Tirupati laddu row: ಜಗನ್ ಮೋಹನ್ ರೆಡ್ಡಿಯಿಂದ ʼಹಿಂದೂ ಅಸ್ತ್ರʼ; ಆಂಧ್ರ ಸಮ್ಮಿಶ್ರ ಸರ್ಕಾರಕ್ಕೆ ಶಾಕ್!
ಆಂಧ್ರಪ್ರದೇಶದ ತಿರುಪತಿಯ ಲಡ್ಡು ಪ್ರಸಾದ ವಿವಾದವು ಹಿಂದೂ ಹಾಗೂ ರಾಜಕೀಯ ಅಸ್ತ್ರವಾಗುತ್ತಿರುವ ಬೆನ್ನಲ್ಲೇ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ಸಹ ಚಂದ್ರಬಾಬು ನಾಯ್ಡು ಹಾಗೂ ಪವನ್ ಕಲ್ಯಾಣ್ ಅವರಿಗೆ ತಿರುಗೇಟು ನೀಡಲು ಮುಂದಾಗಿದ್ದಾರೆ. ತಿರುಪತಿ ಲಡ್ಡಿನಲ್ಲಿ ಕಲಬೆರಕೆ ತುಪ್ಪವನ್ನು ಬಳಸಲಾಗಿದೆ. ಇದೆಲ್ಲ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಅವಧಿಯಲ್ಲೇ ಆಗಿದೆ ಎಂದು ಆಂಧ್ರದ ಸಿ.ಎಂ ಚಂದ್ರಬಾಬು ನಾಯ್ಡು ಆರೋಪಿಸಿದ್ದರು. ಇದೀಗ ಜಗನ್ ತಿರುಪತಿಗೆ ಭೇಟಿ ನೀಡಲು ಮುಂದಾಗಿದ್ದಾರೆ. ಅಲ್ಲದೇ...
ಆಂಧ್ರಪ್ರದೇಶದಲ್ಲಿ ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕ ಜಗನ್ಮೋಹನ್ ರೆಡ್ಡಿಗೆ ರಾಜಕೀಯವಾಗಿಯೇ ಅತಂತ್ರವಾಗುವ ಹಾಗೂ ಜನರಿಂದ ದೂರವಾಗುವ ಆತಂಕ ಎದುರಾಗಿದೆ. ಜಗನ್ ಆಡಳಿತದಲ್ಲೇ ತಿರುಪತಿಯ ಲಡ್ಡಿನಲ್ಲಿ ಹಸು, ಹಂದಿಯ ಕೊಬ್ಬಿನ ಅಂಶ ಹಾಗೂ ಮೀನಿನ ಎಣ್ಣೆಯನ್ನು ಬಳಸಲಾಗಿತ್ತು ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ. ಇದು ಇನ್ನಿಲ್ಲದಂತೆ ಜಗನ್ ಅನ್ನು ಸಂಕಷ್ಟಕ್ಕೆ ದೂಡಿದೆ. ಚಂದ್ರಬಾಬು ನಾಯ್ಡು ಅವರು ಸತ್ಯವನ್ನು ತಿರುಚುತ್ತಿದ್ದಾರೆ ಎಂದು ಜಗನ್ ಅವರು ದೂರಿದ್ದಾರೆ.

ಆಂಧ್ರಪ್ರದೇಶದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಸೆಪ್ಟೆಂಬರ್ 28ಕ್ಕೆ ಜಗನ್ ರೆಡ್ಡಿ ಭೇಟಿ ನೀಡಲಿದ್ದಾರೆ. ಸೆಪ್ಟೆಂಬರ್ 27ರ ರಾತ್ರಿಯೇ ತಿರುಮಲದಲ್ಲಿ ಬಂದು ಇಳಿಯಲಿದ್ದಾರೆ ಎಂದು ವೈಎಸ್ಆರ್ ಪಕ್ಷದ ನಾಯಕರು ಹೇಳಿರುವುದು ವರದಿಯಾಗಿದೆ. ದೇವಸ್ಥಾನಕ್ಕೆ ಭೇಟಿ ನೀಡಿ ಅವರು ತಿರುಪತಿಯಲ್ಲಿ ದೇವರಿಗೆ ಪೂಜೆ ಸಲ್ಲಿಸಲಿದ್ದಾರೆ ಎಂದು ಹೇಳಲಾಗಿದೆ. ಈ ಮೂಲಕ ಜಗನ್ ಅವರು ಆಡಳಿತ ಪಕ್ಷದ ನಾಯಕರಿಗೆ ಟಾಂಗ್ ಕೊಡಲು ಮುಂದಾಗಿದ್ದಾರೆ. ಈಗಾಗಲೇ ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು, ತಿರುಪತಿ ಲಡ್ಡಿನಲ್ಲಿ (ಪ್ರಸಾದದಲ್ಲಿ) ಕಲಬರಕೆ ತುಪ್ಪ ಬಳಸಿದ್ದಕ್ಕಾಗಿ ಪ್ರಾಯಶ್ಚಿತವಾಗಿ ಪ್ರತಿಯೊಬ್ಬ ಹಿಂದೂವು ಸಹ ವ್ರತ ಕೈಗೊಳ್ಳಬೇಕು ಎಂದು ಕರೆ ನೀಡಿದ್ದರು. ಅಲ್ಲದೇ ಅವರು ಸಹ 11 ದಿನಗಳ ವ್ರತ ಮಾಡಿದ್ದರು. ಇದೀಗ ಇದೇ ಅಸ್ತ್ರವನ್ನು ಜಗನ್ ಮೋಹನ್ ರೆಡ್ಡಿ ಅವರು ಬಳಸುತ್ತಿದ್ದು, ಚಂದ್ರಬಾಬು ನಾಯ್ಡು ಅವರು ಪಾಪ ಮಾಡಿದ್ದಾರೆ ಎಂದು ಹೇಳಿದ್ದಾರೆ. ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ ಅವರು ತಿರುಪತಿ ದೇವಸ್ಥಾನವನ್ನೂ ಬಿಟ್ಟಿಲ್ಲ. ಈ ಪವಿತ್ರ ದೇವಸ್ಥಾನದಲ್ಲಿ ನೀಡುವ ಲಡ್ಡಿನಲ್ಲೂ ಕಲಬೆರಕೆ ತುಪ್ಪವನ್ನು ಬಳಸಿದ್ದಾರೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಅವರು ಆರೋಪಿಸಿದ್ದರು. ಇದರ ಬೆನ್ನಲ್ಲೇ ಆಂಧ್ರ ಸಮ್ಮಿಶ್ರ ಸರ್ಕಾರಕ್ಕೆ ಹಿಂದೂ ಧರ್ಮದ ಮೂಲಕವೇ ಜಗನ್ ಪೂಜೆಯ ಅಸ್ತ್ರವನ್ನು ಬಳಸುತ್ತಿದ್ದಾರೆ.
ಚಂದ್ರಬಾಬು ನಾಯ್ಡು ಪಾಪ; ದೇವಸ್ಥಾನಗಳಲ್ಲಿ ಪ್ರಾರ್ಥನೆ ಮಾಡಿ
ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಮಾಡಿರುವ ಪಾಪದ ಪ್ರಾಯಶ್ಚಿತಕ್ಕಾಗಿ ಆಂಧ್ರಪ್ರದೇಶದಾದ್ಯಂತ ಎಲ್ಲರೂ ಶನಿವಾರ (ಸೆಪ್ಟೆಂಬರ್ 28)ದಂದು ವಿಶೇಷ ಪೂಜೆಗಳಲ್ಲಿ ಭಾಗವಹಿಸಿ, ರಾಜ್ಯದಾದ್ಯಂತ ದೇವಸ್ಥಾನಗಳಲ್ಲಿ ಪೂಜೆ ಮಾಡೋಣ ಎಂದು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ಕರೆ ನೀಡಿದ್ದಾರೆ. ಎಲ್ಲರೂ ಆಂಧ್ರ ಸಿ.ಎಂ ಚಂದ್ರಬಾಬು ಮಾಡಿರುವ ಪಾಪಕ್ಕೆ (ಸುಳ್ಳು ಸುದ್ದಿ ಹಾಗೂ ಸತ್ಯವನ್ನು ತಿರುಚಿದ್ದಾರೆ ಎಂಬ ಆರೋಪ) ಪ್ರಾಯಶ್ಚಿತ ಮಾಡಿಕೊಳ್ಳೋಣ ಎಂದು ಅವರು ಆಂಧ್ರಪ್ರದೇಶದ ಜನರಿಗೆ ಕರೆ ನೀಡಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications