ಮೋದಿ 3 ವರ್ಷಗಳ ಆಡಳಿತದಲ್ಲಿ ಹೆಚ್ಚಾಯ್ತು ನಿರುದ್ಯೋಗ ಪ್ರಮಾಣ
ಕೇಂದ್ರದಲ್ಲಿ ತಾನು ಅಧಿಕಾರಕ್ಕೆ ಬರುವ ಮುಂಚೆ ಯುಪಿಎ ಸರ್ಕಾರದಲ್ಲಿ ಸುಮಾರು 10 ವರ್ಷಗಳ ಕಾಲ ರಾರಾಜಿಸಿದ್ದ ನಿರುದ್ಯೋಗ ಸಮಸ್ಯೆ ವಿರುದ್ಧ ಸಮರ ಸಾರುವುದಾಗಿ ಹೇಳಿದ್ದ ಬಿಜೆಪಿ ಈಗ ಅಧಿಕಾರಕ್ಕೆ ಬಂದು ಮೂರು ವರ್ಷಗಳ ನಂತರವೂ ಏರಿಕೆ ಕಂಡಿದೆ.
ನವದೆಹಲಿ, ಮೇ 25: ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರ ಅಸ್ತಿತ್ವಕ್ಕೆ ಬಂದು ಇದೇ ವಾರ ಮೂರು ವರ್ಷಗಳಾಗುತ್ತಿರುವ ಹಿನ್ನೆಲೆಯಲ್ಲಿ ಕೆಲ ಮಾಧ್ಯಮಗಳು ನಡೆಸಿರುವ ಸಮೀಕ್ಷೆಗಳಲ್ಲಿ ಈ ಹಿಂದಿನ ಯುಪಿಎ ಸರ್ಕಾರದ ಅವಧಿಯಲ್ಲಿದ್ದ ನಿರುದ್ಯೋಗ ಪ್ರಮಾಣ, ಹಾಲಿ ಬಿಜೆಪಿ ಆಡಳಿತದ ಮೂರು ವರ್ಷಗಳಲ್ಲಿ ಅಲ್ಪ ಪ್ರಮಾಣದ ಏರಿಕೆ ಕಂಡಿರುವುದು ಬಹಿರಂಗವಾಗಿದೆ.
ಕಾಂಗ್ರೆಸ್ ನೇತೃತ್ವದ ಕೊನೆಯ ವರ್ಷವಾದ 2013-14ರಲ್ಲಿ ದೇಶದ ನಿರುದ್ಯೋಗ ಪ್ರಮಾಣ ಶೇ. 4.9ರಷ್ಟಿತ್ತು. 2015-16ರ ಅಂಕಿ ಅಂಶಗಳ ಪ್ರಕಾರ, ಇದರ ಪ್ರಮಾಣ ಶೇ. 5ರಷ್ಟಿದೆ.[ದೇಶದ ಎಲ್ಲ ಹಳ್ಳಿಗಳಲ್ಲೂ ಮುಂದಿನ ವರ್ಷದ ಹೊತ್ತಿಗೆ ವಿದ್ಯುತ್ ಸಂಪರ್ಕ: ಮೋದಿ]

ಇದು ಅಲ್ಪ ಹೆಚ್ಚಳವೆಂದು ಮೇಲ್ನೋಟಕ್ಕೆ ಅನ್ನಿಸಿದರೂ, ಅಧಿಕಾರಕ್ಕೆ ಬರುವ ಮುಂಚೆ ನಿರುದ್ಯೋಗ ಪ್ರಮಾಣವನ್ನು ಗಣನೀಯವಾಗಿ ಇಳಿಕೆ ಮಾಡುತ್ತೇವೆ ಎಂದಿದ್ದ ಬಿಜೆಪಿಯು ಈಗ ಅಧಿಕಾರ ಸ್ವೀಕರಿಸಿದ ಮೂರು ವರ್ಷಗಳಲ್ಲಿ ಮಾಡಿದ ಕಾರ್ಯವೈಖರಿಯನ್ನು ಪ್ರಶ್ನೆ ಮಾಡುವಂತೆ ಮಾಡಿದೆ.[ಅನ್ನದಾತನ ಕೈಹಿಡಿದಿರುವ ಮಹತ್ವಾಕಾಂಕ್ಷಿ ಯೋಜನೆಗಳು]
2014ರ ಮಹಾ ಚುನಾವಣೆಯ ವೇಳೆ, ಬಿಜೆಪಿಯು ತನ್ನ ಪ್ರಣಾಳಿಕೆಯಲ್ಲಿ, ನಿರುದ್ಯೋಗ ನಿವಾರಣೆ, ಸ್ವಚ್ಛ ಭಾರತ, ಉತ್ತಮ ಸಾರಿಗೆ ಸೌಲಭ್ಯ, ಮನೆ ಮನೆಗೆ ವಿದ್ಯುತ್ ಹಾಗೂ ಭಯೋತ್ಪಾದನೆ ವಿರುದ್ಧ ಸಮರ - ಈ ವಿಚಾರಗಳನ್ನು ಪ್ರಮುಖವಾಗಿ ಉಲ್ಲೇಖಿಸಿತ್ತು.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications