Nitish Kumar: 'ಟೈಗರ್ ಜಿಂದಾ ಹೈ': ಪಟ್ನಾದಲ್ಲಿ ರಾರಾಜಿಸುತ್ತಿವೆ ನಿತೀಶ್ ಕುಮಾರ್ ಪೋಸ್ಟರ್ಗಳು
Bihar Election Results 2025: ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶಗಳು ಹೊರಬರುತ್ತಿವೆ. ಇದೇ ವೇಳೆ, ಗೆಲುವಿನ ವಿಶ್ವಾಸದಲ್ಲಿ ನಿತೀಶ್ ಕುಮಾರ್ ಬೆಂಬಲಿಗರು ಇರುವುದು ಕಂಡುಬಂದಿದೆ. 'ಟೈಗರ್ ಜಿಂದಾ ಹೈ' ಎಂಬ ನಿತೀಶ್ ಕುಮಾರ್ ಅವರ ಚಿತ್ರವನ್ನು ಹೊಂದಿರುವ ಪೋಸ್ಟರ್ಗಳು ಬಿಹಾರ ರಾಜಧಾನಿ ಪಟ್ನಾದಲ್ಲಿ ಕಾಣಿಸಿಕೊಂಡಿವೆ. ಪಟ್ನಾದ ಬೀರ್ ಚಂದ್ ಪಟೇಲ್ ಮಾರ್ಗದಲ್ಲಿರುವ ಜನತಾದಳ ( ಯುನೈಟೆಡ್ ) ಕಚೇರಿಯ ಹೊರಗೆ ಈ ಪೋಸ್ಟರ್ಗಳನ್ನು ಹಾಕಲಾಗಿದೆ.
ಬಿಜೆಪಿ ನೇತೃತ್ವದ ಎನ್ಡಿಎ ಬಿಹಾರದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ. ನಿತೀಶ್ ನೇತೃತ್ವದ ಸರ್ಕಾರಕ್ಕೆ ಸತತ ಐದನೇ ಅವಧಿಗೆ ಭಾರಿ ಬಹುಮತ ದೊರೆಯಲಿದೆ ಎಂದು ಭವಿಷ್ಯ ನುಡಿದಿವೆ. ಒಂದು ವೇಳೆ, ಬಿಹಾರದಲ್ಲಿ ಎನ್ಡಿಎ ಅಧಿಕಾರಕ್ಕೆ ಬಂದರೆ, ಮತ್ತೆ ನಿತೀಶ್ ಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರುವುದು ನಿಚ್ಚಳವಾಗಿದೆ.

ಇದೇ ವೇಳೆ, ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಅವರು ಮಹಾಘಟಬಂಧನವು ಬಹುಮತ ಪಡೆಯಲಿದೆ ಎಂಬ ಆತ್ಮವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ತೇಜಸ್ವಿ ಯಾದವ್ ಅವರ ಬೆಂಬಲಿಗರು ಸಹ ಗೆಲುವಿನ ಭರವಸೆಯಲ್ಲಿದ್ದಾರೆ.
'ನಾವು ಚುನಾವಣೋತ್ತರ ಸಮೀಕ್ಷೆಗಳಲ್ಲಿ ನಂಬಿಕೆ ಹೊಂದಿಲ್ಲ. ಚುನಾವಣೋತ್ತರ ಫಲಿತಾಂಶಗಳಲ್ಲಿ ನಂಬಿಕೆ ಹೊಂದಿದ್ದೇವೆ' ಎಂದು ಆರ್ಜೆಡಿ ವಕ್ತಾರೆ ಪ್ರಿಯಾಂಕಾ ಭಾರ್ತಿ ಹೇಳಿದ್ದಾರೆ. ಮುಂದುವರಿದ ಅವರು, ಕೊನೆಯ ಮತ ಎಣಿಕೆಯಾಗುವವರೆಗೆ ತಮ್ಮ ಪಕ್ಷದ ಪ್ರತಿಯೊಬ್ಬ ಸದಸ್ಯರು ಎಣಿಕೆ ಕೇಂದ್ರಗಳಲ್ಲಿ ಕಾವಲು ಕಾಯುವಂತೆ ಕೇಳಿಕೊಂಡಿದ್ದಾರೆ. ಈ ಬಾರಿ, ಯಾವುದೇ ಮತ ಕಳ್ಳತನಕ್ಕೆ ಅವಕಾಶ ನೀಡಲಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.
ಬಿಹಾರ್ ಕಿಂಗ್ ನಿತೀಶ್ ಕುಮಾರ್
ಸತತ 9 ಬಾರಿ ಮುಖ್ಯಮಂತ್ರಿಯಾಗಿ ಜೆಡಿಯುನ ನಿತೀಶ್ ಕುಮಾರ್ ಅಧಿಕಾರವನ್ನು ಅನುಭವಿಸಿದ್ದಾರೆ. ಒಂದು ವೇಳೆ, ಈ ಬಾರಿ ಎನ್ಡಿಎ ಬಹುಮತ ಪಡೆದರೆ 10 ಬಾರಿ ಮುಖ್ಯಮಂತ್ರಿಯಾಗಿ ನಿತೀಶ್ ಅವರು ಅಧಿಕಾರದ ಗದ್ದುಗೆ ಏರಲಿದ್ದಾರೆ. ಇದು ಭಾರತದ ಇತಿಹಾಸದಲ್ಲೇ ದೀರ್ಘಾವದಿ ಮುಖ್ಯಮಂತ್ರಿಯಾಗಿ ನಿತೀಶ್ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಹೊರಹೊಮ್ಮಲಿದ್ದಾರೆ.
ಎಣಿಕೆ ಸಮಯ
ನವೆಂಬರ್ 14 ರಂದು, 243 ವಿಧಾನಸಭಾ ಕ್ಷೇತ್ರಗಳ ಮತಗಳ ಎಣಿಕೆಯು ರಾಜ್ಯದ ಎಲ್ಲಾ 46 ಎಣಿಕೆ ಕೇಂದ್ರಗಳಲ್ಲಿ ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಗಿದೆ. ಅಂಚೆ ಮತಪತ್ರಗಳನ್ನು ಮೊದಲು ಎಣಿಸಲಾಗುತ್ತದೆ. ನಂತರ ಬೆಳಿಗ್ಗೆ 8.30 ರಿಂದ ಇವಿಎಂಗಳ ಮೂಲಕ ಚಲಾಯಿಸಲಾದ ಮತಗಳನ್ನು ಎಣಿಸಲಾಗುತ್ತದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications