ಟೈಮ್ಸ್ ನೌ ಸಮೀಕ್ಷೆ: ರಾಜಸ್ಥಾನದಲ್ಲಿ ಪುಟಿದೇಳಲಿದೆ ಕಾಂಗ್ರೆಸ್, ಕುಸಿಯಲಿದೆ ಬಿಜೆಪಿ
ಬೆಂಗಳೂರು, ಅಕ್ಟೋಬರ್ 08: ಟೈಮ್ಸ್ ನೌ ನಡೆಸಿರುವ ಸಮೀಕ್ಷೆ ಪ್ರಕಾರ ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದರೆ. ಪ್ರಸ್ತುತ ಆಡಳಿತದಲ್ಲಿರುವ ಬಿಜೆಪಿ ಮಕಾಡೆ ಮಲಗಲಿದೆ.
200 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ 115 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದರೆ. ಬಿಜೆಪಿ ಭಾರಿ ಕುಸಿತ ಕಂಡು 75 ಸ್ಥಾನಗಳನ್ನು ಮಾತ್ರವೇ ಗೆಲ್ಲಲಿದೆ ಎಂದಿದೆ ಸಮೀಕ್ಷೆ. ಇತರೆ ಪಕ್ಷ ಹಾಗೂ ಪಕ್ಷೇತರರು 10 ಮಂದಿ ಗೆಲುವು ಸಾಧಿಸಲಿದ್ದಾರೆ ಎಂದಿದೆ ಸಮೀಕ್ಷೆ.
2013ರಲ್ಲಿ ನಡೆದಿದ್ದ ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು 163 ಸ್ಥಾನಗಳಲ್ಲಿ ವಿಜಯ ಸಾಧಿಸಿ ಸರ್ಕಾರ ರಚಿಸಿತ್ತು. ಆದರೆ ಈ ಬಾರಿ ಅದು ಅರ್ಧಕ್ಕಿಂತಲೂ ಕಡಿಮೆ ಸ್ಥಾನಗಳಿಗೆ ಕುಸಿಯಲಿದೆ ಎಂದು ಸಮೀಕ್ಷೆ ಹೇಳುತ್ತಿದೆ. ಕಳೆದ ಚುನಾವಣೆಯಲ್ಲಿ 21 ಸ್ಥಾನಗಳಲ್ಲಿ ಗೆದ್ದಿದ್ದ ಕಾಂಗ್ರೆಸ್ ಈ ಬಾರಿ 115 ಸೀಟುಗಳನ್ನು ಗೆಲ್ಲಲಿದೆ ಎಂದು ಸಮೀಕ್ಷೆ ಫಲಿತಾಂಶ ಹೇಳಿದೆ.

94% ಮತಗಳನ್ನು ಹೆಚ್ಚಿಸಿಕೊಳ್ಳಲಿದೆ ಕಾಂಗ್ರೆಸ್
ಸಮೀಕ್ಷೆ ಪ್ರಕಾರ ಬಿಜೆಪಿಯು ಕಳೆದ ಬಾರಿ ಗಳಿಸಿದ ಮತಗಳಲ್ಲಿ 88% ಮತಗಳನ್ನು ಕಳೆದುಕೊಳ್ಳಲಿದೆ. ಕಾಂಗ್ರೆಸ್ ಪಕ್ಷವು 94% ಗಿಂತಲೂ ಹೆಚ್ಚು ಮತಗಳನ್ನು ಗಳಿಸಿಕೊಳ್ಳಲಿದೆ. ಟೈಮ್ಸ್ ನೌ ಪ್ರಕಾರ ಸಮೀಕ್ಷೆಯ ಫಲಿತಾಂಶದಲ್ಲಿ 3% ಮತಗಳಷ್ಟೆ ವ್ಯತ್ಯಾಸವಾಗಬಹುದು ಎಂದಿದೆ.

ಸಿ-ವೋಟರ್, ಎಬಿಪಿ ಸಮೀಕ್ಷೆಗಳ ಸರಾಸರಿ
'ಸಿ-ವೋಟರ್' ಮತ್ತು 'ವಾರ್ ರೂಮ್ ಸ್ಟ್ರಾಟಜಿ' ಎರಡೂ ಸಮೀಕ್ಷೆಗಳ ಫಲಿತಾಂಶವನ್ನು ಆಧಾರವಾಗಿಟ್ಟುಕೊಂಡು ಅವುಗಳ ಸರಾಸರಿ ಆಧರಿಸಿ ಟೈಮ್ಸ್ ನೌ ಅವರು 'ಪೋಲ್ಸ್ ಆಫ್ ಪೋಲ್ಸ್' ಸಮೀಕ್ಷೆಯ ವರದಿಯನ್ನು ಪ್ರಕಟಿಸಿದ್ದಾರೆ.

ಪ್ರತಿಬಾರಿ ಸರ್ಕಾರ ಬದಲಾವಣೆ
ರಾಜಸ್ಥಾನವು ಸಾಮಾನ್ಯವಾಗಿ ಪ್ರತಿ ವಿಧಾನಸಭೆ ಚುನಾವಣೆಯಲ್ಲೂ ಹೊಸ ಪಕ್ಷವನ್ನು ಆರಿಸುವುದು ಅಲ್ಲಿಯ ಮತದಾರರ ರೂಢಿ. ಸತತ ಐದು ಚುನಾವಣೆಯಲ್ಲಿ ಪ್ರತಿಬಾರಿಯೂ ಹೊಸ ಪಕ್ಷ ಅಧಿಕಾರಕ್ಕೆ ಬರುತ್ತದೆ.

ಟೈಮ್ಸ್ ನೌ ಪಂಚ ರಾಜ್ಯ ಸಮೀಕ್ಷೆ
ಟೈಮ್ಸ್ ನೌ ಖಾಸಗಿ ಚಾನೆಲ್ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯ ಸಮೀಕ್ಷೆ ನಡೆಸಿದ್ದು, ಮಧ್ಯಪ್ರದೇಶ, ಮಿಜೋರಂಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಎಬಿಪಿ ಮಾಡಿದ್ದ ಸಮೀಕ್ಷೆಯಲ್ಲಿ ಐದರಲ್ಲಿ ಮೂರು ರಾಜ್ಯಗಳನ್ನು ಬಿಜೆಪಿ ಕಳೆದುಕೊಳ್ಳಲಿದೆ ಎಂದು ಸಮೀಕ್ಷೆ ಫಲಿತಾಂಶ ಬಂದಿತ್ತು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications