Get Updates
Get notified of breaking news, exclusive insights, and must-see stories!

ಕಾಂಚಿಪುರಂನಲ್ಲಿಂದು ಕಂಚೀಶ್ರೀಗಳಿಗೆ ಅಂತಿಮ ವಿದಾಯ

ಕಾಂಚಿಪುರಂ, ಮಾರ್ಚ್ 01: ಕಳೆದ ಎರಡು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಂಚಿ ಕಾಮಕೋಟಿ ಪೀಠದ 69 ನೇ ಜಗದ್ಗುರುಗಳಾಗಿದ್ದ ಶ್ರೀ ಜಯೇಂದ್ರ ಸರಸ್ವತಿ ಸ್ವಾಮಿಗಳು(82) ನಿನ್ನೆ(ಫೆ.28) ಅಸ್ತಂಗತರಾದರು. ಅವರ ಅಂತ್ಯ ಸಂಸ್ಕಾರ ಇಂದು(ಮಾ.01) ನಡೆಯಲಿದ್ದು, ಕಂಚಿ ಶಂಕರ ಮಠದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಬೆಳಿಗ್ಗೆ 7:30 ರವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಬೆಳಿಗ್ಗೆ 8 ಕ್ಕೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಮಠದ ಮೂಲಗಳು ತಿಳಿಸಿವೆ.

TN: Thousands pay homage to Kanchi Shankaracharya Jayendra Saraswati

ನಿನ್ನೆಯಿಂದ ಸುಮಾರು 1 ಲಕ್ಷಕ್ಕೂ ಹೆಚ್ಚು ಜನ ಸ್ವಾಮೀಜಿಯವರ ಅಂತಿಮ ದರ್ಶನ ಪಡೆದಿದ್ದಾರೆ.

1994 ರಲ್ಲಿ ಕಂಚಿ ಕಾಮಕೋಟಿ ಪೀಠದ 69ನೇ ಜಗದ್ಗುರುಗಳಾಗಿ ಅವರು ಪೀಠಾರೋಹಣ ಮಾಡಿದ್ದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಫೆ.25 ರಂದು ಚೆನ್ನೈನ ಶ್ರೀ ರಾಮಚಂದ್ರ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಗೆ ದಾಖಲಾಗಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಬೆಳಗ್ಗೆ ಇಹಲೋಕ ತ್ಯಜಿಸಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+