TTD Building Fire Accident: ಟಿಟಿಡಿ ಆಡಳಿತ ಭವನದಲ್ಲಿ ಅಗ್ನಿ ಅವಘಡ.. ಹಲವು ಕಡತಗಳು ಸುಟ್ಟು ಭಸ್ಮ!
ತಿರುಪತಿಯ ಟಿಟಿಡಿ ಆಡಳಿತ ಭವನದಲ್ಲಿ ಶನಿವಾರ ಸಂಜೆ ಅಗ್ನಿ ಅವಘಡ ಸಂಭವಿಸಿದೆ. ಟಿಟಿಡಿ ಆಡಳಿತ ಭವನದ ಇಂಜಿನಿಯರಿಂಗ್ ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಘಟನೆಯಲ್ಲಿ ಹಲವು ಕಡತಗಳು ಸುಟ್ಟು ಕರಕಲಾಗಿವೆ. ತಿರುಮಲ ತಿರುಪತಿ ದೇವಸ್ಥಾನದ ಅಧೀನದಲ್ಲಿರುವ 13 ದೇವಸ್ಥಾನಗಳ ದಾಖಲೆಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿರುವುದು ಪ್ರಾಥಮಿಕವಾಗಿ ದೃಢಪಟ್ಟಿದೆ.
ನೌಕರ ನಾಗಾರ್ಜುನ ಅವರು ಅಗ್ನಿ ಅವಘಡದ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬರುವಷ್ಟರಲ್ಲಿ ಬೆಂಕಿಯನ್ನು ಹತೋಟಿಗೆ ತರಲಾಗಿತ್ತು. ಆದರೆ ಅಷ್ಟರಲ್ಲಾಗಲೆ ದಾಖಲೆಗಳು ಸುಟ್ಟು ಕರಕಲಾಗಿದ್ದವು ಎಂದು ಹೇಳಲಾಗುತ್ತಿದೆ. ಟಿಟಿಡಿ ಆಡಳಿತ ಭವನದಲ್ಲಿ ನಡೆದ ಅಗ್ನಿ ಅವಘಡದ ಕುರಿತು ಸಹಾಯಕ ಎಂಜಿನಿಯರ್ ಭಾಸ್ಕರ್ ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ ಅಲಿಪಿರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಅಲ್ಲದೆ ಅಗ್ನಿ ಅವಘಡದಲ್ಲಿ ಟಿಟಿಡಿ ದೇವಸ್ಥಾನಗಳಿಗೆ ಸಂಬಂಧಿಸಿದ ರಸ್ತೆ ನಿರ್ಮಾಣದ ದಾಖಲೆಗಳು ಸುಟ್ಟು ಭಸ್ಮವಾಗಿವೆ. ಅಪಘಾತದಲ್ಲಿ ಕಡತಗಳು ಭಾಗಶಃ ಹಾಳಾಗಿವೆ ಎಂದು ಸಿವಿಎನ್ ಎಸ್ ಒ ಶ್ರೀಧರ್ ತಿಳಿಸಿದ್ದಾರೆ. ಬೆಂಕಿ ಅವಘಡದ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಅಲಿಪಿರಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆಯೇ ಅಥವಾ ಗುಪ್ತ ಸಂಚು ಇದೆಯೇ ಎಂಬ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ಕಡತಗಳು ಸುಟ್ಟು ಕರಕಲಾಗಿರುವ ಹಿನ್ನೆಲೆಯಲ್ಲಿ ತನಿಖೆಯನ್ನು ಮತ್ತಷ್ಟು ಚುರುಕುಗೊಳೀಸಲಾಗಿದೆ.
ಮತ್ತೊಂದೆಡೆ ಕ್ಷೇತ್ರಕ್ಕೆ ದಾವಿಸಿರುವ ಪೊಲೀಸ್ ಟೀಂ ಸಾಕ್ಷ್ಯ ಸಂಗ್ರಹಿಸುವ ಕಾರ್ಯದಲ್ಲಿ ನಿರತವಾಗಿದೆ. ತಿರುಪತಿ ಎಸ್ಪಿ ಸುಬ್ಬರಾಯುಡು ಮಾತನಾಡಿ, ಘಟನೆ ಆಕಸ್ಮಿಕವೇ ಅಥವಾ ಸಂಚೆ ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ. ಕಡತಗಳು ಸುಟ್ಟಿರುವ ಬಗ್ಗೆ ತನಿಖೆ ನಡೆಯುತ್ತಿದ್ದು, 25ರಿಂದ 30 ಕಡತಗಳು ಅಲ್ಪಸ್ವಲ್ಪ ಸುಟ್ಟಿರುವುದು ಗೊತ್ತಾಗಿದೆ ಎಂದರು.
ಘಟನೆ ಕುರಿತು ವಿಜಿಲೆನ್ಸ್ ಮತ್ತು ಪೊಲೀಸ್ ಇಲಾಖೆ ತನಿಖೆ ಕೈಗೆತ್ತಿಕೊಂಡಿದೆ. ಅಪಘಾತ ನಡೆದ ಉಪ ಇಇ ಕೊಠಡಿಗೆ ಭೇಟಿ ನೀಡಿದ ಎಸ್ಪಿ, ತನಿಖೆ ಮಾಡಲಾಗುತ್ತಿದೆ ಇನ್ನೂ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಯೋಜನಾ ಆಡಳಿತ ಕಚೇರಿಯಲ್ಲಿ ಕಡತ ಸುಟ್ಟು ಕರಕಲು!
ಮತ್ತೊಂದೆಡೆ ಪೊಲಾವರಂ ಯೋಜನೆಯ ಆಡಳಿತ ಕಚೇರಿಯಲ್ಲೂ ಕಡತಗಳು ಸುಟ್ಟು ಕರಕಲಾಗಿರುವುದು ಸಂಚಲನ ಮೂಡಿಸಿದೆ. ಘಟನೆಯಲ್ಲಿ ಪೋಲಾವರಂ ಎಡ ಮುಖ್ಯ ಕಾಲುವೆಗೆ ಸಂಬಂಧಿಸಿದ ಕಡತಗಳು ಸುಟ್ಟು ಕರಕಲಾಗಿವೆ. ಆದರೆ ಕಚೇರಿಯಲ್ಲಿದ್ದ ಕೆಲ ಅಧಿಕಾರಿಗಳು ಈ ಕಡತಗಳನ್ನು ಸುಟ್ಟು ಹಾಕಿದ್ದಾರೆ ಎಂಬ ಆರೋಪವಿದೆ.
ಪೊಲೀಸರು ಅರ್ಧ ಸುಟ್ಟ ಕಡತಗಳನ್ನು ವಶಪಡಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಘಟನೆಯಲ್ಲಿ ಸುಟ್ಟು ಕರಕಲಾದ ಕಡತಗಳು ಪೊಲಾವರಂ ಯೋಜನೆಯಿಂದ ತೆರವುಗೊಂಡವರಿಗೆ ನೀಡಲಾದ ಪರಿಹಾರಕ್ಕೆ ಸಂಬಂಧಿಸಿದವು ಎಂದು ತಿಳಿದು ಬಂದಿದೆ. ಹೀಗೆ ಹಲವಾರು ದಾಖಲೆಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿದ್ದು ಪೊಲೀಸರು ತನಿಖೆ ನಡೆಸಿದ್ದಾರೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications