ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅನ್ ಲಾಕ್ 1.0: ಭಕ್ತರಿಗೆ ತಿರುಪತಿ ದೇವಾಲಯದ ಮಹತ್ವದ ಪ್ರಕಟಣೆ

|
Google Oneindia Kannada News

ತಿರುಪತಿ, ಜೂನ್ 2: ಕೇಂದ್ರ ಸರಕಾರದ ಮಾರ್ಗಸೂಚಿಯಂತೆ, ವಿಶ್ವದ ಶ್ರೀಮಂತ ಹಿಂದೂ ದೇವಾಲಯ, ತಿರುಮಲ ವೆಂಕಟೇಶ್ವರ ಸ್ವಾಮಿಯ ದೇವಾಲಯವನ್ನು ಭಕ್ತರಿಗೆ ಮುಕ್ತವಾಗಿಸಲು, ಆಂಧ್ರ ಪ್ರದೇಶ ಸರಕಾರ ಅನುಮತಿ ನೀಡಿದೆ.

ದೇವಾಲಯ ಆರಂಭಿಸಲು ಟಿಟಿಡಿ, ಸರಕಾರಕ್ಕೆ ಮನವಿ ಮಾಡಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಜಗನ್ ಸರಕಾರ, ಮಾರ್ಗಸೂಚಿಯಂತೆ, ಜೂನ್ ಎಂಟರಿಂದ ದೇಗುಲ ತೆರೆಯಲು ಅವಕಾಶ ಕಲ್ಪಿಸಿದೆ.

ಆಸ್ತಿ ಮಾರಾಟ ಮಾಡುವ ಟಿಟಿಡಿ ನಿರ್ಧಾರ ತಡೆದ ಆಂಧ್ರ ಸರ್ಕಾರ!ಆಸ್ತಿ ಮಾರಾಟ ಮಾಡುವ ಟಿಟಿಡಿ ನಿರ್ಧಾರ ತಡೆದ ಆಂಧ್ರ ಸರ್ಕಾರ!

ಆರಂಭದ ದಿನಗಳಲ್ಲಿ ಎಲ್ಲಾ ಭಕ್ತರಿಗೆ ದರ್ಶನಕ್ಕೆ ಅನುಮತಿ ನೀಡುವುದಿಲ್ಲ ಎಂದು ಟಿಟಿಡಿ ಹೇಳಿದೆ. ಮೊದಲು ದೇವಸ್ಥಾನದ ಸಿಬ್ಬಂದಿ ಮತ್ತು ಸ್ಥಳೀಯರಿಗೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದು ಟಿಟಿಡಿ ಹೇಳಿದೆ.

Tirupati Venkateshwara Temple: Devotees Will Allowed For Darshan In Phased Manner From June 8

ಸಾಮಾನ್ಯ ದಿನಗಳಲ್ಲಿ ಸುಮಾರು ಒಂದು ಲಕ್ಷ ಭಕ್ತರು ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಇದನ್ನು 25-30ಸಾವಿರಕ್ಕೆ ಇಳಿಸಲು ಟಿಟಿಡಿ ನಿರ್ಧರಿಸಿದೆ. ಪ್ರತಿ ಗಂಟೆಗೆ ಇಂತಿಷ್ಟು ಭಕ್ತರಿಗೆ ಮಾತ್ರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ.

ದೇವಾಲಯದಲ್ಲಿ ಸುಮಾರು ಇಪ್ಪತ್ತು ಸಾವಿರಕ್ಕೂ ಅಧಿಕ ಸಿಬ್ಬಂದಿಗಳಿದ್ದಾರೆ. ಅವರನ್ನೆಲ್ಲಾ ಭಕ್ತರ ಹಾಗೇ ಕ್ಯೂನಲ್ಲಿ ನಿಲ್ಲಿಸಿ ತರಬೇತಿ ನೀಡಲಾಗುತ್ತಿದೆ ಎಂದು ಟಿಟಿಡಿ ಹೇಳಿದೆ.

ತಿರುಪತಿ ವೆಂಕಟೇಶ್ವರನ ಶಾಪದಿಂದ ನಿಮ್ಮಪ್ಪ ಸತ್ತಿದ್ದು: ಆಂಧ್ರ ಸಿಎಂಗೆ ಎಚ್ಚರಿಕೆತಿರುಪತಿ ವೆಂಕಟೇಶ್ವರನ ಶಾಪದಿಂದ ನಿಮ್ಮಪ್ಪ ಸತ್ತಿದ್ದು: ಆಂಧ್ರ ಸಿಎಂಗೆ ಎಚ್ಚರಿಕೆ

ಸೋಷಿಯಲ್ ಡಿಸ್ಟನ್ಸ್, ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸರ್ ಮುಂತಾದವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು. ಬೇರೆ ರಾಜ್ಯದ ಭಕ್ತರಿಗೆ ಸದ್ಯ ದರ್ಶನಕ್ಕೆ ಅವಕಾಶ ಕಲ್ಪಿಸುವುದು ಕಷ್ಟವಾಗುತ್ತದೆ, ಎಲ್ಲರೂ ಸಹಕರಿಸಬೇಕೆಂದು ಟಿಟಿಡಿ ಮನವಿ ಮಾಡಿದೆ.

English summary
Tirupati Venkateshwara Temple: Devotees Will Allowed For Darshan In Phased Manner From June 8,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X