Manipur: ಗುಂಡಿನ ದಾಳಿ ಬಳಿಕ ಮೂವರು ಮಹಿಳೆಯರು, ಮೂವರು ಮಕ್ಕಳು ಕಾಣೆ
ಮಣಿಪುರದಲ್ಲಿ ಸೋಮವಾರ ನಡೆದ ಗುಂಡಿನ ಚಕಮಕಿ ಬಳಿಕ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದೆ. ಜಿರಿಬಾಮ್ ಜಿಲ್ಲೆಯಲ್ಲಿ ಗುಂಡಿನ ದಾಳಿ ಬಳಿಕ ಮೂವರು ಮಹಿಳೆಯರು ಮತ್ತು ಮಕ್ಕಳು ಕಾಣೆಯಾಗಿದ್ದು ಆತಂಕ ಮೂಡಿಸಿದೆ. ಸೋಮವಾರ ನಡೆದ ಎನ್ಕೌಂಟರ್ ನಲ್ಲಿ 10 ಉಗ್ರರನ್ನು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಮತ್ತು ಸ್ಥಳೀಯ ಪೊಲೀಸರು ಗುಂಡಿಕ್ಕಿ ಹತ್ಯೆ ಮಾಡಿದ್ದರು.
ಮಹಿಳೆಯರು ಮತ್ತು ಮಕ್ಕಳು ಕಾಣೆಯಾದ ಬಳಿಕ ನಾಗರಿಕರು ರೊಚ್ಚಿಗದ್ದಿದ್ದು, ಇಂಫಾಲ್ನಲ್ಲಿ 13 ಸಂಘಟನೆಗಳು ಜಂಟಿಯಾಗಿ ಬಂದ್ಗೆ ಕರೆ ನೀಡಿವೆ. ಮಂಗಳವಾರ ಸಂಜೆ 6 ಗಂಟೆಯಿಂದ 24 ಗಂಟೆಗಳ ಕಾಲ ಸಂಪೂರ್ಣ ಬಂದ್ ಆಚರಿಸಲಾಗುತ್ತಿದ್ದು, ಮೈತೇಯಿ ಸಮುದಾಯಕ್ಕೆ ಸೇರಿದ ನಾಪತ್ತೆಯಾಗಿರುವ ಆರು ವ್ಯಕ್ತಿಗಳನ್ನು ಬಿಡುಗಡೆ ಮಾಡಲು ಸರ್ಕಾರ ಮಧ್ಯಸ್ಥಿಕೆ ವಹಿಸಲು ಆಗ್ರಹಿಸಿವೆ.

ಸೋಮವಾರ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಜಕುರಾಧೋರ್ನಲ್ಲಿರುವ ಬೊರೊಬೆಕ್ರಾ ಪೊಲೀಸ್ ಠಾಣೆ ಮತ್ತು ಹತ್ತಿರದ ಸಿಆರ್ಪಿಎಫ್ ಶಿಬಿರದ ಮೇಲೆ ಗುಂಡಿನ ದಾಳಿ ಮಾಡಿದ್ದರು. ಇದಕ್ಕುತ್ತರವಾಗಿ ಪೊಲೀಸರು ಮತ್ತು ಸಿಆರ್ ಪಿಫ್ ಸಿಬ್ಬಂದಿ ಪ್ರತಿದಾಳಿ ಮಾಡಿದ್ದು 10 ಉಗ್ರರನ್ನು ಹತ್ಯೆ ಮಾಡಿತ್ತು.
ಉಗ್ರರು ಆರ್ಪಿಜಿಗಳು ಮತ್ತು ಎಕೆ, ಐಎನ್ಎಸ್ಎಎಸ್ ಮತ್ತು ಎಸ್ಎಲ್ಆರ್ಗಳಂತಹ ಇತರ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಬಳಸುತ್ತಿದ್ದರು. ದಾಳಿಯಲ್ಲಿ ಸಿಆರ್ಪಿಎಫ್ ಜವಾನ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಅಸ್ಸಾಂಗೆ ಸ್ಥಳಾಂತರಿಸಲಾಗಿದೆ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.
"ಘಟನೆಯಲ್ಲಿ 10 ಉಗ್ರರು ಸಾವನ್ನಪ್ಪಿದ್ದು, ಇಬ್ಬರು ವೃದ್ದರನ್ನು ಸುಟ್ಟು ಹಾಕಲಾಗಿದ್ದು ಮೂವರು ಮಹಿಳೆಯರು ಮತ್ತು ಮೂವರು ಅಪ್ರಾಪ್ತ ಮಕ್ಕಳು ಕಾಣೆಯಾಗಿದ್ದಾರೆ" ಎಂದು ಐಜಿಪಿ ದೃಢಪಡಿಸಿದ್ದು, ಕಾಣೆಯಾದವರನ್ನು ಪತ್ತೆ ಹಚ್ಚಲು ಪೊಲೀಸರು ತೀವ್ರ ತಪಾಸಣೆ ಮಾಡುತ್ತಿರುವುದಾಗಿ ಹೇಳಿದ್ದಾರೆ.
ನಾವು ಮೊದಲು ಗುಂಡಿನ ದಾಳಿ ಮಾಡುವುದನ್ನು ತಪ್ಪಿಸುತ್ತೇವೆ. ಸಶಸ್ತ್ರ ಪಡೆಗಳಿಗೆ ಗುಂಡಿನ ದಾಳಿ ಮಾಡದೆ ಶರಣಾಗದಂತೆ ಎಚ್ಚರಿಕೆ ನೀಡುತ್ತೇವೆ. ಆದರೂ ಉಗ್ರರು ಗುಂಡಿನ ದಾಳಿ ನಡೆಸಿದಾಗ ನಾವು ಪ್ರತಿಯಾಗಿ ಗುಂಡು ಹಾರಿಸಬೇಕಾಗುತ್ತದೆ, ಅಸ್ಸಾಂ ರೈಫಲ್ಸ್, ಸಿಆರ್ ಪಿಎಫ್, ಪೊಲೀಸರನ್ನು ನಿಯೋಜಿಸಲಾಗಿದ್ದು ಕೂಂಬಿಂಗ್ ಕಾರ್ಯಾಚರಣೆ ನಡೆಯುತ್ತಿದೆ ಎಂದರು.
ಮೃತ 10 ಮಂದಿಯನ್ನು ಸ್ವಯಂ ಸೇವಕರು ಅವರು ಉಗ್ರರಲ್ಲ ಎಂದು ಕೆಲವು ಕುಕಿ-ಜೋ ಸಂಘಟನೆಗಳ ಹೇಳಿದ್ದು ಇದಕ್ಕೆ ಪ್ರತಿಕ್ರಿಯೆ ನೀಡಿದ ಪೊಲೀಸ್ ಅಧಿಕಾರಿ ಮುಯುವಾ, ವಶಪಡಿಸಿಕೊಂಡಿರುವ ಶಸ್ತ್ರಾಸ್ತ್ರಗಳು ಮತ್ತು ವ್ಯಕ್ತಿಗಳು ಧರಿಸಿದ್ದ ಉಡುಪುಗಳನ್ನು ಗಮನಿಸಿದಾಗ ಅವರು ಶಸ್ತ್ರಸಜ್ಜಿತ ಉಗ್ರಗಾಮಿಗಳು ಎಂದು ಹೇಳಬಹುದು ಎಂದು ಹೇಳಿದ್ದಾರೆ.
-
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral












Click it and Unblock the Notifications