Tirumala: ತಿರುಪತಿ ಕಾಲ್ತುಳಿತ, ಬೆಂಕಿ ಅವಘಡ: ತನಿಖೆಯಿಂದ ದೂರ ಸರಿದ ಕೇಂದ್ರ
ಆಂಧ್ರಪ್ರದೇಶದ ತಿರುಮಲದಲ್ಲಿ ಇತ್ತೀಚೆಗೆ ನಡೆದ ಘಟನೆಗಳ ಬಗ್ಗೆ ವ್ಯಾಪಕ ವಿರೋಧ ಎದುರಿಸಿದ ನಂತರ ಕೇಂದ್ರ ಸರ್ಕಾರ ಕ್ಷೇತ್ರ ತನಿಖೆ ನಡೆಸುವ ನಿರ್ಧಾರವನ್ನು ಹಿಂತೆಗೆದುಕೊಂಡಿದೆ. ಜನವರಿ 8ರಂದು ತಿರುಪತಿಯಲ್ಲಿ ಕಾಲ್ತುಳಿತ ಘಟನೆ ನಂತರ, ಜನವರಿ 13 ರಂದು ತಿರುಮಲ ಲಡ್ಡು ಕೌಂಟರ್ನಲ್ಲಿ ಬೆಂಕಿ ಅಪಘಾತ ಸಂಭವಿಸಿತ್ತು.
ಆರಂಭದಲ್ಲಿ ಗೃಹ ಸಚಿವಾಲಯವು ಹೆಚ್ಚುವರಿ ಕಾರ್ಯದರ್ಶಿ ಸಂಜೀವ್ ಕುಮಾರ್ ಜಿಂದಾಲ್ ಅವರನ್ನು ಸ್ಥಳದಲ್ಲೇ ತನಿಖೆ ನಡೆಸಲು ನೇಮಿಸಿತ್ತು. ಜಿಂದಾಲ್ ಇಂದು ಮತ್ತು ನಾಳೆ ತಿರುಮಲಕ್ಕೆ ಭೇಟಿ ನೀಡಬೇಕಿತ್ತು. ಆದರೆ ಟಿಟಿಡಿ (ತಿರುಮಲ ತಿರುಪತಿ ದೇವಸ್ಥಾನಗಳು) ವಿಷಯಗಳಲ್ಲಿ ಕೇಂದ್ರದ ಹಸ್ತಕ್ಷೇಪ ಅಭೂತಪೂರ್ವವಾಗಿದೆ ಎಂಬ ವರದಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

ಇದಕ್ಕೆ ಪ್ರತಿಕ್ರಿಯೆಯಾಗಿ ಜಿಂದಾಲ್ ಅವರ ಭೇಟಿಯನ್ನು ರದ್ದುಗೊಳಿಸಲು ಕೇಂದ್ರವು ನಿರ್ಧರಿಸಿದೆ. ಜಿಂದಾಲ್ ಅವರ ಪ್ರವಾಸ ರದ್ದತಿಯ ಬಗ್ಗೆ ಗೃಹ ಸಚಿವಾಲಯ ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿಗೆ ಮಾಹಿತಿ ನೀಡಿದೆ.
ತಿರುಪತಿಯಲ್ಲಿ ಕಾಲ್ತುಳಿತ ಘಟನೆ
ಜನವರಿ 8 ರಂದು ತಿರುಪತಿಯ ವೈಕುಂಠ ದ್ವಾರ ದರ್ಶನ ಟಿಕೆಟ್ ಕೇಂದ್ರದ ಬಳಿ ಕಾಲ್ತುಳಿತ ಸಂಭವಿಸಿ ಆರು ಜನರು ಸಾವನ್ನಪ್ಪಿದ್ದರು. ಈ ಘಟನೆಯಲ್ಲಿ ಹಲವಾರು ಜನರು ಗಾಯಗೊಂಡಿದ್ದಾರೆ. 10 ದಿನಗಳ ವಿಶೇಷ ದರ್ಶನಕ್ಕಾಗಿ ಟೋಕನ್ ಪಡೆಯಲು ನೆರೆದಿದ್ದ 4,000 ಕ್ಕೂ ಹೆಚ್ಚು ಭಕ್ತರ ಗುಂಪಿನ ನಡುವೆ ಕಾಲ್ತುಳಿತ ಸಂಭವಿಸಿತ್ತು.
ತಿರುಪತಿಯಲ್ಲಿ ಬೆಂಕಿ ಅವಘಡ
ಅಲ್ಲದೆ ಜನವರಿ 13ರಂದು ತಿರುಪತಿ ದೇವಸ್ಥಾನದಲ್ಲಿ ದರ್ಶನದ ಸಮಯದಲ್ಲಿ ಮತ್ತೊಮ್ಮೆ ಅವಘಡ ಸಂಭವಿಸಿತ್ತು. ಕಂಪ್ಯೂಟರ್ಗೆ ಸಂಪರ್ಕಗೊಂಡಿರುವ ಯುಪಿಎಸ್ ವ್ಯವಸ್ಥೆಯಲ್ಲಿನ ಶಾರ್ಟ್ ಸರ್ಕ್ಯೂಟ್ನಿಂದಾಗಿ ಕೌಂಟರ್ ಸಂಖ್ಯೆ 47 ರಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಈ ವೇಳೆ ಭಕ್ತರು ಭಯಭೀತರಾಗಿ ಓಡಿದ್ದರಿಂದ ಕಾಲ್ತುಳಿತ ಉಂಟಾಗಿತ್ತು.
ಘಟನೆಯ ಬಗ್ಗೆ ಮಾಹಿತಿ ನೀಡಿದ ಟಿಟಿಡಿ ಜೆಇಒ ವೆಂಕಯ್ಯ ಚೌಧರಿ, "ಭಕ್ತರಿಗೆ ಲಡ್ಡು ಪ್ರಸಾದ ವಿತರಿಸುವ ದೇವಾಲಯದ ಪ್ರದೇಶದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಯುಪಿಎಸ್ ವ್ಯವಸ್ಥೆಯಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ, ಕಂಪ್ಯೂಟರ್ಗೆ ಕೌಂಟರ್ ಸಂಖ್ಯೆ 47 ರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ದೇವಾಲಯದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ತಲುಪಿ ಬೆಂಕಿಯನ್ನು ನಂದಿಸಿದ್ದಾರೆ'' ಎಂದು ಹೇಳಿದರು.
ಇದಕ್ಕೂ ಮುನ್ನ ಕಾಲ್ತುಳಿ ನಂತರ ಬೆಂಕಿ ಅವಘಡದಿಂದಾಗಿ ಭಕ್ತರಲ್ಲಿ ಭಯದ ವಾತಾವರಣ ನಿರ್ಮಾಣವಾಯಿತು. ಇತ್ತೀಚಿನ ಕಾಲ್ತುಳಿತದಲ್ಲಿ 6 ಜನರ ಸಾವಿನಿಂದಾಗಿದೆ. ಆದರೆ ಬೆಂಕಿ ಅವಘಡ ಸಂಭವಿಸಿದಾಗ ಜನಸಂದಣಿ ಕಡಿಮೆ ಇದ್ದ ಕಾರಣ ಪರಿಸ್ಥಿತಿ ಗಂಭೀರವಾಗಲಿಲ್ಲ.
ಈ ಘಟನೆಗಳ ಬಗ್ಗೆ ತನಿಖೆ ನಡೆಸಲು ಕೇಂದ್ರ ಸರ್ಕಾರ ಮುಂದಾಗಿತ್ತು. ಇದಕ್ಕಾಗಿ ಗೃಹ ಸಚಿವಾಲಯವು ಹೆಚ್ಚುವರಿ ಕಾರ್ಯದರ್ಶಿ ಸಂಜೀವ್ ಕುಮಾರ್ ಜಿಂದಾಲ್ ಅವರನ್ನು ಸ್ಥಳದಲ್ಲೇ ತನಿಖೆ ನಡೆಸಲು ನೇಮಿಸಿತ್ತು. ಆದರೆ ತಿರುಪತಿಯಲ್ಲಿ ವಿಷಯಗಳಲ್ಲಿ ಕೇಂದ್ರ ಹಸ್ತಕ್ಷೇಪಕ್ಕೆ ಭಾರೀ ವಿರೋಧ ವ್ಯಕ್ತವಾದ ಬೆನ್ನಲ್ಲೆ ಕೇಂದ್ರ ಜಿಂದಾಲ್ ಅವರ ಭೇಟಿಯನ್ನು ರದ್ದುಗೊಳಿಸಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications