ಮುಂಬೈನ 11 ಸ್ಥಳಗಳಲ್ಲಿ ಬಾಂಬ್ ಇರಿಸಲಾಗಿದೆ ಎಂದು ಆರ್ಬಿಐಗೆ ಬೆದರಿಕೆ ಮೇಲ್
ಮುಂಬೈ, ಡಿಸೆಂಬರ್ 26: ಮುಂಬೈನ 11 ಸ್ಥಳಗಳಲ್ಲಿ 11 ಬಾಂಬ್ಗಳನ್ನು ಇರಿಸಲಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಗೆ ಮಂಗಳವಾರ ಬಾಂಬ್ ಬೆದರಿಕೆ ಮೇಲ್ ಬಂದಿದೆ.
ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾರತದ ಅತಿದೊಡ್ಡ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಉಲ್ಲೇಖಿಸಿ ರಾಜೀನಾಮೆ ನೀಡಬೇಕು ಎಂದು ಮೇಲ್ನಲ್ಲಿ ಒತ್ತಾಯಿಸಲಾಗಿದೆ.

ಆರ್ಬಿಐ ಕಚೇರಿಗಳು, ಎಚ್ಡಿಎಫ್ಸಿ ಬ್ಯಾಂಕ್ ಮತ್ತು ಐಸಿಐಸಿಐ ಬ್ಯಾಂಕ್ ಸೇರಿದಂತೆ ಮುಂಬೈನ 11 ಸ್ಥಳಗಳಲ್ಲಿ 11 ಬಾಂಬ್ಗಳನ್ನು ಇಡಲಾಗಿದೆ. ಮಧ್ಯಾಹ್ನ 1:30 ಕ್ಕೆ ಸ್ಫೋಟ ನಡೆಯಲಿದೆ ಎಂದು ಮೇಲ್ನಲ್ಲಿ ತಿಳಿಸಲಾಗಿದೆ.
"ನಾವು ಮುಂಬೈನ ವಿವಿಧ ಸ್ಥಳಗಳಲ್ಲಿ 11 ವಿಭಿನ್ನ ಬಾಂಬ್ಗಳನ್ನು ಹಾಕಿದ್ದೇವೆ. ಖಾಸಗಿ ವಲಯದ ಬ್ಯಾಂಕ್ಗಳೊಂದಿಗೆ ಆರ್ಬಿಐ ಭಾರತದಲ್ಲಿ ಅತಿದೊಡ್ಡ ಹಗರಣವನ್ನು ನಡೆಸಿದೆ. ಹಗರಣದಲ್ಲಿ ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೆಲವು ಉನ್ನತ ಹಣಕಾಸು ಅಧಿಕಾರಿಗಳು ಮತ್ತು ಭಾರತದ ಕೆಲವು ಹೆಸರಾಂತ ಮಂತ್ರಿಗಳು ಭಾಗಿಯಾಗಿದ್ದಾರೆ. ನಾವು ಅದಕ್ಕೆ ಸಾಕಷ್ಟು ಪುರಾವೆಗಳನ್ನು ಹೊಂದಿದ್ದೇವೆ "ಎಂದು ಮೇಲ್ನಲ್ಲಿ ತಿಳಿಸಲಾಗಿದೆ.
ಬಾಂಬ್ ಅನ್ನು ಆರ್ಬಿಐ ಹೊಸ ಕೇಂದ್ರ ಕಚೇರಿ ಕಟ್ಟಡ, ಎಚ್ಡಿಎಫ್ಸಿ ಹೌಸ್ ಚರ್ಚ್ ಗೇಟ್, ಐಸಿಐಸಿಐ ಬ್ಯಾಂಕ್ ಬಿಕೆಸಿ ಟವರ್ಸ್ ಈ ಮೂರು ಸ್ಥಳಗಳಲ್ಲಿ ಇರಿಸಲಾಗಿದೆ ಎಂದು ಮೇಲ್ನಲ್ಲಿ ತಿಳಿಸಲಾಗಿದೆ.
ಆರ್ಬಿಐ ಗವರ್ನರ್ ಮತ್ತು ಹಣಕಾಸು ಸಚಿವರು ಕೂಡಲೇ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು. ಹಗರಣದ ಸಂಪೂರ್ಣ ಮಾಹಿತಿ ಬಗ್ಗೆ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಬೇಕು ಎಂದು ನಾವು ಒತ್ತಾಯಿಸುತ್ತೇವೆ. ಹಗರಣದಲ್ಲಿ ಭಾಗಿಯಾದ ಎಲ್ಲರಿಗೂ ಸರ್ಕಾರ ತಕ್ಕ ಶಿಕ್ಷೆ ನೀಡಬೇಕು ಎಂದು ನಾವು ಒತ್ತಾಯಿಸುತ್ತೇವೆ. ಮಧ್ಯಾಹ್ನ 1:30 ರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಎಲ್ಲಾ 11 ಬಾಂಬ್ಗಳು ಒಂದೊಂದಾಗಿ ಸ್ಫೋಟಿಸುತ್ತವೆ" ಎಂದು ಮೇಲ್ನಲ್ಲಿ ಬರೆಯಲಾಗಿದೆ.
ಈ ಸಂಬಂಧ ಮುಂಬೈ ಪೊಲೀಸರು ಕಾರ್ಯಾಚರಣೆಗಿಳಿದಿದ್ದು, ಎಲ್ಲಾ ಸ್ಥಳಗಳಲ್ಲಿ ಸಮಗ್ರ ಶೋಧ ನಡೆಸಿದ್ದಾರೆ. ಹುಡುಕಾಟ ನಡೆಸಿದಾಗ ಅನುಮಾನಾಸ್ಪದವಾಗಿ ಏನೂ ಪತ್ತೆಯಾಗಿಲ್ಲ. ಎಂಆರ್ಎ ಮಾರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications