ತಮಿಳುನಾಡಿನಲ್ಲಿ ರೈಲಿಗೆ ಸಿಲುಕಿ ಕರ್ನಾಟಕದ ಮೂವರು ವಿಕಲಚೇತನ ಮಕ್ಕಳು ಸಾವು!
ಚೆನ್ನೈ ಅಕ್ಟೋಬರ್ 25: ರೈಲು ಹಳಿ ಮೇಲೆ ಆಟವಾಡುತ್ತಿದ್ದ ಕರ್ನಾಟಕದ ಮೂವರು ವಿಕಲಚೇತನ ಮಕ್ಕಳ ಮೇಲೆ ರೈಲು ಹರಿದು ಸಾವನ್ನಪ್ಪಿದ ದಾರುಣ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ವಿಕಲಚೇತನರು ಎನ್ನಲಾದ ಇಬ್ಬರು ಸಹೋದರರು ಸೇರಿದಂತೆ ಮೂವರು ಮಕ್ಕಳು ಮಂಗಳವಾರ ನಗರದ ಹೊರವಲಯದ ಉರಪಕ್ಕಂ ಬಳಿ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ.
ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ ರೈಲ್ವೇ ಹಳಿಯಲ್ಲಿ ಆಟವಾಡುತ್ತಿದ್ದ ಶ್ರವಣ ಮತ್ತು ವಾಕ್ ನ್ಯೂನತೆ ಹೊಂದಿರುವ ಮೂವರು ಬಾಲಕರು ಕಳೆದ ದಿನ ಬೆಳಿಗ್ಗೆ ದುರಂತ ಅಂತ್ಯ ಕಂಡಿದ್ದಾರೆ. ಮೃತರನ್ನು ಸುರೇಶ್ (15), ಮತ್ತು ಅವರ ಸಹೋದರ ರವಿ (12) ಮತ್ತು ಮಂಜುನಾಥ್ (11) ಎಂದು ಗುರುತಿಸಲಾಗಿದೆ. ಕರ್ನಾಟಕದ ನಿವಾಸಿಗಳಾದ ಇವರು ದಸರಾ ರಜಾದಿನ ಇರುವುದರಿಂದ ಚೆನ್ನೈ ಸಮೀಪದ ಉರಪಕ್ಕಂನಲ್ಲಿ ಕೆಲಸ ಮಾಡುತ್ತಿದ್ದ ತಮ್ಮ ಪೋಷಕರನ್ನು ಭೇಟಿ ಮಾಡಲು ಬಂದಿದ್ದರು. ಈ ವೇಳೆ ಘಟನೆ ನಡೆದಿದೆ.

ಸುರೇಶ್ ಮತ್ತು ರವಿಗೆ ಶ್ರವಣ ದೋಷವಿತ್ತು. ಅವರ ಸ್ನೇಹಿತ ಮಂಜುನಾಥ್ ಮಾತನಾಡುವ ದೋಷ ಹೊಂದಿದ್ದನು. ತಂದೆ-ತಾಯಿ ಕೆಲಸಕ್ಕೆ ಹೋದ ತಕ್ಷಣ ಮಕ್ಕಳು ಬೆಳಗಿನ ಉಪಾಹಾರ ಸೇವಿಸಿ ಆಟವಾಡಲು ಸಮೀಪದ ರೈಲ್ವೇ ಟ್ರ್ಯಾಕ್ಗೆ ತೆರಳಿದ್ದರು. ಪೋಷಕರು ಮಂಗಳವಾರ ಕೆಲಸಕ್ಕೆ ಹೋಗಿದ್ದಾಗ ಮಕ್ಕಳು ರೈಲು ಹಳಿಯಲ್ಲಿ ಆಟವಾಡುತ್ತಿದ್ದರು.
ರೈಲು ಬರುವುದನ್ನು ಗಮನಿಸದೆ ಮೂವರು ಮಕ್ಕಳು ರೈಲು ಹಳಿ ದಾಟಲು ಮುಂದಾದಾಗ ಚೆಂಗಲ್ಪಟ್ಟುದಿಂದ ತಾಂಬರಂ ಕಡೆಗೆ ಹೋಗುತ್ತಿದ್ದ ಉಪನಗರ ಇಎಂಯು (ಎಲೆಕ್ಟ್ರಿಕ್ ಮಲ್ಟಿಪಲ್ ಯುನಿಟ್) ರೈಲು ಬೆಳಿಗ್ಗೆ 11.45 ರ ಸುಮಾರಿಗೆ ಅವರ ಮೇಲೆ ಹರಿದಿದೆ.
ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್ಪಿ) ಸಿಬ್ಬಂದಿ ಅವರ ದೇಹಗಳನ್ನು ಹಳಿಯಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಕ್ರೋಮ್ಪೇಟೆ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮರಣೋತ್ತರ ಪರೀಕ್ಷೆ ಬಳಿಕ ಶವಗಳನ್ನು ಪೋಷಕರಿಗೆ ಒಪ್ಪಿಸಿದ್ದಾರೆ.
ಸ್ಥಳೀಯ ವರದಿಗಳ ಪ್ರಕಾರ ವಂಡಲೂರು ಮತ್ತು ಉರಪಕ್ಕಂ ನಡುವಿನ ರೈಲ್ವೆ ಮಾರ್ಗವನ್ನು ಯಾವುದೇ ಗೋಡೆಯಿಂದ ರಕ್ಷಿಸಲಾಗಿಲ್ಲ. ಇಲ್ಲಿ ಆಗಾಗ್ಗೆ ಅಪಘಾತಗಳು ಸಂಭವಿಸುತ್ತವೆ ಎಂದು ಸ್ಥಳೀಯರು ದೂರಿದ್ದಾರೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications