ಕಾಶ್ಮೀರದಲ್ಲಿ ಹಿಮಪಾತ: ಮೂರು ಸೈನಿಕರು ನಾಪತ್ತೆ
ಬಂಡಿಪೊರ, ಡಿಸೆಂಬರ್ 12: ಕಾಶ್ಮೀರದ ಬಂಡಿಪೊರದಲ್ಲಿ ಹಿಮಪಾತ ಸಂಭವಿಸಿದ್ದು, ಮೂವರು ಸೈನಿಕರು ನಾಪತ್ತೆಯಾಗಿದ್ದಾರೆ. ಮೂವರೂ ಹಿಮದೊಳಗೆ ಸಿಲುಕಿರಬಹುದು ಎಂದು ಶಂಕಿಸಲಾಗಿದೆ.
ಗಡಿನಿಯಂತ್ರಣ ರೇಖೆ ಬಳಿಯ ಬಾಗ್ಟೂರ್ ಗುರೇಜ್ ಸೆಕ್ಟರ್ ಬಳಿ ಹಿಮಪಾತ ಸಂಭವಿಸಿದೆ.
ಕಳೆದ ರಾತ್ರಿ(ಡಿ.11)ಯಿಂದ ಮೂವರು ಸೈನಿಕರು ನಾಪತ್ತೆಯಾಗಿದ್ದು, ಅವರ ಪತ್ತೆಕಾರ್ಯ ನಡೆಯುತ್ತಿದೆ.

ಜಮ್ಮು ಕಾಶ್ಮೀರದ ರಾಜೌರಿ ಮತ್ತು ಶ್ರೀನಗರದಲ್ಲಿ ಹಿಮಮಳೆ ಆರಂಭವಾಗಿರುವ ಕಾರಣ ಇಲ್ಲಿನ ದಾರಿಯನ್ನು ಮುಚ್ಚಲಾಗಿದೆ. ವಾಹನ ಸಂಚಾರಕ್ಕೆ ತಡೆಯೊಡ್ಡಲಾಗಿದೆ. ಹಿಮಾಚಲ ಪ್ರದೇಶದ ಮನಾಲಿಯ ಸೊಲಾಂಗ್ ಕಣಿವೆಯಲ್ಲೂ ಹಿಮಮಳೆಯಾಗಿದೆ. ಇದೇ ವರ್ಷ ಜನವರಿಯಲ್ಲಿ ಸಂಭವಿಸಿದ್ಧ ಭೀಕರ ಹಿಮಪಾತಕ್ಕೆ 15 ಯೋಧರು ಹುತಾತ್ಮರಾಗಿದ್ದರು.
2016 ರ ಫೆಬ್ರವರಿಯಲ್ಲಿ ಸಿಯಾಚಿನ್ ನಲ್ಲಿ ಸಂಭವಿಸಿದ ಹಿಮಪಾತದಲ್ಲಿ 30 ಅಡಿ ಆಳದ ಹಿಮದಡಿಯಲ್ಲಿ, -45 ಡಿಗ್ರಿ ಕೊರೆವ ಚಳಿಯಲ್ಲಿ ಆರು ದಿನಗಳ ಕಾಲ ಬದುಕಿದ್ದು, ನಂತರ ಬಹು ಅಂಗಾಂಗ ವೈಫಲ್ಯದಿಂದ ಫೆಬ್ರವರಿ 11 ರಂದು ದೆಹಲಿಯ ಆಸ್ಪತ್ರೆಯಲ್ಲಿ ಹುತಾತ್ಮರಾದ ಹುಬ್ಬಳ್ಳಿಯ ಲಾನ್ಸ್ ನಾಯಕ್ ಹನುಮಂತಪ್ಪ ಅವರನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದು
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications