Tirupati News: ಕಾಲ್ನಡಿಗೆಯಲ್ಲಿ ತಿರುಮಲಕ್ಕೆ ತೆರಳುವ ಭಕ್ತರ ಸುರಕ್ಷತೆಗೆ ಒತ್ತು ನೀಡಿದ ಟಿಟಿಡಿ.. ಇನ್ಮುಂದೆ ಈ ಸಮಸ್ಯೆ ಇರಲ್ಲ!
ತಿರುಮಲಕ್ಕೆ ನಿತ್ಯವೂ ಸಹಸ್ರಾರು ಭಕ್ತರು ಭೇಟಿ ನೀಡುತ್ತಾರೆ. ಬಹುತೇಕರು ಪಾದಚಾರಿ ಮಾರ್ಗದಲ್ಲಿಯೇ ಬೆಟ್ಟಕ್ಕೆ ತೆರಳುತ್ತಾರೆ. ಆದರೆ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುವ ಭಕ್ತರಿಗೆ ಕಾಡುಪ್ರಾಣಿಗಳ ದಾಳಿ ಭೀತಿ ಹೆಚ್ಚಾಗಿದೆ. ಹೀಗಾಗಿ ಅಲಿಪಿರಿ ಮತ್ತು ಶ್ರೀವಾರಿ ಮೆಟ್ಟು ಪಾದಚಾರಿ ಮಾರ್ಗದಲ್ಲಿ ಶ್ರೀವಾರಿ ದರ್ಶನಕ್ಕೆ ತೆರಳುವ ಭಕ್ತರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲು ಟಿಟಿಡಿ ನಿರ್ಧರಿಸಿದೆ.
ಈಗಿರುವ ಟ್ರ್ಯಾಪ್ ಕ್ಯಾಮೆರಾಗಳ ಹೊರತಾಗಿ ಚಿರತೆ ಮತ್ತಿತರ ಪ್ರಾಣಿಗಳ ಚಲನವಲನದ ಮೇಲೆ ನಿಗಾ ಇಡಲು ಹೆಚ್ಚಿನ ಟ್ರ್ಯಾಪ್ ಕ್ಯಾಮೆರಾಗಳನ್ನು ಅಳವಡಿಸಲು ಟಿಟಿಡಿ ಆದೇಶಿಸಿದೆ. ಈ ಬಗ್ಗೆ ಸರ್ಕಾರಿ ಅರಣ್ಯ ಅಧಿಕಾರಿಗಳು, ಟಿಟಿಡಿ ಅರಣ್ಯ ಸಿಬ್ಬಂದಿ, ಇಂಜಿನಿಯರಿಂಗ್ ಮತ್ತು ಭದ್ರತಾ ಇಲಾಖೆಗಳೊಂದಿಗೆ ಭದ್ರತಾ ಸಮಸ್ಯೆಗಳ ಕುರಿತು ಟಿಟಿಡಿ ಇಒ ಜಯ್ ಶ್ಯಾಮಲಾ ರಾವ್ ಚರ್ಚಿಸಿ ಆದೇಶ ನೀಡಿದ್ದಾರೆ.

ಹೀಗಾಗಿ ಕಾಲ್ನಡಿಗೆಯಲ್ಲಿ ಬೆಟ್ಟಕ್ಕೆ ತೆರಳುವ ಭಕ್ತರಿಗೆ ಇದರಿಂದ ಅನುಕೂಲವಾಗಲಿದೆ. ನಿರ್ಭಯದಿಂದ ಭಕ್ತರು ಶ್ರೀವಾರಿ ದರ್ಶನವನ್ನು ಪಡೆಯಬಹುದಾಗಿದೆ. ಅಲಿಪಿರಿ ನಡಿಗೆದಾರಿಯಲ್ಲಿ ಅದರಲ್ಲೂ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದಿಂದ ಏಳನೇ ಮೈಲಿವರೆಗೆ ಪ್ರಾಣಿಗಳ ಚಲನವಲನ ಹೆಚ್ಚಾಗಿರುತ್ತದೆ. ಈ ಚಲನವಲನಗಳು ನಿಯಂತ್ರಣ ಕೊಠಡಿಗೆ ಸದಾ ಗೊತ್ತಾಗುವಂತೆ ಸಿಗ್ನಲಿಂಗ್ ವ್ಯವಸ್ಥೆ ಸುಧಾರಿಸಲು ಕ್ರಮಕೈಗೊಳ್ಳುವಂತೆ ಇಂಜಿನಿಯರಿಂಗ್ ಅಧಿಕಾರಿಗಳಿಗೆ ಇಒ ಶ್ಯಾಮಲಾ ರಾವ್ ಆದೇಶಿಸಿದ್ದಾರೆ.
ಮತ್ತೊಂದೆಡೆ ಪ್ರಾಣಿಗಳ ಚಲನವಲನದ ಬಗ್ಗೆ ಭದ್ರತಾ ಇಲಾಖೆಗೆ ಸೂಚನೆ ನೀಡಿ ಭಕ್ತರಿಗೆ ಎಚ್ಚರಿಕೆ ನೀಡಲು ಸೂಚಿಸಲಾಗಿದೆ. ಈ ಮೂಲಕ ಕಾಲ್ನಡಿಗೆಯಲ್ಲಿ ಭಕ್ತರ ಸುರಕ್ಷತೆಗೆ ಸಂಬಂಧಿಸಿದಂತೆ ಟಿಟಿಡಿ ಕ್ರಮ ಕೈಗೊಂಡಿದೆ.

