Tirumala Tirupati: ಶ್ರೀವಾರಿ ವೈಕುಂಠ ದರ್ಶನಕ್ಕೆ ಟಿಕೆಟ್ ಸಿಗದ ಭಕ್ತರಿಗೆ ಸಂತಸದ ಸುದ್ದಿ
ವೈಕುಂಠ ಏಕಾದಶಿಗೆ ಆನ್ಲೈನ್ನಲ್ಲಿ ಟಿಕೆಟ್ ಸಿಗದ ಭಕ್ತರಿಗೆ ಟಿಟಿಡಿ ಸಿಹಿಸುದ್ದಿ ನೀಡಿದೆ. ಡಿಸೆಂಬರ್ 23 ರಿಂದ ಜನವರಿ 1 ರವರೆಗೆ 4.25 ಲಕ್ಷ ಟಿಕೆಟ್ಗಳನ್ನು ವಿತರಿಸಲಾಗುವುದು ಎಂದು ಟಿಟಿಡಿ ಘೋಷಣೆ ಮಾಡಿದೆ. ಒಂದೇ ಬಾರಿಗೆ ಈ ಟಿಕೆಟ್ ನೀಡಲು ಆರಂಭಿಸಿ ಟಿಕೆಟ್ ಪಡೆದವರಿಗೆ 2-3 ದಿನಗಳಲ್ಲಿ ದರ್ಶನ ಪೂರ್ಣಗೊಳಿಸಲಾಗುವುದು ಎಂದು ಟಿಟಿಡಿ ಹೇಳಿದೆ.
ಹೀಗೆ ಮಾಡಿದರೆ ಭಕ್ತರು ಸರತಿ ಸಾಲಿನಲ್ಲಿ ಕಾಯುವ ಅವಶ್ಯಕತೆ ಇರುವುದಿಲ್ಲ ಎಂದು ಟಿಟಿಡಿ ಹೇಳಿದೆ. ಟಿಕೆಟ್ ಪಡೆದವರಿಗೆ ಮರು ದಿನ ದೇವರ ದರ್ಶನಕ್ಕೆ ಅವಕಾಶ ಕಲ್ಪಸಿ, ಹಾಗೆಯೇ ಎರಡನೇ ಆಯ್ಕೆಯಡಿಯಲ್ಲಿ ಆ ದಿನ (ಒಂದು ದಿನ ಮುಂಚಿತವಾಗಿ) ಟಿಕೆಟ್ ನೀಡಲು ಯೋಚಿಸಲಾಗಿದೆ.

ವಿಚಿತ್ರವೆಂದರೆ ವಾರಾಂತ್ಯದಲ್ಲಿ ಬೆಟ್ಟದಲ್ಲಿ ಭಕ್ತರ ದಂಡು ಕಡಿಮೆಯಾಗಿದೆ. ಹೀಗಾಗಿ ಇಂದು ಭಕ್ತರಿಗೆ ನೇರವಾಗಿ ಸರತಿ ಸಾಲಿನಲ್ಲಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಶುಕ್ರವಾರ 56,950 ಮಂದಿ ಸ್ವಾಮಿಯ ದರ್ಶನ ಪಡೆದಿದ್ದಾರೆ. ಸ್ವಾಮಿಗೆ ಕಾಣಿಕೆ ರೂಪದಲ್ಲಿ ಹುಂಡಿಯಲ್ಲಿ 3.75 ಕೋಟಿ ರೂಪಾಯಿ ಸಂಗ್ರಹವಾಗಿದೆ. ಟೈಮ್ ಸ್ಲಾಟ್ ಟಿಕೆಟ್ ಹೊಂದಿರುವ ಭಕ್ತರು ಸಮಯಕ್ಕೆ ಸರಿಯಾಗಿ ದರ್ಶನ ಪಡೆಯುತ್ತಿದ್ದಾರೆ. ದರ್ಶನ ಟಿಕೆಟ್ ಇಲ್ಲದ ಭಕ್ತರು 8 ಗಂಟೆಯೊಳಗೆ ದರ್ಶನ ಪಡೆಯುತ್ತಿದ್ದಾರೆ. ವಿಶೇಷ ಪ್ರವೇಶ ದರ್ಶನ ಟಿಕೆಟ್ ಹೊಂದಿರುವ ಭಕ್ತರಿಗೆ 1 ಗಂಟೆಯಿಂದ 3 ಗಂಟೆಗಳಲ್ಲಿ ದರ್ಶನ ಪೂರ್ಣಗೊಳ್ಳುತ್ತಿದೆ.
ವೈಕುಂಠ ಏಕಾದಶಿ ಹಬ್ಬದ ಪ್ರಯುಕ್ತ ಈ ವರ್ಷ ಡಿಸೆಂಬರ್ 23 ರಿಂದ ಜನವರಿ 1 ರವರೆಗೆ 10 ದಿನಗಳ ಕಾಲ ಶ್ರೀವಾರಿ ದೇವಸ್ಥಾನದ ವೈಕುಂಠ ದ್ವಾರದ ದರ್ಶನಕ್ಕೆ ಭಕ್ತರಿಗೆ ವ್ಯಾಪಕ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಟಿಟಿಡಿ ಈವೋ ಧರ್ಮ ರೆಡ್ಡಿ ತಿಳಿಸಿದ್ದಾರೆ. ನವೆಂಬರ್ ತಿಂಗಳಲ್ಲಿ 19.73 ಲಕ್ಷ ಜನರು ಸ್ವಾಮಿಯ ದರ್ಶನ ಪಡೆದಿದ್ದಾರೆ. 97.47 ಲಕ್ಷ ಲಡ್ಡು ಮಾರಾಟವಾಗಿದೆ ಎಂದು ಟಿಟಿಡಿ ತಿಳಿಸಿದೆ. ಜೊತೆಗೆ 36.50 ಲಕ್ಷ ಮಂದಿ ಅನ್ನಪ್ರಸಾದ ಸ್ವೀಕರಿಸಿದ್ದಾರೆ.
ವೈಕುಂಠ ದರ್ಶನದ ಟಿಕೆಟ್ಗಳನ್ನು ಈಗಾಗಲೇ ಆನ್ಲೈನ್ನಲ್ಲಿ ಬಿಡುಗಡೆ ಮಾಡಲಾಗಿದೆ. ತಿರುಪತಿಯ ಕೌಂಟರ್ಗಳಲ್ಲಿ ಆಫ್ಲೈನ್ ಟಿಕೆಟ್ಗಳನ್ನು ಒದಗಿಸಲಾಗುವುದು. ಇದಲ್ಲದೆ, ವೈಕುಂಠ ದ್ವಾರ ದರ್ಶನದ ಸಮಯದಲ್ಲಿ ದರ್ಶನ ಟಿಕೆಟ್ ಹೊಂದಿರುವ ಭಕ್ತರಿಗೆ ಮಾತ್ರ ತಿರುಮಲ ಶ್ರೀವರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ.
ಹೀಗಾಗಿ ಡಿಸೆಂಬರ್ 22 ರಿಂದ 24 ರವರೆಗೆ ಕಲ್ಯಾಣೋತ್ಸವ, ಊಂಜಾಲ್ ಸೇವೆ ಮತ್ತು ಆರ್ಜಿತ ಬ್ರಹ್ಮೋತ್ಸವದ ಸೇವೆಗಳನ್ನು ಡಿಸೆಂಬರ್ 31 ಮತ್ತು ಜನವರಿ 1 ರಂದು ರದ್ದುಗೊಳಿಸಲಾಗಿದೆ. ಈ ಸೇವೆಗಳನ್ನು ಡಿಸೆಂಬರ್ 25 ರಿಂದ 30 ರವರೆಗೆ ಪ್ರತ್ಯೇಕವಾಗಿ ನಡೆಸಲಾಗುವುದು. ಡಿಸೆಂಬರ್ 23 ರಿಂದ ಜನವರಿ 1 ರವರೆಗೆ ಸಹಸ್ರದೀಪಾಲಂಕರ ಸೇವೆಯನ್ನು ಖಾಸಗಿಯಾಗಿ ನಡೆಸಲಾಗುವುದು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications