ಅಮರನಾಥ ಯಾತ್ರಿಗಳ ಮೇಲೆ ದಾಳಿ: ಮೂವರು ಶಂಕಿತ ಉಗ್ರರ ಬಂಧನ
ಶ್ರೀನಗರ, ಆಗಸ್ಟ್ 06: ಅಮರನಾಥ ಯಾತ್ರಿಗಳ ಮೇಲೆ ಉಗ್ರರ ದಾಳಿ ನಡೆಸಿದ್ದ ಮೂವರು ಶಂಕಿತ ಉಗ್ರರನ್ನು ಜಮ್ಮು ಕಾಶ್ಮೀರ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಅಮರನಾಥ ಯಾತ್ರಿಕರು ಇದ್ದ ಬಸ್ನ ಮೇಲೆ ಜುಲೈ 9 ರಾತ್ರಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ 15 ಜನರು ಮೃತಪಟ್ಟಿದ್ದರು. ಈ ಪ್ರಕರಣದ ತನಿಖೆ ನಡೆಸುತ್ತಿರುವ ಜಮ್ಮು ಕಾಶ್ಮೀರದ ವಿಶೇಷ ತನಿಖೆ ತಂಡ ಎಲ್ಇಟಿ ಉಗ್ರ ಸಂಘಟನೆಗೆ ಸೇರಿದ ಮೂವರು ಉಗ್ರರನ್ನು ಬಂಧಿಸಿದೆ ಎಂದು ಜಮ್ಮು ಕಾಶ್ಮೀರ ಪೊಲೀಸ್ ಮಹಾ ನಿರ್ದೇಶಕ ಮುನೀರ್ ಖಾನ್ ತಿಳಿಸಿದ್ದಾರೆ.

ಈ ಬಂಧಿತ ಆರೋಪಿಗಳು ಭಯೋತ್ಪಾದಕರಿಗೆ ನೆರವು ನೀಡಿದ್ದರು ಎನ್ನಲಾಗಿದೆ. ಇವರ ವಿರುದ್ಧದ ವಿಚಾರಣೆಯನ್ನು ತೀವ್ರಗೊಳಿಸಲಾಗಿದೆ ಎಂದು ಮುನೀರ್ ಖಾನ್ ತಿಳಿಸಿದ್ದಾರೆ.












Click it and Unblock the Notifications