ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಏನು ಮಾಡಬಹುದು?
ಪ್ರತಿ ವರ್ಷ ಅಂತಾರಾಷ್ಟ್ರೀಯ ಬಾಲ ಕಾರ್ಮಿಕ ವಿರೋಧಿ ದಿನ ಬರುತ್ತದೆ. ನಾವು ಆ ಬಗ್ಗೆ ಮಾತನಾಡುತ್ತೇವೆ'. ನಂತರ ಸುಮ್ಮನಾಗುತ್ತೇವೆ. ಸಮಾಜ ಬದಲಾವಣೆ ಆಗಬೇಕು ಎಂದು ಭಾಷಣ ಮಾಡಲು ಸಾಧ್ಯವಾಗದಿದ್ದರೂ ಸ್ನೇಹಿತರ ಜತೆಯಾದರೂ ಹಲುಬುತ್ತೇವೆ.
ಗ್ಯಾರೇಜ್, ಹೋಟೆಲ್, ಬೀಡಾ ಅಂಗಡಿ, ಬಟ್ಟೆ ಅಂಗಡಿ, ಸಿನಿಮಾ ನಿರ್ಮಾಣ ಹೀಗೆ ನೂರಾರು ಜಾಗಗಳಲ್ಲಿ ಬಾಲಕಾರ್ಮಿಕರು ಕೆಲಸ ಮಾಡುತ್ತಲೇ ಇದ್ದಾರೆ. ಸರ್ಕಾರಗಳು ನಿಯಂತ್ರಣ ಮಾಡುತ್ತೇನೆ ಎಂದು ಹೇಳಿ ಕಾನೂನು ಜಾರಿ ಮಾಡಿದ್ದರೂ ಯಾವ ಪ್ರಯೋಜನವೂ ಆಗಿಲ್ಲ.[ಮಕ್ಕಳಿಗೆ ಸ್ವಾವಲಂಬನೆ ಕಲಿಸಿಕೊಟ್ಟ ಸತ್ಯಾರ್ಥಿ]

ಒಬ್ಬ ಸಾಮಾನ್ಯ ನಾಗರಿಕ ಬಾಲಕಾರ್ಮಿಕ ಪದ್ಧತಿ ತಡೆಗೆ ಯಾವ ರೀತಿ ಕೈಜೋಡಿಸಬಹುದು ಎಂಬುದು ಸಮಸ್ಯೆಯ ಒಂದು ಮುಖವಾದರೆ, ಬಾಲ ಕಾರ್ಮಿಕರು ಹುಟ್ಟಿಕೊಳ್ಳಲು ಕಾರಣವೇನು? ಮಕ್ಕಳು ಶಿಕ್ಷಣದಿಂದ ವಂಚಿತರಾಗಿ ಕೆಲಸ ಮಾಡುವಂತೆ ಮಾಡಿದ ಸಮಾಜ ನಮ್ಮದೇ ಅಲ್ಲವೇ? ಎಂಬುದು ಇನ್ನೊಂದು ಮುಖ.
ಹೊಟೆಲ್ ಗೆ ತಿಂಡಿ ತಿನ್ನಲು ಹೋದ ನಾವೇ ಟೇಬಲ್ ಮೇಲಿದ್ದ ಬಟ್ಟಲನ್ನು ತೆಗೆಯದ ಹುಡುಗನನ್ನು ಗದರಿಸುತ್ತೇವೆ. ಮನೆಗೆ ಬಂದು ಬಾಲಕಾರ್ಮಿಕ ವಿರೋಧಿ ದಿನ ಆಚರಣೆ ಸುದ್ದಿ ಓದಿ ಮಲಗುತ್ತೇವೆ. ಹಾಗಾದರೆ ಬಾಲಕಾರ್ಮಿಕ ಪದ್ಧತಿ ಸಂಪೂರ್ಣ ನಿರ್ಮೂಲನೆಗೆ ಮದ್ದು ಯಾವುದು? ಉತ್ತರ ಸರಳವಾಗಿಲ್ಲ.[ಹಳ್ಳಿಮನೆ ಹೋಟೆಲ್ ನಿಂದ ಬಾಲ ಕಾರ್ಮಿಕರಿಗೆ ಮುಕ್ತಿ]
ಭಾರತಕ್ಕೆ ಸ್ವಾತಂತ್ರ್ಯ ಬಂದ ನಂತರದಲ್ಲೇ (1948) ರಲ್ಲೇ ಬಾಲಕಾರ್ಮಿಕ ವಿರೋದಿ ಕಾನೂನು ಜಾರಿ ಮಾಡಲಾಯಿತು. 14 ವರ್ಷದ ಒಳಗಿನ ಮಕ್ಕಳನ್ನು ದುಡಿಸಿಕೊಳ್ಳುವುದು ಅಪರಾಧ ಎಂದು ಪರಿಗಣಿಸಲಾಯಿತು. ನಂತರ ಕಾಲಕಾಲಕ್ಕೆ ಕಾನೂನಿನಲ್ಲಿ ಇದ್ದ ಲೋಪಗಳನ್ನು ತಿದ್ದುಪಡಿ ಮಾಡಲಾಯಿತು. ಇವೆಲ್ಲದರ ಅನುಷ್ಠಾನ ಹೇಗಿದೆ ಎಂಬುದನ್ನು ಸಮಾಜ ಕಲ್ಯಾಣ ಇಲಾಖೆ ಮತ್ತು ಕಾರ್ಮಿಕ ಇಲಾಖೆಯೇ ಹೇಳಬೇಕು.
ಕೇವಲ ಆಚರಣೆ ಮಾಡಿ ಸಾಗಹಾಕಿದರೆ ಸಮಸ್ಯೆಗಳ ಪರಿಹಾರ ಸಾಧ್ಯವೇ ಇಲ್ಲ. ಆಚರಣೆ ಮಾಡಿ ಜಾಹೀರಾತಿಗಳನ್ನು ನೀಡಿದರೆ ಸಮಸ್ಯೆ ಬಗೆ ಹರಿದಂತೆ ಆಗುವುದಿಲ್ಲ.
ಇವುಗಳನ್ನು ಒಮ್ಮೆ ಓದಿ
* 14 ವರ್ಷದ ಒಳಗಿನ ಮಕ್ಕಳಿಂದ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ
* ಶಿಕ್ಷಣ ಮಕ್ಕಳ ಹಕ್ಕು, ಕಡ್ಡಾಯವಾಗಿ ಶಾಲೆಗೆ ಕಳಿಸಿ
* 14 ವರ್ಷದ ಒಳಗಿನ ಮಕ್ಕಳಿಂದ ದುಡಿಸಿಕೊಂಡರೆ 20 ಸಾವಿರ ರೂ. ದಂಡ ಮತ್ತು ಒಂದು ವರ್ಷ ಜೈಲು ಶಿಕ್ಷೆ ವಿಧಿಸಬಹುದು.
* ಹೆಲ್ಪ್ ಲೈನ್- 1098,
* ದುಡಿಯುವ ಮಕ್ಕಳನ್ನು ಕಂಡರೆ ದೂರು ನೀಡಿ: 080 22453549, 080 26541348 ಮತ್ತು ವೆಬ್ ತಾಣ https://www.karnataka.gov.in/karnatakachildlabour/home.aspx ಇ ಮೇಲ್ [email protected] ಗೆ ಸಂಪರ್ಕ ಮಾಡಿ ದೂರು ದಾಖಲಿಸಬಹುದು. ಜತೆಗೆ ಆಯಾ ವಿಭಾಗದ ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಬಹುದು.
-
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Karnataka Weather: ರಾಜ್ಯದಲ್ಲಿ ಏರುತ್ತಿದೆ ಬಿಸಿಲಿನ ಝಳ; ಬೆಂಗಳೂರಿನ ತಾಪಮಾನ 34 ಡಿಗ್ರಿಗೆ ಏರಿಕೆ -
Bengaluru-Hyderabad ಬುಲೆಟ್ ಟ್ರೈನ್: ಕೇವಲ 2 ಗಂಟೆ ಪ್ರಯಾಣ, 626 ಕಿಮೀ ಉದ್ದದ ಹಾದಿಯಲ್ಲಿ 12 ನಿಲ್ದಾಣಗಳು -
ಮಾರ್ಚ್ 3ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಒಂದೇ ವರ್ಷದಲ್ಲಿ 800 ಕೋಟಿ ರೂ ಮೌಲ್ಯದ ಕಂಪನಿ ಕಟ್ಟಿದ 23ರ ಹರೆಯದ ಅಂಜಲಿ ಸರ್ದಾನಾ -
Viral : ರ್ಯಾಪಿಡೋ ಬುಕ್ ಮಾಡಿದವನಿಗೆ ಕಾದಿತ್ತು ಬಿಗ್ ಶಾಕ್: ತನ್ನ ಶಾಲೆಯ 'ಕ್ಲಾಸ್ ಟಾಪರ್' ಈಗ ರ್ಯಾಪಿಡೋ ರೈಡರ್ -
PV Sindhu: ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಪತಿ ಸ್ವಿಮ್ಮಿಂಗ್ ಪೂಲ್ನಲ್ಲಿ ಈಜು ಸಾಹಸ: ಫಿಟ್ನೆಸ್ ತಜ್ಞರು ಹೇಳಿದ್ದೇನು? -
Dog Satish: ಇನ್ಸ್ಟಾಗ್ರಾಂ ಯಾರ ಅಪ್ಪಂದೂ ಅಲ್ಲ, ವಿಡಿಯೋ ಡಿಲೀಟ್ ಮಾಡಲ್ಲ, ನನಗೆ ಮೀಟರ್ ಇದೆ: ಡಾಗ್ ಸತೀಶ್ -
Vrial News: ಕೆಲಸದಿಂದ ತೆಗೆದ ಬಳಿಕ ಪುಕ್ಕಟೆ ಸಹಾಯ ಕೇಳಿದ ಮಾಜಿ ಬಾಸ್: ನೌಕರ ಕೊಟ್ಟ ಉತ್ತರ ವೈರಲ್ -
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Gold Rate: ಚಿನ್ನ, ಬೆಳ್ಳಿ ದರದಲ್ಲಿ ಏರಿಳಿತ; ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ? -
Sourav Ganguly: ಟಿ20 ವಿಶ್ವಕಪ್ 2026; ಸಂಜು ಆಟಕ್ಕೆ ಮನಸೋತು ಬಿಸಿಸಿಐಗೆ ಬಿಸಿ ಮುಟ್ಟಿಸಿದ 'ದಾದಾ' ಸೌರವ್ ಗಂಗೂಲಿ












Click it and Unblock the Notifications