ಅಲ್ಲದೆ ಪಾದಚಾರಿ ಮಾರ್ಗವನ್ನು ಪರಿಶೀಲನೆಗೆ ಜಂಟಿ ಸಮಿತಿಯೊಂದನ್ನು ರಚಿಸಲಾಗಿದೆ. ಅಲಿಪಿರಿ ಮತ್ತು ಶ್ರೀವಾರಿ ಮೆಟ್ಟು ಪಾದಚಾರಿ ಮಾರ್ಗಗಳಲ್ಲಿ ಭಕ್ತಾದಿಗಳ ಸಂಖ್ಯೆ ಕಡಿಮೆ ಇರುವಾಗ ಹೆಚ್ಚು ಗಮನಹರಿಸುವಂತೆ ಇಒ ಸೂಚಿಸಿದ್ದಾರೆ.
ಯಾವ ಪ್ರದೇಶದಲ್ಲಿ ಚಿರತೆಗಳು ಹೆಚ್ಚು ಓಡಾಡುತ್ತವೆ ಎಂಬ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ಇಒ ಹಾಗೂ ಇತರ ಅಧಿಕಾರಿಗಳಿಗೆ ಪಿಪಿಟಿ ಮೂಲಕ ಮಾಹಿತಿ ನೀಡಿದರು. ಇಂತಹ ಸ್ಥಳಗಳಲ್ಲಿ ಕಾಲ್ನಡಿಗೆ ಮಾರ್ಗದಲ್ಲಿ ತೆರಳುವ ಭಕ್ತರು ನಿಗದಿತ ಸಮಯಕ್ಕೆ ತಿರುಮಲ ತಲುಪಬೇಕು. ಆ ಸಮಯದಲ್ಲಿ ಭಕ್ತರ ಮೇಲೆ ಅರಣ್ಯ ಅಧಿಕಾರಿಗಳು ನಿಗಾ ಇಡಬೇಕು ಎಂದು ಇಒ ಸೂಚಿಸಿದ್ದಾರೆ.

ಸಿದ್ಧೇಶ್ವರ ಸ್ವಾಮಿಯ ವಾರ್ಷಿಕ ಬ್ರಹ್ಮೋತ್ಸವ
ತಾಳ್ಳಪಾಕ ಶ್ರೀ ಸಿದ್ಧೇಶ್ವರಸ್ವಾಮಿಯ ವಾರ್ಷಿಕ ಬ್ರಹ್ಮೋತ್ಸವ ಜುಲೈ 17 ರಿಂದ 25 ರವರೆಗೆ ವಿಜೃಂಭಣೆಯಿಂದ ನಡೆಯಲಿದೆ. ಬ್ರಹ್ಮೋತ್ಸವಕ್ಕೆ ಜುಲೈ 16 ರಂದು ಅಂಕುರಾರ್ಪಣೆ ಮಾಡಲಾಗುತ್ತದೆ. ಜುಲೈ 17ರಂದು ಬೆಳಗ್ಗೆ 6.28ಕ್ಕೆ ಪೂಜೆಯೊಂದಿಗೆ ಬ್ರಹ್ಮೊತ್ಸವ ಆರಂಭವಾಗಲಿದೆ. ಸಂಜೆ ಹಂಸವಾಹನ ಸೇವೆ ನಡೆಯಲಿದೆ. ಜುಲೈ 18, 19, 20 ಮತ್ತು 21 ರಂದು ಬೆಳಗ್ಗೆ ಪಲ್ಲಕ್ಕಿ ಉತ್ಸವ ನಡೆಯಲಿದೆ.
ಅದೇ ರೀತಿ ಜು.18ರಂದು ಸಂಜೆ ಚಂದ್ರಪ್ರಭಾ ವಾಹನ, 19ರಂದು ಸಂಜೆ ಚಿನ್ನಶೇಷ ವಾಹನ, 20ರಂದು ಸಂಜೆ ಸಿಂಹವಾಹನ, 21ರಂದು ಸಂಜೆ ನಂದಿವಾಹನಸೇವೆ ನಡೆಯಲಿದೆ. ಜುಲೈ 22ರಂದು ಸಂಜೆ 6 ರಿಂದ 7 ರವರೆಗೆ ಆರ್ಜಿತ ಕಲ್ಯಾಣೋತ್ಸವ ನಡೆಯಲಿದೆ. ಇಬ್ಬರು 300 ರೂಪಾಯಿ ಪಾವತಿಸಿ ಈ ಕಲ್ಯಾಣೋತ್ಸವದಲ್ಲಿ ಭಾಗವಹಿಸಬಹುದು. ಈ ಭಕ್ತರಿಗೆ ಉತ್ತರಿಯಂ, ರವಿಕೆ, ಲಡ್ಡು, ಅಪ್ಪಂ ಮತ್ತು ಅನ್ನಪ್ರಸಾದವನ್ನು ಉಡುಗೊರೆಯಾಗಿ ನೀಡಲಾಗುತ್ತದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications