಂದು ತಿಳಿಸಿದ್ದರು. ಹಾಗೆಯೇ ಫೋನ್ ನಂಬರ್ ಜಾಲ ಹಿಡಿದ ನಾಗ್ಪುರ ಪೊಲೀಸರು ಕಾರ್ಯಾಚರಣೆ ಮುಂದುವರೆಸಿದ್ದರು.
ನಮಗೆ ಎರಡು ಬೆದರಿಕೆ ಕರೆಗಳು ಬಂದಿವೆ. ಬೆದರಿಕೆ ಕರೆ ಬಂದ ತಕ್ಷಣ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇವೆ ಎಂದು ಖಮ್ಲಾ ಕಚೇರಿಯ ಹೆಚ್ಚುವರಿ ಖಾಸಗಿ ಕಾರ್ಯದರ್ಶಿ ತಿಳಿಸಿದ್ದರು.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ












Click it and Unblock the Notifications