ತಿರುಪತಿ ಶ್ರೀ ವೆಂಕಟೇಶ್ವರ ಸ್ವಾಮಿ ಜೂನ್ 2026 ದರ್ಶನ ಟಿಕೆಟ್ ಬಿಡುಗಡೆ: ಇಲ್ಲಿದೆ ಸಂಪೂರ್ಣ ಮಾಹಿತಿ
ತಿರುಮಲ ತಿರುಪತಿಯ ದೇವಸ್ಥಾನಂ ಮಂಡಳಿಯು (ಟಿಟಿಡಿ) ಮುಂದಿನ ಜೂನ್ ತಿಂಗಳ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನ ಟಿಕೆಟ್ಗಳನ್ನು ಮತ್ತು ಕೊಠಡಿಯ ಕೊಟಾಗಳ ಕುರಿತು ಪ್ರಮುಖ ವಿವರಗಳನ್ನು ಪ್ರಕಟಿಸಿದೆ. ವಿವಿದ ಸೇವೆಗಳು, ವಿಶೇಷ ಪೂಜೆಗಾಗಿ ಮತ್ತು ದರ್ಶನಕ್ಕಾಗಿ ಸಂಬಂಧಿಸಿದ ವಿಶೇಷ ಕೋಟಾಗಳ ದಿನಾಂಕಗಳನ್ನು ಟಿಟಿಡಿ ಪ್ರಕಟಿಸಿದೆ.
ವಿಶೇಷ ಸೇವೆಗಳ ಕೋಟಾ
ತಿರುಪತಿ ಶ್ರೀ ವೆಂಕಟೇಶ್ವರ ಸ್ವಾಮಿ ವಿಶೇಷ ಪೂಜೆ ಟಿಕೆಟ್ಗಳು ಮೊದಲ ತಿಂಗಳ ಕೋಟಾ ವಿವರವನ್ನು ನಾಳೆ (ಮಾರ್ಚ್ 18) ಬೆಳಿಗ್ಗೆ 10 ಗಂಟೆಗೆ ಆನ್ಲೈನ್ನಲ್ಲಿ ಬಿಡುಗಡೆ ಮಾಡಲಾಗುತ್ತದೆ. ಸುಪ್ರಭಾತ, ತೋಮಾಲ ಸೇವೆ, ಅರ್ಚನೆ ಮತ್ತು ಅಷ್ಟದಳ ಪಾದ ಪದ್ಮಾರಾಧನೆ ಸೇವೆಗಳಿಗಾಗಿ ಭಕ್ತರು ಎಲೆಕ್ಟ್ರಾನಿಕ್ ಡಿಪ್ ಮೂಲಕ ನೋಂದಣಿ ಮಾಡಿಕೋಳ್ಳಬಹುದು. ಈ ನೋಂದಣಿಯು ಮಾರ್ಚ್ 20 ರಂದು ಬೆಳಿಗ್ಗೆ 10 ಗಂಟೆಯವರಿಗೆ ಲಭ್ಯವಿರುತ್ತದೆ. ಆಯ್ಕೆಯಾದ ಭಕ್ತರು ಮಾರ್ಚ 20 ರಿಂದ 22 ರೊಳಗೆ ಮಧ್ಯಾಹ್ನ 12 ಗಂಟೆಯೊಳಗೆ ಮೊತ್ತವನ್ನು ಪಾವತಿಸಿ ಟಿಕೆಟ್ಗಳನ್ನು ಪಡೆಯಬೇಕು.

ವರ್ಚುವಲ್ ಸೇವೆಗಳ ಕೋಟಾ
ವರ್ಚುವಲ್ ಸೇವೆಗಳ ಹಾಗೂ ತಿರುಪತಿ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನದ ಸ್ಲಾಟುಗಳ ಕೋಟಾವನ್ನು ಮಾರ್ಚ್ 21 ರಂದು ಮಧ್ಯಾಹ್ನ 3 ಗಂಟೆಗೆ ಆನ್ಲೈನ್ನಲ್ಲಿ ಬಿಡುಗಡೆ ಮಾಡಲಾಗುತ್ತದೆ.
ಉರುಳು ಸೇವೆ ಪ್ರದಕ್ಷಿಣೆ ಟೋಕನ್ಗಳು
ಉರುಳು ಸೇವೆಯ ಪ್ರದಕ್ಷಿಣೆ ಟೋಕನ್ಗಳ ಕೋಟಾವನ್ನು ಮಾರ್ಚ್ 23 ರಂದು ಬೆಳಿಗ್ಗೆ 10 ಗಂಟೆಗೆ ಆನ್ಲೈನ್ನಲ್ಲಿ ಬಿಡುಗಡೆ ಮಾಡಲಾಗುತ್ತದೆ.
ಶ್ರೀವಾಣಿ ಟ್ರಸ್ಟ್ ದರ್ಶನ
ಶೀವಾಣಿ ಟ್ರಸ್ಟ್ ದರ್ಶನ ಟಿಕೆಟ್ಗಳ ಕೋಟಾವನ್ನು ಮಾರ್ಚ್ 23 ರಂದು ಬೆಳಿಗ್ಗೆ 11 ಗಂಟೆಗೆ ಬಿಡುಗಡೆ ಮಾಡಲಾಗುತ್ತದೆ.
ವೃದ್ದರು ಮತ್ತು ಅಂಗವಿಕಲರಿಗೆ ವಿಶೇಷ ದರ್ಶನ
ವೃದ್ದರು, ಅಂಗವಿಕಲರು ಮತ್ತು ದೀರ್ಘಕಾಲದ ಅಸ್ವಸ್ಥರಿಗೆ ಉಚಿತ ವಿಶೇಷ ದರ್ಶನ ಟೋಕನ್ ಕೋಟಾವನ್ನು ಮಾರ್ಚ್ 23 ರಂದು ಮಧ್ಯಾಹ್ನ 3 ಗಂಟೆಗೆ ಆನ್ಲೈನ್ನಲ್ಲಿ ಬಿಡುಗಡೆ ಮಾಡಲಾಗುತ್ತದೆ.
ವಿಶೇಷ ಪ್ರವೇಶ ದರ್ಶನ ಟಿಕೆಟ್ಗಳು
ವಿಶೇಷ ಪ್ರವೇಶ ದರ್ಶನ ಟಿಕೆಟ್ಗಳ ಕೋಟಾವನ್ನು ಮಾರ್ಚ್ 24 ಬೆಳಿಗ್ಗೆ 11 ಗಂಟೆಗೆ ಬಿಡುಗಡೆ ಮಾಡಲಾಗುತ್ತದೆ.
ತಿರುಮಲ ಮತ್ತು ತಿರುಪತಿಯ ಕೊಠಡಿ ಬುಕ್ಕಿಂಗ್
ತಿರುಮಲ ಮತ್ತು ತಿರುಪತಿಯಲ್ಲಿ ಕೊಠಡಿ ಬುಕ್ಕಿಂಗ್ ಕೋಟಾವನ್ನು ಮಾರ್ಚ್ 24 ರಂದು ಮಧ್ಯಾಹ್ನ 3 ಗಂಟೆಗೆ ಆನ್ಲೈನ್ನಲ್ಲಿ ಬಿಡುಗಡೆ ಮಾಡಲಾಗುತ್ತದೆ.
ಟಿಟಿಡಿ ತಿಳಿಸಿರುವಂತೆ, ಶೀವಾರಿ ದರ್ಶನ ಟಿಕೆಟ್ ಗಳನ್ನು ಅಧಿಕೃತ ವೆಬ್ಸೈಟ್ ttdevasthanams.ap.gov.in ಮೂಲಕವೇ ಬುಕ್ ಮಾಡಬೇಕು ಎಂದು ತಿಳಿಸಿದೆ. ಸಾರ್ವಜನಿಕರು ನಕಲಿ ವೆಬ್ಸೈಟ್ಗಳನ್ನು ನಂಬಿ ಮೋಸ ಹೋಗಬಾರದು ಎಂದು ಭಕ್ತರಿಗೆ ಮಂಡಳಿಯು ಮನವಿ ಮಾಡಿದೆ.
-
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ














Click it and Unblock the Notifications