Tirupati laddu: ಆಂಧ್ರದಲ್ಲಿ ವ್ರತ vs ಪಶ್ಚಾತಾಪ "ಪೂಜೆ" ರಾಜಕೀಯ
ದೇಶದಲ್ಲಿ ಧರ್ಮದ ಆಧಾರದ ಮೇಲೆ ರಾಜಕೀಯ ನಡೆಯುವುದನ್ನು ನಾವು ಉತ್ತರ ಭಾರತದ ರಾಜ್ಯಗಳಲ್ಲಿ ನೋಡುತ್ತಿದ್ದೆವು. ಅದು ನಿಧಾನವಾಗಿ ಈಗ ದಕ್ಷಿಣ ಭಾರತದಲ್ಲೂ ಪ್ರಾರಂಭವಾದಂತಿದೆ. ಉತ್ತರ ಭಾರತದ ಉತ್ತರ ಪ್ರದೇಶದಲ್ಲಿ ಧರ್ಮ ಹಾಗೂ ದೇವರ ಹೆಸರಿಲ್ಲಿ ಚುನಾವಣೆ ನಡೆಯುವುದನ್ನು, ಮತ ಕೇಳುವುದನ್ನು ನಾವು ನೋಡಿದ್ದೇವೆ. ಕಳೆದ 15 ದಿನಗಳಿಂದ ಅಲ್ಲಿನ ರಾಜಕೀಯ ಬೆಳವಣಿಗೆಯನ್ನೇ ಆಂಧ್ರಪ್ರದೇಶವೂ ನೆನಪಿಸುತ್ತಿದೆ.
ತಿರುಪತಿ ತಿರುಮಲ ದೇವಸ್ಥಾನದ ಲಡ್ಡುವಿನಲ್ಲಿ ಹಸುವಿನ ಕೊಬ್ಬು, ಹಂದಿಯ ಕೊಬ್ಬಿನ ಅಂಶ ಹಾಗೂ ಮೀನಿನ ಎಣ್ಣೆ ಬಳಸಲಾಗಿದೆ ಎನ್ನುವ ಗಂಭೀರ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿ ಹೊಸ ರಾಜಕೀಯ ಅಲೆ ಶುರುವಾಗಿದೆ. ಆಂಧ್ರಪ್ರದೇಶದ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲವೇ ಸೃಷ್ಟಿಯಾಗಿದೆ. ಇದರ ಬೆನ್ನಲ್ಲೇ ವ್ರತ, ಪಶ್ಚಾತಾಪ, ಪೂಜೆ ಹಾಗೂ ಸನಾತನ ಧರ್ಮದ ವಿಚಾರಗಳು ಚರ್ಚೆಯ ಮುನ್ನೆಲೆಗೆ ಬಂದಿದೆ.

11 ದಿನ ವ್ರತ ಮಾಡಿದ ಪವನ್ ಕಲ್ಯಾಣ್
ತಿರುಪತಿ ತಿರುಮಲ ದೇವಸ್ಥಾನದಲ್ಲಿ ನೀಡುವ ಪವಿತ್ರ ಪ್ರಸಾದವಾದ ಲಡ್ಡುವಿನಲ್ಲಿ ಕಲಬೆರಕೆ ತುಪ್ಪ ಬಳಸಲಾಗಿದೆ ಎನ್ನುವ ಗಂಭೀರ ವಿಚಾರದ ನಂತರ ಜನಸೇನ ಪಕ್ಷದ ಮುಖ್ಯಸ್ಥ ಹಾಗೂ ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು 11 ದಿನಗಳ ಪ್ರಾಯಶ್ಚಿತ ವ್ರತ ಘೋಷಿಸಿದ್ದರು. ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಅಧಿಕಾರ ಅವಧಿಯಲ್ಲಿ ಮಹಾ ಪಾಪವಾಗಿದೆ. ಈ ಪಾಪದಿಂದ ಮುಕ್ತ ಹೊಂದಲು ಪ್ರತಿಯೊಬ್ಬ ಹಿಂದೂವು ಸಹ 11 ದಿನಗಳ ಪ್ರಾಯಶ್ಚಿತ ವ್ರತ ಮಾಡಬೇಕು. ತಿರುಪತಿ ತಿಮ್ಮಪ್ಪನ ವ್ರತ ಮಾಡುತ್ತಿದ್ದೇನೆ ಎಂದು ಅವರು ಘೋಷಿಸಿದ್ದರು.
ಜಗನ್ನಿಂದಲೂ ಪಾಪ ವ್ರತ
ಈ ನಡುವೆ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಯೂ ಅವರು ಪ್ರಾಯಶ್ಚಿತ ಪೂಜೆಗೆ ಕರೆ ನೀಡಿದ್ದಾರೆ.

ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಮಾಡಿರುವ ಪಾಪ ಪ್ರಾಯಶ್ಚಿತಕ್ಕಾಗಿ ಆಂಧ್ರಪ್ರದೇಶದ ಎಲ್ಲೆಡೆಯೂ ಸೆಪ್ಟೆಂಬರ್ 28ರಂದು ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಮಾಡೋಣ. ರಾಜ್ಯದಾದ್ಯಂತ ದೇವಸ್ಥಾನಗಳಲ್ಲಿ ಪೂಜೆಗಳಲ್ಲಿ ಭಾಗವಹಿಸಿ ಎಂದಿದ್ದಾರೆ. ಆಂಧ್ರ ಸಿ.ಎಂ ಚಂದ್ರಬಾಬು ಮಾಡಿರುವ ಪಾಪ (ಸುಳ್ಳು ಸುದ್ದಿ ಹಾಗೂ ಸತ್ಯವನ್ನು ತಿರುಚಿದ್ದಾರೆ ಎಂಬ ಆರೋಪ) ಪ್ರಾಯಶ್ಚಿತ ಮಾಡಿಕೊಳ್ಳೋಣ ಎಂದು ಹೇಳಿದ್ದಾರೆ.
ತಿರುಪತಿ ದೇವಸ್ಥಾನ ಶುದ್ಧೀಕರಣ: ಇನ್ನು ತಿರುಪತಿ ತಿರುಮಲ ದೇವಸ್ಥಾನ ಶುದ್ಧೀಕರಣ ಪ್ರಕ್ರಿಯೆಯನ್ನೂ ನಡೆಸಲಾಗಿದೆ. ಲಡ್ಡು ವಿವಾದದ ನಂತರ ದೇವಾಲಯವನ್ನು ಶುದ್ಧೀಕರಣ ಮಾಡಲಾಗಿದೆ. ಅಲ್ಲದೇ ವಿಶೇಷ ಪೂಜೆಗಳನ್ನು ಸಹ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಹೋಮ ನಡೆಸುವ ಬಗ್ಗೆಯೂ ಚಿಂತನೆ ಇದೆ ಎಂದು ಹೇಳಲಾಗುತ್ತಿದೆ.
ಒಟ್ಟಾರೆ ಆಂಧ್ರಪ್ರದೇಶದ ರಾಜಕೀಯದಲ್ಲಿ ಹೊಸ ಸಂಚಲನವೇ ಸೃಷ್ಟಿಯಾಗಿದೆ. ಹಿಂದೂ ಹಾಗೂ ಸನಾತನ ಧರ್ಮದ ಬಗ್ಗೆ ಈ ರಾಜ್ಯದಲ್ಲೂ ಚರ್ಚೆಯಾಗುತ್ತಿದೆ. ಇಲ್ಲಿಯ ವರೆಗೂ ಆಂಧ್ರಪ್ರದೇಶ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳು ಈ ರೀತಿಯ ಧರ್ಮ ರಾಜಕೀಯಕ್ಕೆ ಸಾಕ್ಷಿಯಾಗಿರಲಿಲ್ಲ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications