Tirumala Laddu Price: ತಿರುಪತಿ ವಿಶೇಷ ಪ್ರವೇಶ ದರ್ಶನ ಟಿಕೆಟ್ ಮತ್ತು ಲಡ್ಡು ದರದಲ್ಲಿ ಇಳಿಕೆ?
ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ತಿರುಮಲ ಲಡ್ಡು ಹಾಗೂ ವಿಶೇಷ ದರ್ಶನದ ಬೆಲೆಯನ್ನು ಇಳಿಕೆ ಮಾಡಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವೈರಲ್ ಸುದ್ದಿ ಪ್ರಕಾರ ಲಡ್ಡು ಬೆಲೆ ₹50ರಿಂದ ₹25ಕ್ಕೆ ಇಳಿಕೆಯಾಗಲಿದೆ. ಇದಲ್ಲದೆ ವಿಶೇಷ ದರ್ಶನಕ್ಕೆ 300 ರೂಪಾಯಿ ಬದಲಿಗೆ 200 ರೂಪಾಯಿ ಇಳಿಮುಖವಾಗಲಿದೆ. ಈ ಸುದ್ದಿಗೆ ಟಿಟಿಡಿ ಪ್ರತಿಕ್ರಿಯೆ ನೀಡಿದೆ.
ಅನೇಕ ಭಕ್ತರು ಈ ವೈರಲ್ ಸುದ್ದಿಯನ್ನು ನಂಬಿದ್ದಾರೆ. ಜೊತೆಗೆ ಇದನ್ನು ಹಲವೆಡೆ ಹಂಚಿಕೊಂಡಿದ್ದಾರೆ. ಅಲ್ಲದೆ ಲಡ್ಡು ಹಾಗೂ ಟಿಕೆಟ್ ಬೆಲೆ ಕಡಿಮೆ ಮಾಡಿದ್ದಕ್ಕೆ ತೆಲುಗು ದೇಶಂ ನೇತೃತ್ವದ ಎನ್ಡಿಎ ಮೈತ್ರಿ ಸರ್ಕಾರದ ಆಡಳಿತದಲ್ಲಿ ಕಾರ್ಯನಿರ್ವಹಿಸುತ್ತಿರುವ ಟಿಟಿಡಿಗೆ ಕೃತಜ್ಞತೆ ಕೂಡ ಸಲ್ಲಿಸಿದ್ದಾರೆ.

ಕೆಲವು ಭಕ್ತರು ಸುದ್ದಿಯನ್ನು ಪರಿಶೀಲಿಸಲು ಟಿಟಿಡಿ ಅಧಿಕಾರಿಗಳಿಗೆ ಕರೆ ಮಾಡಿದರು. ಆಗ ಸಾಮಾಜಿಕ ಜಾಲತಾಣಗಳಲ್ಲಿ ಹರಡಿರುವ ಸುದ್ದಿ ಸುಳ್ಳು ಎಂದು ಟಿಟಿಡಿ ಸ್ಪಷ್ಟಪಡಿಸಿದೆ. ಈ ಸುಳ್ಳು ಸುದ್ದಿಯನ್ನು ನಂಬಬೇಡಿ ಎಂದು ಅಧಿಕಾರಿಗಳು ಭಕ್ತರಿಗೆ ಮನವಿ ಮಾಡಿದ್ದಾರೆ.
ಈ ಸುದ್ದಿಗೆ ಟಿಟಿಡಿ ಪ್ರತಿಕ್ರಿಯೆ ನೀಡಿದೆ. ಶ್ರೀವಾರಿ ವಿಶೇಷ ಪ್ರವೇಶ ದರ್ಶನ ಮತ್ತು ತಿರುಮಲ ಲಡ್ಡು ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ತಿರುಮಲ ತಿರುಪತಿ ದೇವಸ್ತಾನಂ ಮಂಡಳಿ ಅಧಿಕೃತ ಹೇಳಿಕೆ ನೀಡಿದೆ. ಟಿಟಿಡಿ ಬೆಲೆ ಪರಿಷ್ಕರಿಸಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳು ಎಂದು ಸ್ಪಷ್ಟಪಡಿಸಿದೆ. ತಿರುಪತಿ ವಿಶೇಷ ದರ್ಶನಕ್ಕೆ 300 ರೂಪಾಯಿ, ಲಡ್ಡುಗಳ ಬೆಲೆ 50 ರೂಪಾಯಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಟಿಟಿಡಿ ತಿಳಿಸಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಸುದ್ದಿಯನ್ನು ನಂಬಬಾರದು ಎಂದು ಸ್ಪಷ್ಟಪಡಿಸಿದೆ. ಅಲ್ಲದೆ ವಿಶೇಷ ಪ್ರವೇಶ ದರ್ಶನಕ್ಕೆ ದಲ್ಲಾಳಿಗಳಿಂದ ಮೋಸ ಹೋಗಬೇಡಿ ಎಂದು ಸಲಹೆ ನೀಡಿದೆ. ಹೆಚ್ಚಿನ ದರದಲ್ಲಿ ವಿಶೇಷ ಪ್ರವೇಶ ದರ್ಶನ ಟಿಕೆಟ್ ನೀಡಲು ವಾಟ್ಸ್ ಆ್ಯಪ್ ಗ್ರೂಪ್ ಗಳನ್ನು ಮಾಡಿಕೊಂಡು ಪ್ರಚಾರ ಮಾಡಲಾಗುತ್ತಿದೆ ಎಂದು ಟಿಟಿಡಿ ಎಚ್ಚರಿಕೆ ನೀಡಿದೆ. ಇದೆಲ್ಲಾ ಸುಳ್ಳು ನಂಬಬಾರದು ಎಂದು ಟಿಟಿಡಿ ಭಕ್ತರಿಗೆ ತಿಳಿಸಿದೆ.
ತಿರುಮಲ ಶ್ರೀಗಳ ವಿಶೇಷ ಪ್ರವೇಶ ದರ್ಶನಕ್ಕೆ ಟಿಟಿಡಿ ವೆಬ್ಸೈಟ್ನಲ್ಲಿ ಟಿಕೆಟ್ಗಳನ್ನು ಲಭ್ಯವಾಗುವಂತೆ ನೋಡಿಕೊಳ್ಳಲಾಗುವುದು ಎಂದು ದೇವಸ್ತಾನಂ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಟಿಟಿಡಿ ವೆಬ್ಸೈಟ್ ಹೊರತುಪಡಿಸಿ, ವಿವಿಧ ರಾಜ್ಯಗಳ ಪ್ರವಾಸೋದ್ಯಮ ಇಲಾಖೆಗಳಿಗೆ ಟಿಟಿಡಿ ಕೆಲವು ಟಿಕೆಟ್ಗಳನ್ನು ನಿಯೋಜಿಸುತ್ತದೆ ಮತ್ತು ಟಿಕೆಟ್ಗಳನ್ನು ಬಯಸುವ ಯಾರಾದರೂ ಆಯಾ ಪ್ರವಾಸೋದ್ಯಮ ಇಲಾಖೆಗಳ ವೆಬ್ಸೈಟ್ಗಳಿಗೆ ಭೇಟಿ ನೀಡುವಂತೆ ಮನವಿ ಮಾಡಿದೆ.
ತಿರುಪತಿ ಲಡ್ಡು ಗುಣಮಟ್ಟದಲ್ಲಿ ಇನ್ಮುಂದೆ ಸುಧಾರಣೆ ಕಾಣಲಿದೆ. ಗುಣಮಟ್ಟದ ಹಿಟ್ಟು, ಲವಂಗಾ, ಡ್ರೈ ಫ್ರೂಟ್ಸ್ ಬಳಕೆಗೆ ಸೂಚನೆ ನೀಡಲಾಗಿದೆ. ಇತ್ತೀಚೆಗೆ ಲಡ್ಡು ತಯಾರಿಕೆಯ ಗುಣಮಟ್ಟದ ಬಗ್ಗೆ ಟೀಕೆಗಳು ಕೇಳಿ ಬಂದಿದ್ದವು. ಲಡ್ಡು ತಯಾರಿಕೆಯಲ್ಲಿ ಬಳಸುವ ಬೇಳೆ ಹಿಟ್ಟು, ತುಪ್ಪ, ಏಲಕ್ಕಿಗಳ ಗುಣಮಟ್ಟ ಸುಧಾರಿಸಬೇಕು ಎಂಬ ಅಭಿಪ್ರಾಯ ಕೇಳಿ ಬಂದಿದ್ದವು. ಇದರಿಂದಾಗಿ ಟಿಟಿಡಿ ಇಒ ಜಯ್ ಶ್ಯಾಮಲಾ ರಾವ್ ಲಡ್ಡು ತಯಾರಿಕೆಯ ಗುಣಮಟ್ಟವನ್ನು ಸುಧಾರಿಸುವಂತೆ ಬಾಣಸಿಗರಿಗೆ ಸೂಚನೆ ನೀಡಿದ್ದಾರೆ.
ಇದರ ಬೆನ್ನಲ್ಲೇ ಲಡ್ಡು ಹಾಗೂ ವಿಶೇಷ ದರ್ಶನ ಟಿಕೆಟ್ ಬೆಲೆ ಇಳಿಕೆ ಮಾಡಲಾಗಿದೆ ಎಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದು ಸತ್ಯಕ್ಕೆ ದೂರವಾದದ್ದು, ಇದನ್ನು ನಂಬಬೇಡಿ ಎಂದು ಟಿಟಿಡಿ ಸ್ಪಷ್ಟ ನೀಡಿದೆ.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ












Click it and Unblock the Notifications