Breaking: ಮೋದಿ, ಯೋಗಿ ವಿರುದ್ಧ ಭಾಷಣ: ಎಸ್ಪಿ ನಾಯಕ ಅಜಂ ಖಾನ್ಗೆ 3 ವರ್ಷ ಜೈಲು ಶಿಕ್ಷೆ
ಲಕ್ನೋ, ಅಕ್ಟೋಬರ್ 27: 2019 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದ್ವೇಷ ಪೂರಿತ ಭಾಷಣ ಮಾಡಿದ ಆರೋಪದಲ್ಲಿ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಅವರಿಗೆ ಮೂರು ವರ್ಷಗಳ ಜೈಲು ವಿಧಿಸಲಾಗಿದೆ.
2019ರಲ್ಲಿ ಪ್ರಧಾನಿ ಮೋದಿ ಹಾಗೂ ಯುಪಿ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಅಜಂ ಖಾನ್ ದ್ವೇಷ ಪೂರಿತ ಭಾಷಣ ಮಾಡಿದ್ದಾರೆ ಎಂಬ ದೂರು ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ಉತ್ತರ ಪ್ರದೇಶದ ರಾಂಪುರ ನ್ಯಾಯಾಲಯವು ಅಜಂ ಖಾನ್ ಸೇರಿದಂತೆ ಇನ್ನಿಬ್ಬರು ಆರೋಪಿಗಳಿಗೆ ಶಿಕ್ಷೆ ವಿಧಿಸಿದೆ. 3 ವರ್ಷ ಜೈಲು ಶಿಕ್ಷೆ ಹಾಗೂ ₹6000 ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
ದೇಶದಲ್ಲಿ ಮುಸ್ಲಿಮರು ಬದುಕಲು ಕಷ್ಟಪಡುವ ವಾತಾವರಣವನ್ನು ಪ್ರಧಾನಿ ನಿರ್ಮಿಸುತ್ತಿದ್ದಾರೆ ಎಂದು ಅಜಂ ಖಾನ್ ಆರೋಪಿಸಿದ್ದರು.

ಅಖಿಲೇಶ್ ಯಾದವ್ ನೇತೃತ್ವ ಸಮಾಜವಾದಿ ಪಕ್ಷದಲ್ಲಿ ಅಜಂ ಖಾನ್ ಅವರು ಪ್ರಭಾವಿ ನಾಯಕರರು. ಅವರು ರಾಂಪುರ ಹಾಗೂ ಪಶ್ಚಿಮ ಉತ್ತರ ಪ್ರದೇಶದ ಇತರ ಭಾಗಗಳಲ್ಲಿ ಪ್ರಭಾವ ಹೊಂದಿದ್ದಾರೆ.
ಯೋಗಿ ನೇತೃತ್ವದ ಉತ್ತರ ಪ್ರದೇಶ ಸರ್ಕಾರವು ನನ್ನ ವಿರುದ್ಧ ಸಂಚು ರೂಪಿಸಿದೆ. ಪಟ್ಟುಬಿಡದೆ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿದೆ ಎಂದು ಅಜಂ ಖಾನ್ ಆರೋಪಿಸಿದ್ದರು. ಈ ವಾದವನ್ನು ಸುಪ್ರೀಂ ಕೋರ್ಟ್ನಲ್ಲೂ ಇಟ್ಟಿದ್ದರು.

ವಂಚನೆ ಪ್ರಕರಣಕ್ಕೆ ಸಂಬಂಧಿಸಿಂತೆ ಎರಡು ವರ್ಷ ಜೈಲಿನಲ್ಲಿದ್ದ ಅಜಂ ಖಾನ್ ಅವರಿಗೆ ಈ ವರ್ಷದ ಮೇನಲ್ಲಿ ಸುಪ್ರೀಂ ಕೋರ್ಟ್ ಜಾಮೀನು ನೀಡಿತ್ತು.
2017 ರಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅಜಂ ಖಾನ್ ವಿರುದ್ಧ ಭ್ರಷ್ಟಾಚಾರ, ಭೂಕಬಳಿಕೆ, ವಂಚನೆ ಸೇರಿದಂತೆ ಒಟ್ಟು 87 ಪ್ರಕರಣಗಳನ್ನು ದಾಖಲಿಸಲಾಗಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications