Leopard in Tirupati: ತಿರುಮಲದಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ, ಕರಡಿ: ಭಕ್ತರಿಗೆ ಎಚ್ಚರಿಕೆ ನೀಡಿದ ಟಿಟಿಡಿ
ತಿರುಮಲಕ್ಕೆ ತೆರಳುವ ಭಕ್ತರಿಗೆ ಟಿಟಿಡಿ ಮತ್ತೊಮ್ಮೆ ಎಚ್ಚರಿಕೆ ನೀಡಿದೆ. ತಿರುಮಲದಲ್ಲಿ ಚಿರತೆ ಮತ್ತು ಕರಡಿಗಳು ಮತ್ತೆ ಕಾಣಿಸಿಕೊಂಡಿದ್ದು ಸಂಚಲನ ಮೂಡಿಸಿವೆ. ಟ್ರ್ಯಾಪ್ ಕ್ಯಾಮೆರಾಗಳಲ್ಲಿ ಚಿರತೆ ಮತ್ತು ಕರಡಿ ಚಲನವಲನಗಳು ಸೆರೆಹಿಡಿಯಲಾಗಿದೆ.
ಕಳೆದ ತಿಂಗಳಲ್ಲಿ ಎರಡು ದಿನಗಳ ಕಾಲ ಟ್ರ್ಯಾಪ್ ಕ್ಯಾಮೆರಾದಲ್ಲಿ ಚಿರತೆ ಮತ್ತು ಕರಡಿಗಳ ಚಲನವಲನಗಳು ದಾಖಲಾಗಿವೆ. ನರಸಿಂಹ ಸ್ವಾಮಿ ದೇವಸ್ಥಾನದ ಬಳಿ ಹಾಕಲಾಗಿದ್ದ ಟ್ರ್ಯಾಪ್ ಕ್ಯಾಮೆರಾದಲ್ಲಿ ಚಿರತೆ ಮತ್ತು ಹುಲಿ ಚಲನವಲನ ಸೆರೆಯಾಗಿದೆ.

ಡಿಸೆಂಬರ್ 13 ಮತ್ತು 29 ರಂದು ಟ್ರ್ಯಾಪ್ ಕ್ಯಾಮೆರಾದಲ್ಲಿ ಚಿರತೆ ಮತ್ತು ಕರಡಿ ಚಲನವಲನಗಳು ಕಂಡು ಬಂದಿವೆ. ಇದರಿಂದ ಎಚ್ಚೆತ್ತಿರುವ ಟಿಟಿಡಿ ನಡಿಗೆದಾರಿಯಲ್ಲಿ ತಿರುಮಲಕ್ಕೆ ತೆರಳುವ ಭಕ್ತರಿಗೆ ಕೆಲ ಸೂಚನೆಗಳನ್ನು ನೀಡಿದೆ. 'ಭಕ್ತರು ಜಾಗೃತರಾಗಿರಿ.. ಗುಂಪು ಗುಂಪಾಗಿ ತೆರಳಿ' ಎಂದು ಮನವಿ ಮಾಡಿದೆ.
ಈ ಹಿಂದೆ ಅಲಿಪಿರಿ ಫುಟ್ಪಾತ್ನಲ್ಲಿ ಚಿರತೆಗಳು ಸಂಚರಿಸಿ ಬಾಲಕನ ಮೇಲೆ ದಾಳಿ ಮಾಡಿತ್ತು. ನೆಲ್ಲೂರು ಜಿಲ್ಲೆಯ ಕೋವೂರು ಮೂಲದ ಬಾಲಕಿಯ ಮೇಲೆ ದಾಳಿ ಮಾಡಿ ಕೊಂದು ಹಾಕಿದ್ದವು. ಬಳಿಕ ಟಿಟಿಡಿ ಎಚ್ಚರಿಕೆ ನೀಡಿತ್ತು. ಇದಾದ ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ಸೇರಿ ಬಲೆ ಹಾಕಿ ಐದು ಚಿರತೆ ಸೆರೆ ಹಿಡಿದರು.
ಇದಾದ ಬಳಿಕ ಚಿರತೆ ಭೀತಿ ಇರಲಿಲ್ಲ. ಚಿರತೆ ಕಾಟ ಇನ್ನಿರುವುದಿಲ್ಲ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಭಾವಿಸಿದ್ದರು. ಆದರೆ ಇತ್ತೀಚೆಗೆ ಮತ್ತೊಂದು ಚಿರತೆ, ಕರಡಿ ಓಡಾಡುತ್ತಿರುವುದು ಕಂಡು ಬಂದಿದ್ದು, ಭಕ್ತರಲ್ಲಿ ಭೀತಿ ಹುಟ್ಟಿಸಿದೆ. ಈಗಾಗಲೇ ನಡಿಗೆ ಮಾರ್ಗದಲ್ಲಿ ಕೆಲವು ನಿಯಮಗಳನ್ನು ಅಳವಡಿಸಲಾಗಿದೆ.

ತಿರುಮಲಕ್ಕೆ ಕಾಲ್ನಡಿಗೆಯಲ್ಲಿ ತೆರಳುವ ಭಕ್ತರ ಸುರಕ್ಷತೆಗಾಗಿ ಟಿಟಿಡಿ ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದೆ. ರಾತ್ರಿ 10 ಗಂಟೆಯ ನಂತರ ಅಲಿಪಿರಿ ನಡಿಗೆ ಮಾರ್ಗದಲ್ಲಿ ಭಕ್ತರಿಗೆ ಪ್ರವೇಶವಿಲ್ಲ. ಬೆಳಿಗ್ಗೆ 6 ಗಂಟೆಯ ನಂತರವೇ ಪಾದಯಾತ್ರೆಗೆ ಅವಕಾಶ ಕಲ್ಪಿಸಲಾಗಿದೆ.
ಅಲ್ಲದೆ, ಮಧ್ಯಾಹ್ನ 2 ಗಂಟೆಯ ನಂತರ 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ವಾಕ್ವೇನಲ್ಲಿ ಅನುಮತಿಸಲಾಗುವುದಿಲ್ಲ. ಅಲಿಪಿರಿ ಜೊತೆಗೆ ತಿರುಮಲಕ್ಕೆ ಹೋಗುವ ಭಕ್ತರು ಶ್ರೀವಾರಿ ಮೆಟ್ಟಿಲು ಮಾರ್ಗದಲ್ಲಿ ಗುಂಪು ಗುಂಪಾಗಿ ನಡೆದುಕೊಂಡು ಹೋಗಬೇಕು ಎಂದು ಟಿಟಿಡಿ ಸೂಚಿಸಿದೆ. ಇಂತಹ ಸ್ಥಳಗಳಲ್ಲಿ ಕೆಲ ಕಾವಲುಗಾರರನ್ನೂ ನೇಮಿಸಲಾಗಿದೆ.
ತಿರುಪತಿಯಲ್ಲಿ ಹತ್ತು ದಿನದ ವೈಕುಂಠ ದ್ವಾರ ದರ್ಶನ ಆರಂಭವಾಗಿದೆ. ಇದಕ್ಕಾಗಿ ಭಕ್ತ ಸಾಗರವೇ ತಿರುಪತಿಗೆ ಭೇಟಿ ನೀಡುತ್ತಿದೆ. ಜನವರಿ 2ರವರೆಗೆ ವೈಕುಂಠ ದ್ವಾರ ದರ್ಶನ ಇರಲಿದ್ದು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ತಿರುಮಲಕ್ಕೆ ತೆರಳುವ ಮೂಲಕ ತಿಮ್ಮಪ್ಪನ ದರ್ಶನ ಪಡೆಯುತ್ತಿದ್ದಾರೆ. ಈ ನಡುವೆ ಕಾಡು ಪ್ರಾಣಿಗಳು ಭಕ್ತರಲ್ಲಿ ಭೀತಿಯನ್ನು ಹುಟ್ಟಿಸಿವೆ. ಇದರಿಂದ ಟಿಟಿಡಿ ಭಕ್ತರಿಗೆ ಎಚ್ಚರಿಕೆಯಿಂದರಿಲು ಸೂಚಿಸಿದ್ದು ಕೆಲ ಸ್ಥಳಗಳಲ್ಲಿ ಕಾವಲುಗಾರರನ್ನೂ ನೇಮಿಸಿದೆ.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
War Updates: ಇರಾನ್ಗೆ ಟ್ರಂಪ್ ವಾರ್ನಿಂಗ್: ತೈಲ ಮಾರ್ಗ ಬಂದ್ ಮಾಡಿದರೆ ದೇಶವೇ ಸರ್ವನಾಶ, ಇಂದಿನ ಪ್ರಮುಖಾಂಶಗಳು -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ












Click it and Unblock the Notifications