Tirumala Brahmotsavam: ತಿರುಮಲ ಬ್ರಹ್ಮೋತ್ಸವ ಚಾಲನೆ- ದಿನಾಂಕ, ಮಾಹಿತಿ, ವಿವರ ಪಡೆಯಿರಿ
ತಿರುಪತಿ, ಸೆಪ್ಟೆಂಬರ್, 18: ತಿರುಪತಿಯಲ್ಲಿ ಇಂದಿನಿಂದ ಬ್ರಹ್ಮೋತ್ಸವ ಆರಂಭವಾಗಿದ್ದು, ಇಂದು ಸಿಎಂ ಜಗನ್ ರೆಡ್ಡಿ ಅವರು ವೆಂಕಟೇಶ್ವರನಿಗೆ ರೇಷ್ಮೆ ವಸ್ತ್ರವನ್ನು ಅರ್ಪಿಸಲಿದ್ದಾರೆ. ಹಾಗಾದರೆ ಈ ಬ್ರಹ್ಮೋತ್ಸವ ಎಲ್ಲಿಯವರೆಗೂ ಇರಲಿದೆ ಹಾಗೂ ಭಕ್ತರ ದರ್ಶನ ವ್ಯವಸ್ಥೆ ಹೇಗಿರಲಿದೆ ಎನ್ನುವ ವಿವರವನ್ನು ಇಲ್ಲಿ ತಿಳಿಯಿರಿ.
ತಿರುಪತಿಯಲ್ಲಿ ಇಂದಿನಿಂದ ಸೆಪ್ಟೆಂಬರ್ 26 ರವರೆಗೆ ಬ್ರಹ್ಮೋತ್ಸವ ನಡೆಯಲಿದ್ದು, ಅಕ್ಟೋಬರ್ 15 ರಿಂದ 23 ರವರೆಗೆ ನವರಾತ್ರಿ ಬ್ರಹ್ಮೋತ್ಸವಗಳು ನಡೆಯುತ್ತವೆ. ಅಲ್ಲದೆ ಇಂದಿನಿಂದ ಸೆಪ್ಟೆಂಬರ್ 26 ರವರೆಗೆ ಅಷ್ಟದಳಪಾದಪದ್ಮಾರಾಧನೆ, ತಿರುಪ್ಪವಾಡ, ಕಲ್ಯಾಣೋತ್ಸವ, ಊಂಜಾಲಸೇವೆ, ಸಹಸ್ರದೀಪಾಲಂಕಾರ ಸೇವೆಗಳನ್ನು ಟಿಟಿಡಿ ರದ್ದುಗೊಳಿಸಿದೆ.

ಸೆಪ್ಟೆಂಬರ್ 21ರ ಗರುಡ ಸೇವೆಯ ದಿನದಂದು ಕನಿಷ್ಠ 3 ಲಕ್ಷ ಭಕ್ತರು ಬರುವ ನಿರೀಕ್ಷೆಯಿದೆ ಎಂದು ಟಿಟಿಡಿ ಅಧಿಕಾರಿಗಳು ತಿಳಿಸಿದ್ದಾರೆ. 9 ದಿನಗಳ ವಾರ್ಷಿಕ ಬ್ರಹ್ಮೋತ್ಸವಗಳು ಸೋಮವಾರದಿಂದ ತಿರುಪತಿಯಲ್ಲಿ ಪ್ರಾರಂಭವಾಗಲಿದ್ದು, ದೇವಾಲಯದಲ್ಲಿ ಯಾತ್ರಾರ್ಥಿಗಳಿಗೆ ಸುಗಮ ದರ್ಶನ ಮತ್ತು ವಾಹನ ಸೇವೆಗಳಿಗೆ ಅನುಕೂಲವಾಗುವಂತೆ ವ್ಯವಸ್ಥೆಗಳನ್ನು ಮಾಡಲಾಗಿದೆ.
ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಅಧಿಕಾರಿಗಳು ಗರುಡ ಸೇವೆಯ ದಿನದಂದು ಕನಿಷ್ಠ 3 ಲಕ್ಷ ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಇದರಲ್ಲಿ ಸಾಮಾನ್ಯ ಭಕ್ತರಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ವಿಷ್ಣು ನಿವಾಸ ಕಾಂಪ್ಲೆಕ್ಸ್, ತಿರುಪತಿ ಶ್ರೀನಿವಾಸಂ ಕಾಂಪ್ಲೆಕ್ಸ್ನಲ್ಲಿ ಸುಮಾರು 25,000 ರಿಂದ 30,000 ಟೋಕನ್ಗಳನ್ನು ನೀಡಲಾಗುವುದು. ಮತ್ತು ಅಲಿಪಿರಿಯ ಭೂದೇವಿ ಸಂಕೀರ್ಣದಲ್ಲಿ ದಿವ್ಯ ದರ್ಶನ ಟೋಕನ್ ನೀಡಲಾಗುವುದು. ಇನ್ನೂ 45,000 ಯಾತ್ರಾರ್ಥಿಗಳು ಯಾವುದೇ ಟಿಕೆಟ್ ಅಥವಾ ಟೋಕನ್ಗಳಿಲ್ಲದೆ ಸರದಿ ಮೂಲಕ ಬಂದು ದರ್ಶನವನ್ನು ಪಡೆಯಲಿದ್ದಾರೆ ಎಂದು ತಿಳಿಸಿದೆ.
ದೇವಾಲಯದ ಸುತ್ತಮುತ್ತ ಭದ್ರತೆಗಾಗಿ 4,900 ಪೊಲೀಸ್ ಸಿಬ್ಬಂದಿ ಮತ್ತು 1,900 ಟಿಟಿಡಿ ಸಿಬ್ಬಂದಿಯೊಂದಿಯನ್ನು ನೇಮಿಸಲಾಗಿದೆ.
ಅಲ್ಲದೆ ಟಿಟಿಡಿಯು ಕನಿಷ್ಠ 2 ಲಕ್ಷ ಭಕ್ತರಿಗೆ ಆಹಾರ ನೀಡಲು ಸಾಕಷ್ಟು ಅಡುಗೆಯವರು ಮತ್ತು ಇತರ ಉದ್ಯೋಗಿಗಳನ್ನು ನೇಮಿಸಿಕೊಂಡಿದೆ. ದಿನಕ್ಕೆ 6 ಲಕ್ಷದಂತೆ ಲಡ್ಡುಗಳನ್ನು ಹೆಚ್ಚುವರಿಯಾಗಿ ಮಾಡಲು ದಾಸ್ತಾನು ವ್ಯವಸ್ಥೆಯನ್ನು ಮಾಡಲಾಗಿದೆ. ಹಾಗೂ ಆರೋಗ್ಯ ಇಲಾಖೆಯು ನೈರ್ಮಲ್ಯಕ್ಕಾಗಿ 9 ದಿನಗಳ ಕಾರ್ಯಕ್ರಮಕ್ಕೆ ಪ್ರತ್ಯೇಕವಾಗಿ ಸುಮಾರು 3,000 ಕಾರ್ಮಿಕರನ್ನು ನೇಮಿಸಿಕೊಂಡಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications