Tirumala Tirupati: ತಿರುಪತಿ ತಿಮ್ಮಪ್ಪನಿಗೆ 108 ಚಿನ್ನದ ಕಮಲ ಕಾಣಿಕೆ ನೀಡಿದ ಭಕ್ತ- ಎಷ್ಟು ಮೊತ್ತ, ಯಾವುದಕ್ಕೆ ಬಳಕೆ ತಿಳಿಯಿರಿ
ತಿರುಪತಿ, ಸೆಪ್ಟೆಂಬರ್ 06: ತಿರುಪತಿ ತಿಮ್ಮಪ್ಪ ಭಾರತದ ಅತ್ಯಂತ ಶ್ರೀಮಂತ ದೇವರು ಎಂಬುದರಲ್ಲಿ ಎರಡು ಮಾತಿಲ್ಲ. ತಿರುಮಲ ದೇವಸ್ಥಾನಕ್ಕೆ ಪ್ರತಿವರ್ಷ ನೂರಾರು ಕೋಟಿ ಕಾಣಿಕೆ ಹರಿದುಬರುತ್ತದೆ. ಭಕ್ತರು ಕೇವಲ ಹಣದ ರೂಪದಲ್ಲಿ ಅಷ್ಟೇ ಅಲ್ಲದೇ ಚಿನ್ನ, ಬೆಳ್ಳಿ ಹಾಗೂ ವಜ್ರಗಳ ರೂಪದಲ್ಲಿಯೂ ಕಾಣಿಕೆ ನೀಡುವುದು ರೂಢಿಯಾಗಿದೆ. ಈಗ ತಿರುಪತಿ ವೆಂಕಟೇಶ್ವರನಿಗೆ ಭಕ್ತರೊಬ್ಬರು 108 ಚಿನ್ನದ ಕಮಲಗಳನ್ನು ಕಾಣಿಕೆಯಾಗಿ ನೀಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
ಕಡಪಾ ಜಿಲ್ಲೆಯ ರಾಜಾ ರೆಡ್ಡಿ ಎಂಬ ಭಕ್ತರೊಬ್ಬರು ಬುಧವಾರ ತಿರುಮಲ ತಿರುಪತಿ ದೇವಸ್ಥಾನದಲ್ಲಿ ವೆಂಕಟೇಶ್ವರನಿಗೆ 108 ಚಿನ್ನದ ಕಮಲಗಳನ್ನು ಕಾಣಿಕೆಯಾಗಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಈ ವಿಚಾರವಾಗಿ ಮಾತನಾಡಿರುವ ಲಲಿತಾ ಜ್ಯುವೆಲ್ಲರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮಾಲೀಕ ಕಿರಣ್ ಕುಮಾರ್, ಕಮಲಗಳನ್ನು ನಮ್ಮ ಕಂಪನಿಯೇ ತಯಾರಿಸಿದ್ದು, 2 ಕೋಟಿ ರೂಪಾಯಿ ವೆಚ್ಚದಲ್ಲಿ ಹೂಗಳನ್ನು ತಯಾರಿಸಲಾಗಿದೆ ಎಂದು ಬಹಿರಂಗಪಡಿಸಿದ್ದಾರೆ.
ಈ ಕಮಲಗಳನ್ನು ಅಷ್ಟದಳ ಪಾದ ಪದ್ಮಾರಾಧನೆಗೆ ಬಳಸುವ ಸಾಧ್ಯತೆ ಇದೆ. 1984 ರಲ್ಲಿ, ಗುಂಟೂರಿನ ಮುಸ್ಲಿಂ ಭಕ್ತರೊಬ್ಬರು ವೆಂಕಟೇಶ್ವರ ಸ್ವಾಮಿಗೆ 108 ಚಿನ್ನದ ಕಮಲಗಳನ್ನು ಅರ್ಪಿಸಿದ್ದರು. ಅಂದಿನಿಂದ, ಅವುಗಳನ್ನು ಪ್ರತಿ ಮಂಗಳವಾರದಂದು ವಿಶೇಷ ಅಷ್ಟದಳ ಪಾದ ಪದ್ಮಾರಾಧನೆ ಆಚರಣೆಗಳಿಗೆ ಬಳಸಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.
ದೇವಾಲಯದಲ್ಲಿ ಪ್ರತಿ ಮಂಗಳವಾರದಂದು ಪಾದ ಪದ್ಮಾರಾಧನೆ ಸೇವೆಯನ್ನು ನಡೆಸಲಾಗುತ್ತದೆ. ಇದು ದೇವರಿಗೆ ಪೂಜೆ ಸಲ್ಲಿಸುವುದರೊಂದಿಗೆ ಪ್ರಾರಂಭವಾಗುತ್ತದೆ. ಪೂಜಾರಿಗಳು ಭಗವಂತನ ದೇವದಾಸ ನಾಮಗಳನ್ನು ಪಠಿಸುತ್ತಾರೆ. ಭಗವಂತನ ಪ್ರತಿಯೊಂದು ನಾಮವನ್ನು ಜಪಿಸುವಾಗ, ದೇವರ ಪಾದಗಳಿಗೆ ಒಂದು ಚಿನ್ನದ ಕಮಲವನ್ನು ಅರ್ಪಿಸಲಾಗುತ್ತದೆ.

ಬ್ರಹ್ಮೋತ್ಸವದ ವೇಳೆ ವಿಐಪಿ ದರ್ಶನಕ್ಕೆ ಅವಕಾಶವಿಲ್ಲ
ತಿರುಮಲ ಬ್ರಹ್ಮೋತ್ಸವದ ವೇಳೆ ವಿಐಪಿ ದರ್ಶನಕ್ಕೆ ಶಿಫಾರಸು ಪತ್ರಗಳನ್ನು ಅನುಮತಿಸಲಾಗುವುದಿಲ್ಲ ಎಂದು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿಯ ಅಧ್ಯಕ್ಷರು ತಿಳಿಸಿದ್ದಾರೆ.
ಬ್ರಹ್ಮೋತ್ಸವದ ಕೈಪಿಡಿಯನ್ನು ಬಿಡುಗಡೆ ಮಾಡಿದ ಅಧ್ಯಕ್ಷ ಭೂಮನ ಕರುಣಾಕರ ರೆಡ್ಡಿ, 'ಸಾಮಾನ್ಯ ಯಾತ್ರಾರ್ಥಿಗಳಿಗೆ ಉತ್ತಮ ದರ್ಶನ ಮತ್ತು ಎಲ್ಲಾ ಸೇವೆಗಳನ್ನು ಒದಗಿಸಲು ಟಿಟಿಡಿ ಎಲ್ಲಾ ಪ್ರಯತ್ನಗಳನ್ನು ಮಾಡುತ್ತದೆ' ಎಂದು ಹೇಳಿದ್ದಾರೆ.
ಸೆಪ್ಟೆಂಬರ್ 18 ರಂದು ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಬ್ರಹ್ಮೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ರಾಜ್ಯ ಸರ್ಕಾರದ ಪರವಾಗಿ ವೆಂಕಟೇಶ್ವರ ದೇವರಿಗೆ ರೇಷ್ಮೆ ವಸ್ತ್ರವನ್ನು ಅರ್ಪಿಸಲಿದ್ದಾರೆ.
ಸೆಪ್ಟೆಂಬರ್ ಮತ್ತು ಅಕ್ಟೋಬರ್ನಲ್ಲಿ ಅವಳಿ ಬ್ರಹ್ಮೋತ್ಸವಗಳು ನಡೆಯಲಿವೆ. ಸಾಲಕಟ್ಲ ಬ್ರಹ್ಮೋತ್ಸವಗಳು ಸೆಪ್ಟೆಂಬರ್ 18 ಮತ್ತು 26 ರ ನಡುವೆ ನಡೆಯಲಿದ್ದು, ನವರಾತ್ರಿ ಬ್ರಹ್ಮೋತ್ಸವಗಳು ಅಕ್ಟೋಬರ್ 15 ರಿಂದ 23 ರ ನಡುವೆ ನಡೆಯಲಿವೆ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications