Tirupati laddu row: ಚಂದ್ರಬಾಬು ನಾಯ್ಡುಗೆ ಇದಕ್ಕಿಂತ ಸಾಕ್ಷಿ ಬೇಕಾ ಎಂದ ಜಗನ್
ತಿರುಪತಿ ತಿರುಮಲ ದೇವಸ್ಥಾನದಲ್ಲಿ ನೀಡುವ ಲಡ್ಡುವಿನಲ್ಲಿ ಕಲಬೆರಕೆ ತುಪ್ಪ ಬಳಸಲಾಗಿದೆ ಎನ್ನುವ ವಿಷಯವು ಇದೀಗ ಸಂಪೂರ್ಣ ರಾಜಕೀಯ ತಿರುಪಡೆದುಕೊಂಡಿದ್ದು, ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ಮೋಹನ ರೆಡ್ಡಿ ಹಾಗೂ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಡುವೆ ತೀವ್ರ ವಾಗ್ದಾಳಿ ಮುಂದುವರಿದಿದೆ. ಇದೀಗ ಸೋಷಿಯಲ್ ಮೀಡಿಯಾದಲ್ಲಿ ಟ್ವೀಟ್ ಮಾಡಿರುವ ಜಗನ್ ಸತ್ಯಮೇವ ಜಯತೆ ಎಂದಿದ್ದಾರೆ.
ಪವಿತ್ರ ಪ್ರಸಾದವಾದ ತಿರುಪತಿ ಲಡ್ಡುವಿನಲ್ಲಿ ಹಸುವಿನ ಕೊಬ್ಬಿನ ಅಂಶ, ಹಂದಿಯ ಕೊಬ್ಬಿನ ಅಂಶ ಹಾಗೂ ಮೀನಿನ ಎಣ್ಣೆಯನ್ನು ಬಳಸಲಾಗಿದೆ ಎನ್ನುವ ವಿಚಾರವು ತೀವ್ರ ಚರ್ಚೆಗೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದಲೂ ದೇಶದಲ್ಲಿ ಈ ವಿಷಯ ಚರ್ಚೆಯಾಗುತ್ತಿದ್ದು, ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ಈ ವಿಷಯ ವ್ಯಾಪಕ ಆಕ್ರೋಶ ಹಾಗೂ ರಾಜಕೀಯ ಬಣ್ಣವನ್ನು ಪಡೆದುಕೊಂಡಿದೆ. ಇದೀಗ ಈಚೆಗೆ ತಿರುಪತಿ ತಿರುಮಲ ದೇವಸ್ಥಾನಕ್ಕೆ ಹೋಗಲು ನನ್ನನ್ನು ಬಿಡುತ್ತಿಲ್ಲ. ಮಾಜಿ ಸಿ.ಎಂ ಹಾಗೂ ವಿರೋಧ ಪಕ್ಷದ ನಾಯಕನಾದ ನನ್ನನ್ನೇ ಇವರು ತಿರುಪತಿಗೆ ಬಿಡುತ್ತಿಲ್ಲ. ಇನ್ನು ದಲಿತರನ್ನು ಹೇಗೆ ನಡೆಸಿಕೊಳ್ಳುತ್ತಾರೋ ಎಂದು ಜಗನ್ ಪ್ರಶ್ನೆ ಮಾಡಿದ್ದರು.

ಜಗನ್ ಮಾತಿಗೆ ಕೆಂಡಮಂಡಲರಾಗಿದ್ದ ಚಂದ್ರಬಾಬು ನಾಯ್ಡು ಅವರು ಏಕೆ ಸುಮ್ಮನ್ನೆ ಸುಳ್ಳು ಹೇಳುತ್ತೀರಿ, ನಾವು ಪೊಲೀಸರ ಮೂಲಕ ತಡೆದಿದ್ದು ನಿಜವೇ ಆಗಿದ್ದರೆ ಆಂಧ್ರಪ್ರದೇಶ ಪೊಲೀಸರು ನೀಡಿದ್ದ ನೋಟಿಸ್ ಅನ್ನು ಮಾಧ್ಯಮಗಳ ಮುಂದೆ ಬಹಿರಂಗಪಡಿಸಲಿ ಎಂದು ಜಗನ್ಗೆ ಚಂದ್ರಬಾಬು ನಾಯ್ಡು ಸವಾಲು ಹಾಕಿದ್ದರು. ಇದೀಗ ನೋಟಿಸ್ ಅನ್ನು ಜಗನ್ ಅವರು ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ.
ಜಗನ್ ಹೇಳಿದ್ದೇನು ?
ಆಂಧ್ರಪ್ರದೇಶದ ಪೊಲೀಸರು ನೀಡಿದ್ದರು ಎನ್ನಲಾಗಿರುವ ನೋಟಿಸ್ ಕಾಪಿಯನ್ನು ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಹಂಚಿಕೊಂಡಿರುವ ಜಗನ್ ಮೋಹನ್ ರೆಡ್ಡಿ ಅವರು, ಇದು ಏನು ಇದು ಸಾಕ್ಷಿ ಸಾಕಲ್ಲವೇ ಎಂದು ಪ್ರಶ್ನೆ ಮಾಡಿದ್ದು. ಸತ್ಯಮೇವ ಜಯತೆ ಎಂದು ಹೇಳಿದ್ದಾರೆ. ಈ ಮೂಲಕ ಚಂದ್ರಬಾಬು ನಾಯ್ಡು ಅವರು ತಿರುಪತಿ ತಿರುಮಲ ದೇವಸ್ಥಾನಕ್ಕೆ ಹೋಗುವುದಕ್ಕೆ ಚಂದ್ರಬಾಬು ನಾಯ್ಡು ಅವರನ್ನು ಯಾರೂ ತಡೆದಿಲ್ಲ ಎಂದಿದ್ದ ಪ್ರಶ್ನೆಗೆ ತಿರುಗೇಟು ನೀಡಿದ್ದಾರೆ.

ನೋಟಿಸ್ನಲ್ಲಿ ಏನಿದೆ: ಆಂಧ್ರಪ್ರದೇಶದ ಪೊಲೀಸರು ನೀಡಿದ್ದರು ಎನ್ನಲಾಗಿರುವ ನೋಟಿಸ್ನಲ್ಲಿ, ಮಾನ್ಯ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರೇ ನೀವು ಸೆಪ್ಟೆಂಬರ್ 27ರಂದು ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದೀರಿ ಎಂದು ತಿಳಿದು ಬಂದಿದೆ. ಈ ಪ್ರವಾಸಕ್ಕೆ ಅವಕಾಶ ಇರುವುದಿಲ್ಲ ಎಂದು ಪೊಲೀಸ್ ನೋಟಿಸ್ನಲ್ಲಿ ಉಲ್ಲೇಖ ಮಾಡಲಾಗಿದೆ. ನಿಮ್ಮ ಪಕ್ಷದ (ವೈಎಸ್ಆರ್ ಕಾಂಗ್ರೆಸ್) ನಾಯಕರು, ಕಾರ್ಯಕರ್ತರು ಹಾಗೂ ಬೆಂಬಲಿಗರು ತಿರುಪತಿ ತಿರುಮಲ ದರ್ಶನಕ್ಕೆ ಖಾಸಗಿ ವಾಹನಗಳಲ್ಲಿ ಬರುತ್ತಿದ್ದಾರೆ. ದಯವಿಟ್ಟು ಅವರ ಗಮನಕ್ಕೆ ತನ್ನಿ ಈ ಕಾರ್ಯಕ್ರಮಕ್ಕೆ ಅನುಮತಿ ಇರುವುದಿಲ್ಲ (ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡುವುದು) ಪೂಜೆಯಲ್ಲಿ ಭಾಗವಹಿಸುವುದು ನಿಯಮ ಬಾಹಿರ (ಕಾನೂನಿ ಉಲ್ಲಂಘನೆ). ಇದು ಕಾನೂನಿ ಉಲ್ಲಂಘನೆಯಾಗುತ್ತದೆ ಎನ್ನುವುದನ್ನು ನಿಮ್ಮ ಗಮನಕ್ಕೆ ತರಲು ಇಚ್ಛಿಸುತ್ತೇವೆ ಎಂದು ಉಲ್ಲೇಖಿಸಲಾಗಿದೆ.
ಚಂದ್ರಬಾಬು ನಾಯ್ಡು ಹೇಳಿದ್ದೇನು ?
ಯಾರಾದರು ನಿಮ್ಮನ್ನು ಶ್ರೀ ವೆಂಕಟೇಶ್ವರ ಸ್ವಾಮಿ (ತಿರುಪತಿ ತಿರುಮಲ) ದೇವಸ್ಥಾನಕ್ಕೆ ಹೋಗಬೇಡಿ ಎಂದು ತಡೆದಿದ್ದಾರೆಯೇ, ಯಾರಾದರು ನಿಮಗೆ ನೋಟಿಸ್ ಕೊಟ್ಟಿದ್ದಾರಾ, ಕೊಟ್ಟಿದ್ದರೆ ನೋಟಿಸ್ ತೋರಿಸಿ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಜಗನ್ಗೆ ಸವಾಲು ಹಾಕಿದ್ದರು. ವಾಟ್ ಆರ್ಯು ಟಾಕಿಂಗ್ (ನೀನು ಏನು ಮಾತನಾಡುತ್ತಿದ್ದೀಯಾ) ಎಂದು ಅವರು ಪ್ರಶ್ನೆ ಮಾಡಿದ್ದರು.ಯಾರಾದರೂ ನಿಮ್ಮನ್ನು ತಡೆದಿದ್ದಾರೆಯೇ ಸುಳ್ಳು ಯಾಕೆ ಹೇಳುತ್ತೀರಿ ಎಂದು ಗರಂ ಆಗಿದ್ದರು. ಅದರ ಬೆನ್ನಲ್ಲೇ ಪೊಲೀಸರ ನೋಟಿಸ್ ವೈರಲ್ ಆಗಿದೆ.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್









Click it and Unblock the Notifications