ಬಿರಿಯಾನಿ ತಿಂದರೆ ಪುರುಷತ್ವ ಢಮಾರ್?; ಅಂಗಡಿ ಮುಚ್ರಿ ಎಂದ ಲೀಡರ್!
ಕೋಲ್ಕತ್ತಾ, ಅಕ್ಟೋಬರ್ 24: ಬಿರಿಯಾನಿ ಅಂದ್ರೆ ಬಾಯಿ ಬಾಯಿ ಬಿಡುವ ಜನರು ಇದ್ದಾರೆ. ಬಿಸಿ ಬಿಸಿ ಬಿರಿಯಾನಿಗೆ ಮನ ಸೋಲದ ಮಾಂಸಪ್ರಿಯರೇ ಇಲ್ಲ. ಆದರೆ ನೀವು ತಿನ್ನೋ ಅದೇ ಬಿರಿಯಾನಿ ನಿಮ್ಮ ಪುರುಷತ್ವಕ್ಕೆ ಆಪತ್ತು ತರುತ್ತೆ ಎಂಬ ಸುದ್ದಿಯೊಂದು ವೈರಲ್ ಆಗುತ್ತಿದೆ.
ಪಶ್ಚಿಮ ಬಂಗಾಳದ ಕೂಚ್ ಬೆಹಾರ್ನಲ್ಲಿ ಇತ್ತೀಚಿಗೆ ದಾಳೆ ನಡೆೆಸಿದ ತೃಣಮೂಲ ಕಾಂಗ್ರೆಸ್ ನಾಯಕ ರವೀಂದ್ರ ನಾಥ್ ಘೋಷ್, ಎರಡು ಸ್ಥಳೀಯ ಬಿರಿಯಾನಿ ಅಂಗಡಿಗಳನ್ನು ಮುಚ್ಚುವಂತೆ ಒತ್ತಾಯಿಸಿದರು. ಈ ಬಿರಿಯಾನಿ ಭಕ್ಷ್ಯದಲ್ಲಿನ ಮಸಾಲೆಗಳು ಪುರುಷರ ಪುರುಷತ್ವವನ್ನು ಕಡಿಮೆ ಮಾಡುತ್ತವೆ ಎಂದು ಅವರು ಆರೋಪಿಸಿದರು.
ಮಾಂಸಹಾರಿಗಳ ನೆಚ್ಚಿನ ಬಿರಿಯಾನಿಯು ಆರೋಗ್ಯಕ್ಕೆ ಅಪಾಯವನ್ನು ತಂದೊಡ್ಡುತ್ತದೆ ಎಂದು ಟಿಎಂಸಿ ನಾಯಕ ರವೀಂದ್ರ ನಾಥ್ ಘೋಷ್ ದೂಷಿಸುತ್ತಿದ್ದಾರೆ. ಅಸಲಿಗೆ ಈ ಬಿರಿಯಾನಿಗೂ ಆ ಪುರುಷತ್ವ ಸಮಸ್ಯೆಗೂ ಎಲ್ಲಿಂದೆಲ್ಲಿ ನಂಟು?, ನಿಜವಾಗಿಯೂ ಇಂಥದೊಂದು ಆರೋಗ್ಯ ಸಮಸ್ಯೆಯು ಕಾಣಿಸಿಕೊಳ್ಳುವುದಕ್ಕೆ ಸಾಧ್ಯವೇ?, ಬಿರಿಯಾನಿ ಅಂಗಡಿ ಅನ್ನು ಮುಚ್ಚಿಸುವುದರ ಹಿಂದಿನ ಅಸಲಿ ಕಾರಣವೇನು ಎಂಬುದನ್ನು ವರದಿಯಲ್ಲಿ ತಿಳಿದುಕೊಳ್ಳಿರಿ.

ಪುರುಷತ್ವಕ್ಕೆ ಧಕ್ಕೆ ಉಂಟು ಮಾಡುತ್ತಾ ಬಿರಿಯಾನಿ?
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರದ ಮಾಜಿ ಸಚಿವರಾಗಿರುವ ರವೀಂದ್ರ ನಾಥ್ ಘೋಷ್ ಬಿರಿಯಾನಿ ಅಂಗಡಿಗಳ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಬಿರಿಯಾನಿ ತಯಾರಿಸಲು ಬಳಸುವ ಪದಾರ್ಥಗಳು ಮತ್ತು ಮಸಾಲೆಗಳು ಪುರುಷ ಲೈಂಗಿಕ ಬಯಕೆಯನ್ನು ಕಡಿಮೆ ಮಾಡುತ್ತದೆ. ಈ ಬಗ್ಗೆ ಹಲವಾರು ಜನರಿಂದ ಆರೋಪಗಳು ಬಂದಿವೆ ಎಂದು ದೂಷಿಸಿದ್ದಾರೆ.

ಈ ಬಿರಿಯಾನಿಗೆ ಹಾಕುವ ಆ ಮಸಾಲೆ ಯಾವುದು?
ರಾಜ್ಯದ ಕೂಚ್ ಬೆಹಾರ್ನಲ್ಲಿ ಇರುವ ಬಿರಿಯಾನಿ ಅಂಗಡಿಗಳ ಬಗ್ಗೆ ಸಾರ್ವಜನಿಕರು ಸಾಕಷ್ಟು ದೂರುಗಳನ್ನು ನೀಡಿದ್ದರು. ಕಳೆದ ಹಲವು ದಿನಗಳಿಂದ ಈ ಪ್ರದೇಶದ ಜನರು ಆರೋಪಗಳನ್ನು ಮಾಡಿದ್ದರು. ಪುರುಷರ ಲೈಂಗಿಕ ಉತ್ಸಾಹವನ್ನು ತಡೆಯುವ ಮಸಾಲೆಗಳನ್ನು ಬಿರಿಯಾನಿ ಮಾಡುವುದಕ್ಕಾಗಿ ಬಳಸಲಾಗುತ್ತಿದೆ. ಆದರೆ ಆ ಮಸಾಲೆಗಳು ಯಾವುವು ಎಂಬುದು ತಿಳಿದಿಲ್ಲ ಎಂದು ಘೋಷ್ ಹೇಳಿದ್ದರು.

ಇಲ್ಲಿ ಬಿರಿಯಾನಿ ಮಾಡುವ ಮಂದಿ ಯುಪಿ, ಬಿಹಾರದವರು
ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಪುರಸಭೆಯ ವ್ಯಾಪ್ತಿಯಲ್ಲಿ ಸಾಕಷ್ಟು ಬಿರಿಯಾನಿ ಅಂಗಡಿಗಳಿವೆ. ಬಿಹಾರ ಮತ್ತು ಉತ್ತರ ಪ್ರದೇಶದಿಂದ ಆಗಮಿಸಿರುವ ಜನರು ಈ ಪ್ರದೇಶದಲ್ಲಿ ಬಿರಿಯಾನಿ ಮಾರಾಟ ಮಾಡುತ್ತಿದ್ದಾರೆ. ಈ ಅಂಗಡಿಗಳು ಪರವಾನಗಿ ಇಲ್ಲದೆ ಕಾರ್ಯ ನಿರ್ವಹಿಸುತ್ತಿವೆ ಎಂದು ರವೀಂದ್ರ ನಾಥ್ ಘೋಷ್ ಆರೋಪಿಸಿದರು.

ಬಿರಿಯಾನಿ ಅಂಗಡಿ ಮುಚ್ಚಿಸಿದ್ದಕ್ಕೆ ಕಾರಣವೇನು?
ಪುರುಷರ ಪುರುಷತ್ವದ ಸಾಮರ್ಥ್ಯವನ್ನು ತಗ್ಗಿಸುವಂತಹ ಮಸಾಲೆ ಪದಾರ್ಥಗಳನ್ನು ಬಿರಿಯಾನಿಯಲ್ಲಿ ಬಳಸಲಾಗುತ್ತದೆ ಎಂಬ ಬಗ್ಗೆ ಸಾಕಷ್ಟು ದೂರುಗಳನ್ನು ಬಂದಿದ್ದವು. ಹೀಗಾಗಿ ಇತ್ತೀಚಿಗೆ ಕೂಚ್ ಬೆಹಾರ್ ಪ್ರದೇಶದ ಕೆಲವು ಬಿರಿಯಾನಿ ಅಂಗಡಿಗಳ ಮೇಲೆ ದಾಳಿ ನಡೆಸಲಾಗಿತ್ತು. ಈ ವೇಳೆ ಅಂಗಡಿಗಳು ಯಾವುದೇ ರೀತಿ ಪರವಾನಗಿ ಪಡೆದುಕೊಳ್ಳದಿರುವುದು ಬೆಳಕಿಗೆ ಬಂದಿದೆ. ಆ ಕಾರಣಕ್ಕಾಗಿ ಎರಡು ಅಂಗಡಿಗಳನ್ನು ಮುಚ್ಚಿಸಲಾಗಿದೆ ಎಂದು ಘೋಷ್ ತಿಳಿಸಿದರು.
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್












Click it and Unblock the Notifications