Tirupati laddoos ರಾಮಮಂದಿರಕ್ಕೂ 1 ಲಕ್ಷ ತಿರುಪತಿ ಲಡ್ಡು : ಆರ್ಎಸ್ಎಸ್ ಹೇಳಿದ್ದೇನು
ಆಂಧ್ರಪ್ರದೇಶ ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬನ್ನು ತುಪ್ಪದೊಂದಿಗೆ ಬಳಸಲಾಗಿದೆ ಎನ್ನುವ ವಿವಾದವು ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಇದೀಗ ರಾಮಮಂದಿರದಲ್ಲೂ ಈ ವಿಷಯ ಗಂಭೀರ ಚರ್ಚೆಗೆ ಕಾರಣವಾಗಿದೆ. ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬಿನ ಅಂಶ ಇತ್ತು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಹೇಳಿರುವ ವಿಷಯವು ಹಿಂದೂಗಳ ಆತಂಕಕ್ಕೆ ಕಾರಣವಾಗಿದೆ. ತಿರುಪತಿ ಲಡ್ಡಿನ ಬಗ್ಗೆ ಹಿಂದೂಗಳಲ್ಲಿ ವಿಶೇಷ ಗೌರವ ಇದೆ. ತಿರುಪತಿಗೆ ಹೋಗುವವರಷ್ಟೇ ಅಲ್ಲ. ಯಾರಾದರು ತಿರುಪತಿಗೆ ಹೋಗುತ್ತಾರೆ ಎಂದು ಕೇಳಿದರೂ ಸಾಕು..
ಆಂಧ್ರಪ್ರದೇಶದ ತಿರುಪತಿ ತಿಮ್ಮಪ್ಪನ ದೇವಾಸ್ಥಾನದಿಂದ ಬರೋಬ್ಬರಿ 1 ಲಕ್ಷ ಲಡ್ಡುಗಳನ್ನು ಆಯೋಧ್ಯೆಯ ರಾಮಮಂದಿರಕ್ಕೆ ಕಳುಹಿಸಲಾಗಿತ್ತು ಎನ್ನುವ ವಿಚಾರ ಇದೀಗ ಚರ್ಚೆಗೆ ಕಾರಣವಾಗಿದೆ. ತಿರುಪತಿಯಿಂದ 1 ಲಕ್ಷ ಲಡ್ಡುಗಳನ್ನು ಕಳುಹಿಸಲಾಗಿತ್ತು ಎನ್ನುವ ಮಾಹಿತಿಯನ್ನು ಆರ್ಎಸ್ಎಸ್ ಮುಖವಾಣಿ ಪಾಂಚಜನ್ಯದಲ್ಲಿ ಉಲ್ಲೇಖ ಮಾಡಿರುವುದು ವರದಿಯಾಗಿದೆ. ಈಚೆಗೆ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆದ ರಾಮಮಂದಿರ ಶಂಕುಸ್ಥಾಪನೆ ಕಾರ್ಯಕ್ರಮದ ದಿನ ಬರೋಬ್ಬರಿ 1 ಲಕ್ಷ ಲಡ್ಡುಗಳನ್ನು ತಿರುಪತಿಯಿಂದ ಅಯೋಧ್ಯೆಗೆ ಕಳುಹಿಸಲಾಗಿತ್ತು. ಅದನ್ನು ಭಕ್ತರಿಗೆ ಹಂಚಲಾಗಿತ್ತು ಎಂದು ವರದಿ ಹೇಳಿದೆ.

ಜನ ನಮಗೂ ಒಂದು ಲಡ್ಡು ತೆಗೆದುಕೊಂಡು ಬನ್ನು ಎಂದು ಹೇಳುವುದಿದೆ. ತಿರುಪತಿ ಲಡ್ಡನ್ನು ಕಣ್ಣಿಗೆ ಒತ್ತಿಕೊಂಡು, ತಿಮ್ಮಪ್ಪನ ಪ್ರಸಾದ ಎಂದು ಸೇವಿಸುವುದಿದೆ. ಈ ರೀತಿಯ ಹಿಂದೂ ಧರ್ಮೀಯರ ಭಾವನೆ ಹಾಗೂ ಭಕ್ತಿಯೊಂದಿಗೆ ತಿರುಪತಿ ತಿಮ್ಮಪ್ಪನ ದೇವಾಲಯದ ಲಡ್ಡು ಜನರೊಂದಿಗೆ ತನ್ನದೇ ಬಂಧವನ್ನು ಬೆಸದುಕೊಂಡಿದೆ. ದಶಕಗಳಿಂದ ತಿರುಪತಿಯಲ್ಲಿ ಲಡ್ಡು ಪ್ರಸಾದ ಮಾದರಿಯಲ್ಲಿ ನೀಡಲಾಗುತ್ತಿದೆ. ಬೆಟ್ಟವನ್ನು ಹತ್ತಿ, ತಿಮ್ಮಪ್ಪನ ದರ್ಶನ ಮಾಡಲು ಹೋಗುವ ಪ್ರತಿಯೊಬ್ಬರಿಗೂ ಉಚಿತವಾಗಿ ಒಂದು ಲಡ್ಡು ನೀಡಲಾಗುತ್ತದೆ.
ನೇರವಾಗಿ ಪ್ರವೇಶ ಮಾಡುವರಿಗೆ ಇಂತಿಷ್ಟು ಎಂದು ದರ ನಿಗದಿ ಮಾಡಿ ಲಡ್ಡು ನೀಡಲಾಗುತ್ತದೆ. ಆದರೆ, ಉಚಿತ ಹಾಗೂ ದುಡ್ಡು ಕೊಟ್ಟು ಖರೀದಿ ಮಾಡುವ ಎರಡೂ ಲಡ್ಡಿನಲ್ಲೂ ಅದೇ ಭಕ್ತಿ, ಶ್ರದ್ಧೆ ಇದೆ. ತಿಮ್ಮಪ್ಪನ ದರ್ಶನ ಮಾಡಿ ಬಂದು ಹೊರಾಂಗಣದಲ್ಲಿ ಒಂದು ಲಡ್ಡಿನಲ್ಲೇ ಮನೆಯವರೆಲ್ಲ ಹಂಚಿ ತಿಂದುಕೊಂಡು ಇನ್ನುಳಿದ ಲಡ್ಡನ್ನು ಮನೆಗೆ, ಸಂಬಂಧಿಕರು ಹಾಗೂ ಗೆಳಯರಿಗೆ ಎಂದು ತೆಗೆದುಕೊಂಡು ಹೋಗುವುದು ಸಾಮಾನ್ಯ. ಆದರೆ, ಈಗ ಕೇಳಿ ಬರುತ್ತಿರುವ ಗಂಭೀರ ಆರೋಪವನ್ನು ಯಾರನ್ನಾದರೂ ಬೆಚ್ಚಿ ಬೀಳಿಸುವಂತಿದೆ. ಇಂತಹ ಗಂಭೀರವಾದ ವಿಚಾರವನ್ನು ಅಲ್ಲಿನ ಸರ್ಕಾರವೇ ದೃಢಪಡಿಸಿರುವುದು ಭಕ್ತರಲ್ಲಿ ಆಘಾತ ಮೂಡಿಸಿದೆ.
ತಿರುಪತಿ ಲಡ್ಡಿನ ಬಗ್ಗೆ ಕೇಳಿ ಬಂದಿರುವ ವಿವಾದವೇನು
ತಿರುಪತಿ ತಿಮ್ಮಪ್ಪನ ಲಡ್ಡು ತಯಾರಿಕೆ ಮಾಡುವ ಸಂದರ್ಭದಲ್ಲಿ (ಈ ಹಿಂದೆ) ಪ್ರಸಾದದಲ್ಲಿ ದನದ ಕೊಬ್ಬಿನ ಅಂಶ ಹಾಗೂ ಮೀನಿನ ಎಣ್ಣೆಯನ್ನು ಬೆರೆಸಲಾಗುತ್ತಿತ್ತು ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ. ಈ ರೀತಿ ದನದ ಕೊಬ್ಬಿನ ಅಂಶ ಹಾಗೂ ಮೀನಿನ ಎಣ್ಣೆಯನ್ನು ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅಧಿಕಾರ ಅವಧಿಯಲ್ಲಿ ನಡೆದಿದೆ ಎಂದು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದ್ದಾರೆ. ಇದೀಗ ನಾವು ಶುದ್ಧೀಕರಣ ಪ್ರಾರಂಭಿಸಿದ್ದೇವೆ ಎಂದೂ ಅವರು ಹೇಳಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications