Jammu & Kashmir: ಇಬ್ಬರು ಭಯೋತ್ಪಾದಕರ ಹತ್ಯೆ; ಮೂವರು ಪೊಲೀಸ್ ಸಿಬ್ಬಂದಿ ಹುತಾತ್ಮ
ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೊಮ್ಮೆ ಭಯೋತ್ಪಾದಕರು ಅಟ್ಟಹಾಸ ಮೆರೆದಿದ್ದಾರೆ. ಗುರುವಾರ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಭಯೋತ್ಪಾದಕರ ಜೊತೆ ನಡೆದ ಗುಂಡಿನ ದಾಳಿಯಲ್ಲಿ ಮೂವರು ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇಬ್ಬರು ಭಯೋತ್ಪಾದಕರು ಸಹ ಗುಂಡೇಟಿಗೆ ಬಲಿಯಾಗಿದ್ದು, ಮೂರರಿಂದ ನಾಲ್ಕು ಭಯೋತ್ಪಾದಕರು ಅಡಗಿಕೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.
ಗುಂಡಿನ ಚಕಮಕಿಯಲ್ಲಿ ಐವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಸೇನೆ, ರಾಷ್ಟ್ರೀಯ ಭದ್ರತಾ ಪಡೆ, ಗಡಿ ಭದ್ರತಾ ಪಡೆ, ಪೊಲೀಸರು, ವಿಶೇಷ ಕಾರ್ಯಾಚರಣೆ ಗುಂಪು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆಯ ತಂಡಗಳು ಕಳೆದ ನಾಲ್ಕು ದಿನಗಳಿಂದ ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದವು.

ಭಾನುವಾರ ಈ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಸ್ಥಳೀಯ ನಿವಾಸಿಯೊಬ್ಬರು ಮಂಗಳವಾದ ಪೊಲೀಸರಿಗೆ ಮಾಹಿತಿ ನೀಡಿದ್ದರು. ಕಥುವಾದಲ್ಲಿನ ರಾಜ್ಬಾಗ್ ಪೊಲೀಸ್ ಠಾಣೆ ವ್ಯಾಪ್ತಿಯ ಜುಥಾನಾ ಅರಣ್ಯ ಪ್ರದೇಶದಲ್ಲಿ ಉಗ್ರರೊಂದಿಗೆ ಮುಖಾಮುಖಿಯಾಗಿದೆ ಎಂದು ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಐಎಎನ್ಎಸ್ಗೆ ತಿಳಿಸಿದ್ದಾರೆ, ಆದರೆ ಭಾನುವಾರ ಯಾವುದೇ ಗುಂಡಿನ ಚಕಮಕಿ ನಡೆದಿರಲಿಲ್ಲ.
ಹೆಲಿಕಾಪ್ಟರ್ಗಳು, ಡ್ರೋನ್ಗಳು, ಗುಂಡು ನಿರೋಧಕ ವಾಹನಗಳು ಮತ್ತು ಸ್ನಿಫರ್ ನಾಯಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದವು. ಭದ್ರತಾ ಪಡೆಗಳು ಹಲವಾರು ಜನರನ್ನು ಪ್ರಶ್ನಿಸಿ ಮೂವರು ಶಂಕಿತರನ್ನು ಬಂಧಿಸಿವೆ. ಮಂಗಳವಾರ, ಭದ್ರತಾ ಪಡೆಗಳು ಎರಡು ಗ್ರೆನೇಡ್ಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದವು.
ಸನ್ಯಾಲ್ ಕಾಡುಗಳಲ್ಲಿ ದೊಡ್ಡ ಪ್ರಮಾಣದ ಮದ್ದು ಗುಂಡುಗಳು ಮತ್ತು ಇತರ ಸಾಮಗ್ರಿಗಳ ನಡುವೆ ಕಂಡುಬಂದ ಟ್ರ್ಯಾಕ್ಸೂಟ್ಗಳು ಕಳೆದ ವರ್ಷ ಜೂನ್ ಮತ್ತು ಆಗಸ್ಟ್ನಲ್ಲಿ ಅಸ್ಸಾರ್ ಕಾಡುಗಳು ಮತ್ತು ದೋಡಾದಲ್ಲಿ ಕೊಲ್ಲಲ್ಪಟ್ಟ ನಾಲ್ವರು ಜೈಶ್-ಎ-ಮುಹಮ್ಮದ್ (ಜೆಇಎಂ) ಉಗ್ರರು ಧರಿಸಿದ್ದ ಬಟ್ಟೆಯನ್ನೇ ಹೋಲುತ್ತವೆ ಎಂದು ವರದಿಯಾಗಿದೆ.
ಭಾನುವಾರ ಗುಂಡಿನ ಚಕಮಕಿ
ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ನಳಿನ್ ಪ್ರಭಾತ್ ನೇತೃತ್ವದಲ್ಲಿ ಭಾನುವಾರ ಸಂಜೆ ಹಿರಾನಗರ ವಲಯದಲ್ಲಿ ಕಾರ್ಯಾಚರಣೆ ಪ್ರಾರಂಭಿಸಲಾಗಿತ್ತು. ಪಾಕಿಸ್ತಾನದ ಗಡಿಯಿಂದ ಸುಮಾರು 5 ಕಿ.ಮೀ ದೂರದಲ್ಲಿರುವ ಸನ್ಯಾಲ್ ಗ್ರಾಮದ ನರ್ಸರಿಯ ಆವರಣದ ಒಳಗೆ ಭಯೋತ್ಪಾದಕರು ಅಡಗಿರುವ ಬಗ್ಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣೆ ಗುಂಪಿಗೆ ಗುಪ್ತಚರ ಮಾಹಿತಿ ಸಿಕ್ಕಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಡಗಿ ಕುಳಿತಿದ್ದ ಭಯೋತ್ಪಾದಕರು ಮೊದಲು ಗುಂಡು ಹಾರಿಸಿದ್ದು ಬಳಿಕ ಗುಂಡಿನ ಚಕಮಕಿ ಆರಂಭವಾಗಿದೆ. ಅರ್ಧಗಂಟೆಗೂ ಹೆಚ್ಚಿನ ಸಮಯ ಗುಂಡಿನ ಚಕಮಕಿ ನಡೆದಿದ್ದು ಇಬ್ಬರು ಭಯೋತ್ಪಾದರನ್ನು ಹೊಡೆದುರುಳಿಸಲಾಗಿದೆ. ಶನಿವಾರ ಭಯೋತ್ಪಾದಕರು ಅಕ್ರಮವಾಗಿ ನುಸುಳಿದ್ದಾರೆ ಎಂದು ಹೇಳಲಾಗಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications