Tirumala: ಮಳೆಗಾಲದಲ್ಲಿ ತಿರುಪತಿಯಲ್ಲಿ ನೀರಿನ ಸಮಸ್ಯೆ... 6 ದಿನಕ್ಕೊಮ್ಮೆ ನೀರು ಪೂರೈಕೆ!
ದೇಶದ ಹಲವೆಡೆ ಅಧಿಕ ಮಳೆಯಾಗುತ್ತಿದ್ದು, ಭೂಕುಸಿತ ಹಾಗೂ ಪ್ರವಾಹದಂತಹ ಘಟನೆಗಳು ವರದಿಯಾಗುತ್ತಿವೆ. ಆದರೆ ತಿರುಮಲದಲ್ಲಿ ನೀರಿನ ಸಮಸ್ಯೆ ಎದುರಾಗಿದ್ದು ಅಚ್ಚರಿಯನ್ನುಂಟುಮಾಡಿದೆ. ಹೀಗಾಗಿ ನೀರನ್ನು ಮಿತವಾಗಿ ಬಳಕೆ ಮಾಡುವಂತೆ ಟಿಟಿಡಿ ಸೂಚನೆ ನೀಡಿದೆ.
ಹೌದು... ತಿರುಪತಿಯ ಜಲ ಮೂಲಗಳಲ್ಲಿ ನೀರಿನ ಅಭಾವ ಕಂಡು ಬಂದಿದ್ದು, ಅದನ್ನು ಸರಿದೂಗಿಸಲು ಟಿಟಿಡಿ ಈ ನಿರ್ಧಾರ ತೆಗೆದುಕೊಂಡಿದೆ. ತಿರುಪತಿಗೆ ನೀರು ಪೂರೈಕೆ ಮಾಡುವ ಆಣೆಕಟ್ಟೆಗಳಲ್ಲಿ ಹೆಚ್ಚಿನ ಪ್ರಮಾಣದ ನೀರು ಲಭ್ಯವಿಲ್ಲದ ಕಾರಣ ನೀರಿನ ಸಮಸ್ಯೆ ಎದುರಾಗಿದೆ. ಹೀಗಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಮಂಡಳಿಯು ತಿರುಮಲ ಬೆಟ್ಟದಲ್ಲಿ ನೀರನ್ನು ಮಿತವಾಗಿ ಬಳಸುವಂತೆ ಭಕ್ತರು ಮತ್ತು ಸ್ಥಳೀಯರಿಗೆ ತಿಳಿಸಿದೆ. ಅಲ್ಲದೆ ದೇವಸ್ಥಾನದ ಪ್ರದೇಶದಲ್ಲಿ 6 ದಿನಕ್ಕೊಮ್ಮೆ ನೀರು ಪೂರೈಕೆಯಾಗಲಿದೆ ಎಂದು ಟಿಟಿಡಿ ತಿಳಿಸಿದೆ.

6 ದಿನಕ್ಕೊಮ್ಮೆ ನೀರು ಪೂರೈಕೆ
ಶ್ರೀವಾರಿ ದೇವಸ್ಥಾನದ ಸುತ್ತಲು ಪ್ರದೇಶಗಳು ಹಾಗೂ ದೇವಸ್ಥಾನಕ್ಕೆ ಬರುವ ಭಕ್ತರು ಈ ಬಗ್ಗೆ ಗಮನ ಹರಿಸಬೇಕು ಎಂದು ಟಿಟಿಡಿ ತಿಳಿಸಿದೆ. ಜೊತೆಗೆ ಇನ್ಮುಂದೆ ವ್ಯಾಪಾರ ಸಂಕೀರ್ಣಗಳಿಗೆ 24 ಗಂಟೆ ನೀರು ಪೂರೈಕೆಯಾಗುವುದಿಲ್ಲ, ಬದಲಿಗೆ ಬೆಳಗ್ಗೆ 4 ಗಂಟೆ ಹಾಗೂ ಸಂಜೆ 4 ಗಂಟೆ ಮಾತ್ರ ನೀರು ಪೂರೈಕೆ ಮಾಡಲಾಗುವುದು. ಬೆಳಗ್ಗೆ 6ರಿಂದ 10ರವರೆಗೆ ಹಾಗೂ ಮಧ್ಯಾಹ್ನ 3ರಿಂದ ಸಂಜೆ 7ರವರೆಗೆ ದಿನದ 8 ಗಂಟೆ ಮಾತ್ರ ವ್ಯಾಪಾರ ಸಂಕೀರ್ಣಗಳಿಗೆ ನೀರು ಪೂರೈಕೆ ಮಾಡಲಾಗುವುದು ಎಂದು ಹೇಳಲಾಗಿದೆ. ಆಗಸ್ಟ್ 25ರಿಂದ ಈ ನಿಯಮಾವಳಿಗಳು ಜಾರಿಗೆ ಬರಲಿವೆ ಎಂದು ಟಿಟಿಡಿ ಸ್ಪಷ್ಟಪಡಿಸಿದೆ.
ಒಂದು ವೇಳೆ ವ್ಯಾಪಾರಸ್ಥರಿಗೆ ಹೆಚ್ಚುವರಿ ನೀರು ಬೇಕಿದ್ದರೆ ಟ್ಯಾಂಕರ್ ಮೂಲಕ ನೀರು ತರಿಸಿಕೊಳ್ಳುವಂತೆ ಟಿಟಿಡಿ ಸೂಚಿಸಿದೆ. ದಾನಿಗಳ ನೆರವಿನಿಂದ ತಿರುಮಲ ಬೆಟ್ಟದಲ್ಲಿ ನಿರ್ಮಿಸುತ್ತಿರುವ ಕಾಟೇಜ್ಗಳಿಗೆ ನೀರು ಪೂರೈಸಲು ಸಾಧ್ಯವಾಗುತ್ತಿಲ್ಲ ಎಂದು ಟಿಟಿಡಿ ಹೇಳಿದೆ. ಹೀಗಾಗಿ ನಿರ್ಮಾಣ ಕಾಮಗಾರಿಗೆ ಟ್ಯಾಂಕರ್ ಮೂಲಕ ನೀರು ತರಬೇಕು. ಇದಕ್ಕಾಗಿ ವಿಜಿಲೆನ್ಸ್ ಇಲಾಖೆಯಿಂದ ಅನುಮತಿ ಪಡೆಯಬೇಕು ಎಂದು ಸ್ಪಷ್ಟಪಡಿಸಿದೆ.

ಸ್ಥಳೀಯರಿಗೆ, ಭಕ್ತರಿಗೆ ಟಿಟಿಡಿ ಮನವಿ
ಮುಂದಿನ ದಿನಗಳಲ್ಲಿ ತಿರುಮಲದಲ್ಲಿರುವ ಸ್ಥಳೀಯರು ಮತ್ತು ಯಾತ್ರಾರ್ಥಿಗಳ ನೀರಿನ ಅಗತ್ಯತೆಗಳನ್ನು ಪೂರೈಸಲು ತಿರುಮಲಕ್ಕೆ ಬರುವ ಪ್ರವಾಸಿಗರ ನೀರಿನ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಟಿಟಿಡಿ ವಿವರಿಸಿದೆ. ಭಕ್ತರು ಮತ್ತು ಸ್ಥಳೀಯರು ನೀರನ್ನು ಅನಗತ್ಯವಾಗಿ ಪೋಲು ಮಾಡದೆ ಮಿತವಾಗಿ ಬಳಸುವಂತೆ ಟಿಟಿಡಿ ಮನವಿ ಮಾಡಿದೆ.
ತಿರುಮಲದಲ್ಲಿ ಈ ವರ್ಷ ಮಳೆಯ ಕೊರತೆಯಿಂದಾಗಿ ಬೆಟ್ಟದ ಮೇಲಿನ 5 ಪ್ರಮುಖ ಅಣೆಕಟ್ಟುಗಳಲ್ಲಿ ನೀರಿನ ಸಂಪನ್ಮೂಲ ಕಡಿಮೆಯಾಗಿದೆ ಎಂದು ಟಿಟಿಡಿ ತಿಳಿಸಿದೆ. ಇದಲ್ಲದೆ ವಾರ್ಷಿಕ ಬ್ರಹ್ಮೋತ್ಸವವು ಅಕ್ಟೋಬರ್ 4 ರಿಂದ 12 ರವರೆಗೆ ನಡೆಯಲಿದೆ. ಬ್ರಹ್ಮೋತ್ಸವದ ಸಂದರ್ಭದಲ್ಲಿ ಲಕ್ಷಾಂತರ ಭಕ್ತರು ತಿರುಮಲಕ್ಕೆ ಆಗಮಿಸುತ್ತಾರೆ. ಅವರ ಹಿತದೃಷ್ಟಿಯಿಂದ ನೀರು ವ್ಯರ್ಥವಾಗುವುದನ್ನು ತಡೆಯಲು ಮತ್ತು ನೀರಿನ ಬಳಕೆಯನ್ನು ನಿಯಂತ್ರಿಸಲು ಕೆಲವು ಕ್ರಮಗಳನ್ನು ತೆಗೆದುಕೊಳ್ಳಲು ಟಿಟಿಡಿ ನಿರ್ಧರಿಸಿದೆ. ಇದಕ್ಕೆ ಭಕ್ತರು ಹಾಗೂ ಸ್ಥಳೀಯರು ಸಹಕರಿಸಬೇಕಾಗಿ ಕೋರಲಾಗಿದೆ.

ತಿರುಪತಿಯಲ್ಲಿ ಲಭ್ಯವಿರುವ ನೀರು
ತಿರುಮಲದಲ್ಲಿರುವ 5 ಪ್ರಮುಖ ಜಲಾಶಯಗಳಲ್ಲಿ ಸದ್ಯ ಲಭ್ಯವಿರುವ ನೀರು ಮುಂದಿನ 130 ದಿನಗಳಿಗೆ ಮಾತ್ರ ಸಾಕಾಗುತ್ತದೆ ಎಂದು ಟಿಟಿಡಿ ತಿಳಿಸಿದೆ. ತಿರುಮಲದಲ್ಲಿ ಪ್ರತಿನಿತ್ಯ 43 ಲಕ್ಷ ಗ್ಯಾಲನ್ ನೀರು ಬಳಕೆ ಆಗುತ್ತಿದ್ದು ಅದರಲ್ಲಿ 18 ಲಕ್ಷ ಗ್ಯಾಲನ್ ನೀರನ್ನು ತಿರುಮಲ ಅಣೆಕಟ್ಟುಗಳಿಂದ ಸಂಗ್ರಹಿಸಲಾಗುತ್ತದೆ ಮತ್ತು ಉಳಿದ ನೀರನ್ನು ತಿರುಪತಿಯ ಕಲ್ಯಾಣಿ ಅಣೆಕಟ್ಟಿನಿಂದ ಸಂಗ್ರಹಿಸಲಾಗುತ್ತದೆ.
ತಿರುಮಲದಲ್ಲಿರುವ ಕುಮಾರಧಾರ ಮತ್ತು ಕುಮಲಧಾರ ಅವಳಿ ಜಲಾಶಯಗಳ ಜೊತೆಗೆ ಗೋಗರ್ಭಂ, ಆಕಾಶ ಗಂಗಾ, ಪಾಪ ವಿನಾಶನಂ ಜಲಾಶಯಗಳ ಒಟ್ಟು ನೀರಿನ ಸಂಗ್ರಹ ಸಾಮರ್ಥ್ಯವು 14,304 ಲಕ್ಷ ಗ್ಯಾಲನ್ಗಳಾಗಿದ್ದು, ಪ್ರಸ್ತುತ ತಿರುಮಲದಲ್ಲಿ 5,800 ಲಕ್ಷ ಗ್ಯಾಲನ್ಗಳಷ್ಟು ನೀರು ಮಾತ್ರ ಲಭ್ಯವಿದೆ ಎಂದು ಟಿಟಿಡಿ ತಿಳಿಸಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications