Tirupati Laddu row: ಆಂಧ್ರ ಮಾಜಿ ಸಿ.ಎಂ ಜಗನ್ ಮೋಹನ್ ರೆಡ್ಡಿಗೆ ಸ್ವಪಕ್ಷದಿಂದಲೇ ಮುಜುಗರ
ತಿರುಪತಿಯ ಪ್ರಸಾದವಾದ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬಿನ ಅಂಶವನ್ನು ಬಳಸಲಾಗಿದೆ ಎನ್ನುವ ಗಂಭೀರ ಆರೋಪ ಇದೆ. ಇದಕ್ಕೆ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಯೇ ಕಾರಣ, ಅವರ ನಿರ್ಲಕ್ಷ್ಯದಿಂದಲೇ ಈ ತಪ್ಪು ನಡೆದಿದೆ. ವೈಎಸ್ಆರ್ ಕಾಂಗ್ರೆಸ್ ಆಡಳಿತದಲ್ಲೇ ಈ ತಪ್ಪು ನಡೆದಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹಾಗೂ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಆರೋಪಿಸಿದ್ದಾರೆ. ಈ ನಡುವೆ ಅವರ ಪಕ್ಷದಿಂದಲೇ ಜಗನ್ಗೆ ಮುಜುಗರ ಎದುರಾಗಿದೆ.
ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ವೈಎಸ್ ಜಗನ್ಮೋಹನ್ ರೆಡ್ಡಿ ಅವರು ಸ್ವಪಕ್ಷದವರಿಂದಲೇ ಭಾರೀ ಮುಜುಗರಕ್ಕೆ ಒಳಗಾಗಿದ್ದಾರೆ. ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕಿ, ಆಂಧ್ರಪ್ರದೇಶದ ಮಾಜಿ ಸಚಿವೆ ಹಾಗೂ ನಟಿ ರೋಜಾ ಅವರು ಮಾಡಿರುವ ಪೋಸ್ಟ್ನಿಂದಾಗಿ ಇದೀಗ ಜಗನ್ ಮೋಹನ್ ರೆಡ್ಡಿ ಅವರು ಮುಜುಗರ ಎದುರಿಸುವಂತಾಗಿದೆ. ರೋಜಾ ಅವರು, ಆರ್ಕೆ ರೋಜಾ ಸೆಲ್ವಮಣಿ ಎನ್ನುವ ಯೂಟ್ಯೂಬ್ ಚಾನೆಲ್ನಿಂದ ಮಾಡಿರುವ ಪೋಸ್ಟ್ (ಕಮ್ಯೂನಿಟಿ ಪೋಸ್ಟ್)ನಿಂದ ಜಗನ್ ಮೋಹನ್ ರೆಡ್ಡಿ ಹಾಗೂ ವೈಎಸ್ಆರ್ ಕಾಂಗ್ರೆಸ್ ಪಕ್ಷ ತೀವ್ರ ಮುಜುಗರಕ್ಕೆ ಒಳಗಾಗಿದೆ. ಆಂಧ್ರಪ್ರದೇಶದ ಪ್ರಸಿದ್ಧ ದೇವಾಲಯವಾದ ತಿರುಪತಿ ತಿರುಮಲ ದೇವಸ್ಥಾನದ ಲಡ್ಡು ಪ್ರಸಾದದಲ್ಲಿ ಬಳಸುವ ತುಪ್ಪದಲ್ಲಿ ಹಸು, ಹಂದಿಯ ಕೊಬ್ಬು ಹಾಗೂ ಮೀನಿನ ಎಣ್ಣೆ ಬಳಸಲಾಗಿದೆ ಎನ್ನುವ ಆರೋಪದ ನಡುವೆ ರೋಜಾ ಅವರು ಮಾಡಿರುವ ಪೋಸ್ಟ್ ಅವರಿಗೆ ಹಾಗೂ ಅವರ ಪಕ್ಷಕ್ಕೆ ತಿರುಗುಬಾಣವಾಗಿದೆ.

ಮೂರು ಪೋಸ್ಟ್ನಿಂದ ಮುಜುಗರ
ನಟಿ ಹಾಗೂ ಮಾಜಿ ಸಚಿವೆ ರೋಜಾ ಅವರು ಯೂಟ್ಯೂಬ್ ಚಾನೆಲ್ನಲ್ಲಿ ತಿರುಪತಿ ಪ್ರಸಾದವಾದ ಲಡ್ಡಿನ ಬಗ್ಗೆ ಜನಾಭಿಪ್ರಾಯ ಸಂಗ್ರಹಿಸಿದ್ದಾರೆ. ಈ ಪೋಸ್ಟ್ಗಳಿಗೆ ಜನ ಚಂದ್ರಬಾಬು ನಾಯ್ಡು ಅವರ ಪರವಾಗಿಯೇ ಹೆಚ್ಚು ಮತ ಚಲಾಯಿಸಿದ್ದಾರೆ. ತಿರುಮಲ ದೇವಸ್ಥಾನದ ನಿರ್ವಹಣೆಯನ್ನು ಆಂಧ್ರಪ್ರದೇಶದ ಯಾವ ಮುಖ್ಯಮಂತ್ರಿ ಉತ್ತಮವಾಗಿ ನಿರ್ವಹಿಸಿದ್ದಾರೆ ಎಂದು ಪೋಸ್ಟ್ ಮಾಡಿದ್ದಾರೆ. ಇದಕ್ಕೆ ಆಯ್ಕೆಯಾಗಿ ಜಗನ್ ಮೋಹನ್ ರೆಡ್ಡಿ ಹಾಗೂ ಚಂದ್ರಬಾಬು ನಾಯ್ಡು ಅವರ ಹೆಸರನ್ನು ಉಲ್ಲೇಖಿಸಲಾಗಿದೆ. ಇದಕ್ಕೆ ತಿರುಪತಿ ದೇವಸ್ಥಾನವನ್ನು ಚಂದ್ರಬಾಬು ನಾಯ್ಡು ಅವರ ಆಡಳಿತ ಅವಧಿಯಲ್ಲಿ ಅತ್ಯುತ್ತಮವಾಗಿ ನಿರ್ವಹಣೆ ಮಾಡಲಾಗಿದೆ ಎಂದು ಶೇಕಡ 74ರಷ್ಟು ಜನ ಅಭಿಪ್ರಾಯಪಟ್ಟಿದ್ದಾರೆ. ಉಳಿದ 24ರಷ್ಟು ಜನ ಮಾತ್ರ ಜಗನ್ ಪರವಾಗಿ ಮತ ಚಲಾಯಿಸಿದ್ದಾರೆ.
ಮತ್ತೊಂದು ಪೋಸ್ಟ್ನಲ್ಲಿ ತಿರುಪತಿ ಲಡ್ಡು ವಿವಾದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಲಾಗಿದೆ. ಇದಕ್ಕೆ ಆಯ್ಕೆಯಾಗಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಹಾಗೂ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಹೆಸರನ್ನು ಪ್ರಸ್ತಾಪಿಸಲಾಗಿದೆ. ಇದಕ್ಕೂ ಜನ ತಿರುಗೇಟು ನೀಡಿದ್ದಾರೆ. ಇದರಲ್ಲಿ ಪವನ್ ಕಲ್ಯಾಣ್ ಹೊಣೆ ಎಂದು ಶೇ 8ರಷ್ಟು ಜನ, ಚಂದ್ರಬಾಬು ನಾಯ್ಡು ಕಾರಣ ಎಂದು 21 ಪ್ರಮಾಣದಷ್ಟು ಜನ ಹಾಗೂ ಜಗನ್ ಮೋಹನ್ ರೆಡ್ಡಿ ಅವರೇ ಕಾರಣ ಎಂದು ಶೇ 71ರಷ್ಟು ಜನ ಅಭಿಪ್ರಾಯ ತಿಳಿಸಿದ್ದಾರೆ. ಈ ಎಲ್ಲ ಪೋಸ್ಟ್ಗಳಲ್ಲೂ ಜಗನ್ ಮೋಹನ್ ರೆಡ್ಡಿಗೆ ಹಿನ್ನಡೆ ಆಗಿದೆ.
ಡಿಲೀಟ್ ಮಾಡುವಂತೆ ಮನವಿ
ರೋಜಾ ಅವರು ಯೂಟ್ಯೂಬ್ನಲ್ಲಿ ಮಾಡುತ್ತಿರುವ ಪೋಸ್ಟ್ಗಳಿಂದ ವೈಎಸ್ಆರ್ ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ಉಂಟಾಗುತ್ತಿದೆ. ಈ ಸೂಕ್ಷ್ಮ ಸಂದರ್ಭದಲ್ಲಿ ಈ ರೀತಿಯ ಪೋಸ್ಟ್ ಅಭಿಪ್ರಾಯ ಅನವಶ್ಯಕವಾಗಿತ್ತು. ದಯವಿಟ್ಟಯ ಈ ಪೋಸ್ಟ್ಗಳನ್ನು ಡಿಲೀಟ್ ಮಾಡಿ ಎಂದು ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಮನವಿ ಮಾಡುತ್ತಿದ್ದಾರೆ. ಸಾಕಷ್ಟು ಜನ ವಿರೋಧಿ ಅಭಿಪ್ರಾಯ ಸಂಗ್ರಹವಾದರೂ, ಈ ಪೋಸ್ಟ್ಗಳನ್ನು ರೋಜಾ ಅವರು ಅಳಿಸಿಲ್ಲ. ಇನ್ನು ಕೆಲವರು ಈ ಪೋಸ್ಟ್ ಅನ್ನು ದಯವಿಟ್ಟು ಟ್ವಿಟ್ಟರ್ನಲ್ಲಿ ಶೇರ್ ಮಾಡಿ ಎಂದು ಸಹ ವ್ಯಂಗ್ಯವಾಡಿದ್ದಾರೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications