Breaking: West Bengal: ಟಿಎಂಸಿ ನಾಯಕನನ್ನು ಗುಂಡಿಟ್ಟು ಕೊಂದ ಹಂತಕರು
ನವದೆಹಲಿ, ನವೆಂಬರ್ 13: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಜಾಯ್ನಗರದಲ್ಲಿ ಸ್ಥಳೀಯ ತೃಣಮೂಲ ಕಾಂಗ್ರೆಸ್ ನಾಯಕನನ್ನು ದುಷ್ಕರ್ಮಿಯೊಬ್ಬ ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಸೋಮವಾರ ಬೆಳಗ್ಗೆ ನಡೆಸಿದೆ.
ಜೋಯ್ನಗರದ ಟಿಎಂಸಿ ವಲಯದ ಅಧ್ಯಕ್ಷ ಸೈಫುದ್ದೀನ್ ಲಸ್ಕರ್ ಅವರನ್ನು ಕೆಲವು ದುಷ್ಕರ್ಮಿಗಳು ಅವರ ಮನೆಯ ಬಳಿ ಗುಂಡಿಕ್ಕಿ ಕೊಲೆ ಮಾಡಿದ್ದಾರೆ. ಕೃತ್ಯ ನಡೆಯುತ್ತಿದ್ದಂತೆ ಅವರ ಬೆಂಬಲಿಗರು ದುಷ್ಕಮಿಗಳ ಪೈಕಿ ಒಬ್ಬರನ್ನು ಎಳೆದು ಥಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ತಮ್ಮ ಮುಖಂಡನ ಹತ್ಯೆಯ ಹಿಂದೆ ಸಿಪಿಐ(ಎಂ) ಬೆಂಬಲಿಗರ ಕೈವಾಡ ಇದೆ ಎಂದು ಸ್ಥಳೀಯ ಟಿಎಂಸಿ ಮುಖಂಡರು ಅನುಮಾನ ವ್ಯಕ್ತಪಿಡಿಸಿದ್ದಾರೆ. ಘಟನೆಯಿಂದ ಆಕ್ರೊಶಗೊಂಡ ಲಸ್ಕರ್ ಬೆಂಬಲಿಗರು ಸಿಪಿಐ(ಎಂ) ಬೆಂಬಲಿಗರ ಮನೆಗಳ ಮೇಲೆ ದಾಳಿ ನಡೆಸಿದರು. ಮನೆಯನ್ನು ಧ್ವಂಶ ಮಾಡಿದ್ದಲ್ಲದೇ, ಕೆಲವೆಡೆ ಬೆಂಕಿ ಹಚ್ಚಲಾಯಿತು.
ಘಟನೆ ಕುರಿತು ಸಿಪಿಐ(ಎಂ) ಕೇಂದ್ರ ಸಮಿತಿ ಸದಸ್ಯ ಸುಜನ್ ಚಕ್ರವರ್ತಿ ಅವರು ಪ್ರತಿಕ್ರಿಯಿಸಿ, ಹಂತಕರು ಯಾರೇ ಆಗಿದ್ದರು ಬಂಧಿಸಲಾಗುವುದು. ಕೊಲೆ ಪಿತೂರಿಯನ್ನು ಬಹಿರಂಗೊಳಿಸಲಾಗುವುದು. ಪೊಲೀಸರು ಸೂಕ್ತ ತನಿಖೆ ನಡೆಸುವಂತೆ ಅವರು ಸೂಚಿಸಿದರು.
ಸೈಫುದ್ದೀನ್ ಲಸ್ಕರ್ ಹತ್ಯೆಯಾಗಿರುವುದು ನೋವಿನ ಸಂಗತಿ. ಇದು ಅವರ ಟಿಎಂಸಿ ಪಕ್ಷದೊಳಗಿನ ಆಂತರಿಕ ಕಲಹದ ಪರಿಣಾಮ ಆಗಿದೆ. ಅದನ್ನು ಬಿಟ್ಟು ಸಿಪಿಐ(ಎಂ) ದೂಷಿಸುವುದದರಲ್ಲಿ ಯಾವ ಪ್ರಯೋಜನವಿಲ್ಲ ಎಂದು ಅವರು ತಿಳಿಸಿದರು.
-
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ












Click it and Unblock the Notifications