ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಅಮರನಾಥ ಯಾತ್ರಿಗಳ ಮೇಲೆ ದಾಳಿ: ಮೂವರು ಶಂಕಿತ ಉಗ್ರರ ಬಂಧನ
ಶ್ರೀನಗರ, ಆಗಸ್ಟ್ 06: ಅಮರನಾಥ ಯಾತ್ರಿಗಳ ಮೇಲೆ ಉಗ್ರರ ದಾಳಿ ನಡೆಸಿದ್ದ ಮೂವರು ಶಂಕಿತ ಉಗ್ರರನ್ನು ಜಮ್ಮು ಕಾಶ್ಮೀರ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಅಮರನಾಥ ಯಾತ್ರಿಕರ ಬಸ್ ಪಲ್ಟಿ, ಸತ್ತವರ ಸಂಖ್ಯೆ 16ಕ್ಕೆ ಏರಿಕೆ
ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಅಮರನಾಥ ಯಾತ್ರಿಕರು ಇದ್ದ ಬಸ್ನ ಮೇಲೆ ಜುಲೈ 9 ರಾತ್ರಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ 15 ಜನರು ಮೃತಪಟ್ಟಿದ್ದರು. ಈ ಪ್ರಕರಣದ ತನಿಖೆ ನಡೆಸುತ್ತಿರುವ ಜಮ್ಮು ಕಾಶ್ಮೀರದ ವಿಶೇಷ ತನಿಖೆ ತಂಡ ಎಲ್ಇಟಿ ಉಗ್ರ ಸಂಘಟನೆಗೆ ಸೇರಿದ ಮೂವರು ಉಗ್ರರನ್ನು ಬಂಧಿಸಿದೆ ಎಂದು ಜಮ್ಮು ಕಾಶ್ಮೀರ ಪೊಲೀಸ್ ಮಹಾ ನಿರ್ದೇಶಕ ಮುನೀರ್ ಖಾನ್ ತಿಳಿಸಿದ್ದಾರೆ.
ಗುಪ್ತಚರ ಮಾಹಿತಿ ಇದ್ದೂ ಅಮರನಾಥ ದಾಳಿ ನಡೆದಿದ್ದು ಹೇಗೆ?
ಈ ಬಂಧಿತ ಆರೋಪಿಗಳು ಭಯೋತ್ಪಾದಕರಿಗೆ ನೆರವು ನೀಡಿದ್ದರು ಎನ್ನಲಾಗಿದೆ. ಇವರ ವಿರುದ್ಧದ ವಿಚಾರಣೆಯನ್ನು ತೀವ್ರಗೊಳಿಸಲಾಗಿದೆ ಎಂದು ಮುನೀರ್ ಖಾನ್ ತಿಳಿಸಿದ್ದಾರೆ.
English summary
Nearly a month after eight Amarnath pilgrims were killed during a terror attack in Jammu and Kashmir's Pahalgam area, the state police on Sunday said that they have cracked the case.