ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಹುಲಿ ದಾಳಿಗೆ ಪ್ರಾಣ ಕಳೆದುಕೊಂಡ ಮೃಗಾಲಯ ಪರಿಚಾರಕ
ಇಟಾನಗರ, ಮೇ 19: ಅರುಣಾಚಲ ಪ್ರದೇಶದ ಇಟಾನಗರದಲ್ಲಿರುವ ಜೈವಿಕ ಉದ್ಯಾನವನದಲ್ಲಿ ದಾರುಣ ಘಟನೆಯೊಂದು ನಡೆದಿದೆ. 35ರ ಹರೆಯದ ಮೃಗಾಲಯ ಪರಿಚಾರಕರೊಬ್ಬರ ಮೇಲೆ ಹುಲಿ ದಾಳಿ ನಡೆಸಿದ ಪರಿಣಾಮ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ಮೃಗಾಲಯದ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಅಸ್ಸಾಂನ ಲಖಿಂಪುರ್ ಜಿಲ್ಲೆಯ ಧೆಕಿಯಾಜುಲಿಯ ಪೌಲಾಶ್ ಕರ್ಮಾಕರ್ ಎಂಬ ವ್ಯಕ್ತಿ ಈ ರೀತಿ ಪ್ರಾಣವನ್ನು ಕಳೆದುಕೊಂಡ ದುರ್ದೈವಿಯಾಗಿದ್ದಾರೆ. ಮಂಗಳವಾರ ಮೃಗಾಲಯದ ಬೋನಿನಲ್ಲಿರುವ ನೀರಿನ ಕೊಳವನ್ನು ಸ್ವಚ್ಛಗೊಳಿಸಲು ಹೋಗಿದ್ದಾಗ ಘಟನೆ ನಡೆದಿದೆ ಎಂದು ಮೃಗಾಲಯದ ನಿರ್ವಾಹಕ ರಾಯ ಫ್ಲಾಗೋ ತಿಳಿಸಿದ್ದಾರೆ.
"ಮಂಗಳವಾರ ಮಧ್ಯಾಹ್ನ 2:30ಕ್ಕೆ ಈ ಘಟನೆ ನಡೆದಿದೆ. ಇನ್ನೋರ್ವ ಮೃಗಾಲಯದ ಪರಿಚಾರಕ ನನಗೆ ಈ ಬಗ್ಗೆ ಮಾಹಿತಿಯನ್ನು ನೀಡಿದರು. ವೈದ್ಯರ ಜೊತೆಗೆ ನಾನು ಸ್ಥಳಕ್ಕೆ ತೆರಳಿದ್ದಾಗ ಕರ್ಮಾಕರ್ ಅದಾಗಲೇ ಮೃತಪಟ್ಟಿದ್ದರು. ಮುಖದಲ್ಲಿ ಗಂಭೀರ ಗಾಯಗಳಾಗಿ ರಕ್ತಸಿಕ್ತವಾಗಿತ್ತು" ಎಂದು ಫ್ಲಾಗೋ ತಿಳಿಸಿದ್ದಾರೆ.

"ಪಂಜರಕ್ಕೆ ಪ್ರವೇಶಿಸುವ ಮೂರು ಬಾಗಿಲುಗಳು ಕೂಡ ತೆರೆದಿತ್ತು. ಈ ದುರ್ಘಟನೆಗೆ ಇದೇ ಕಾರಣವಾಗಿದೆ. ಈ ಬಗ್ಗೆ ಪೊಲೀಸ್ ಅಧಿಕಾರಿಗಳು ಪ್ರಕರಣವನ್ನು ದಾಖಲಿಸಿಕೊಂಡಿದ್ದು ತನಿಖೆ ಆರಂಭಿಸಿದ್ದಾರೆ" ಎಂದು ಫ್ಲಾಗೋ ಹೇಳಿದ್ದಾರೆ.
ಇಟಾನಗರ ಉಪ ವಿಭಾಗೀಯ ಪೊಲೀಸ್ ಅಧಿಕಾರಿ ಕಂದಮ್ ಸಿಕೋಮ್ ಅಸ್ವಾಭಾವಿಕ ಸಾವು ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಎಂದಿದ್ದಾರೆ. "ಪೊಲೀಸರಿಗೆ ಯಾವುದೇ ಅನುಮಾನಾಸ್ಪದ ಸಂಗತೊಗಳು ದೊರೆತಿಲ್ಲ. ಪ್ರಾಥಮಿಕ ತನಿಖೆಯಲ್ಲಿ ಇದು ನಿರ್ಲಕ್ಷ್ಯದಿಂದ ನಡೆದ ಘಟನೆಯೆಂಬುದು ತಿಳಿದುಬಂದಿದೆ. ಪೋಸ್ಟ್ ಮಾರ್ಟಂ ಪ್ರಕ್ರಿಯೆ ಮುಗಿದ ನಂತರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುತ್ತದೆ" ಎಂದು ಕಂದಮ್ ಸಿಕೋಮ್ ತಿಳಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications