ಇಂದು ಮಧ್ಯಾಹ್ನದಿಂದ ತಿರುಪತಿ ದೇವಾಲಯ ಬಂದ್!
ಆಗಸ್ಟ್ ಏಳರಂದು ಸಂಜೆ 4.30ರಿಂದ ಆಗಸ್ಟ್ ಎಂಟು ಬೆಳಗ್ಗಿನ ಜಾವ 2ಗಂಟೆಯವರೆಗೆ ತಿರುಪತಿ ವೆಂಕಟೇಶ್ವರ ದೇವಾಲಯ ಬಂದ್ ಆಗಲಿದ್ದು,ಭಕ್ತಾದಿಗಳಿಗೆ ಸುಮಾರು ಹತ್ತು ತಾಸು ಪ್ರವೇಶವಿರುವುದಿಲ್ಲ ಎಂದು ಟಿಟಿಡಿ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ
ತಿರುಪತಿ, ಜುಲೈ 27: ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಾಲಯ ಖಗ್ರಾಸ ಚಂದ್ರಗ್ರಹಣದ ದಿನವಾದ ಸೋಮವಾರ (ಆಗಸ್ಟ್ 7) ರಂದು ಬಂದ್ ಆಗಲಿದೆ ಎಂದು ಟಿಟಿಡಿ ಆಡಳಿತ ಮಂಡಳಿ ತಿಳಿಸಿದೆ.
ಆಗಸ್ಟ್ ಏಳರಂದು ಸಂಜೆ 4.30 ರಿಂದ ಆಗಸ್ಟ್ ಎಂಟು ಬೆಳಗ್ಗಿನ ಜಾವ 2ಗಂಟೆಯವರೆಗೆ ದೇವಾಲಯ ಬಂದ್ ಆಗಲಿದ್ದು, ಭಕ್ತಾದಿಗಳಿಗೆ ಸುಮಾರು ಹತ್ತು ತಾಸು ಪ್ರವೇಶವಿರುವುದಿಲ್ಲ.

ಆ 7ರಂದು ರಾತ್ರಿ 10.52 ರಿಂದ ಆಗಸ್ಟ್ 8ರ 00.48ರ ಅವಧಿಯಲ್ಲಿ ಚಂದ್ರಗ್ರಹಣ ಸಂಭವಿಸಲಿದೆ. ಗ್ರಹಣ ಶುರುವಾಗುವ ಆರು ಗಂಟೆಯ ಮೊದಲು ದೇವಾಲಯ ಬಂದ್ ಆಗಲಿದೆ.
ಗ್ರಹಣ ಮುಗಿದ ನಂತರ ಗರ್ಭಗುಡಿ ಮತ್ತು ದೇವಾಲಯದ ಆವರಣದಲ್ಲಿ ಶುದ್ದಿ, ಪುಣ್ಯಾಹವ ನಡೆಸಬೇಕಾಗಿರುವುದರಿಂದ ಆಗಸ್ಟ್ ಎಂಟರಂದು ಬೆಳಗ್ಗಿನ ಜಾವ ಎರಡು ಗಂಟೆಯ ನಂತರ ದೇವಾಲಯದ ಬಾಗಿಲು ತೆರೆಯಲಾಗುವುದು ಎಂದು ಟಿಟಿಡಿ ತಿಳಿಸಿದೆ.
ಸುಪ್ರಭಾತ, ಏಕಾಂತ, ಅಷ್ಟದಳ ಪದ್ಮಾರಾಧಾನ ಸೇವೆ ಎಂದಿನಂತೆ ನಡೆಯಲಿದೆ. ಸಾಮಾನ್ಯ ಸರತಿಯಲ್ಲಿ ಬರುವ ಭಕ್ತಾದಿಗಳನ್ನು ಆಗಸ್ಟ್ ಎಂಟರಂದು ಬೆಳಗ್ಗೆ ಏಳು ಗಂಟೆಯ ನಂತರವಷ್ಟೇ ಬಿಡಲಾಗುವುದು ಎಂದು ಟಿಟಿಡಿ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಆಗಸ್ಟ್ 4 ವರಮಹಾಲಕ್ಷ್ಮೀ ವ್ರತ, ಆಗಸ್ಟ್ 5 ಶ್ರಾವಣ ಶನಿವಾರ ಮತ್ತು ಆಗಸ್ಟ್ 7ರಂದು ರಕ್ಷಾಬಂಧನ ಇರುವುದರಿಂದ ದೇವಾಲಯದಲ್ಲಿ ಭಾರೀ ಜನಸಂದಣಿ ಇರುವ ಸಾಧ್ಯತೆಯಿದೆ.
ಹಾಗಾಗಿ, ಭಕ್ತಾದಿಗಳಿಗೆ ಅನಾನುಕೂಲವಾಗದೇ ಇರಲು, ಚಂದ್ರಗ್ರಹಣ ಸಂಭವಿಸುವ ಹತ್ತು ದಿನದ ಮೊದಲೇ ಟಿಟಿಡಿ ಪ್ರಕಟಣೆ ಹೊರಡಿಸಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications