ಮೊಬೈಲ್ ಅಲುಗಾಡಿಸಿ, ಕಾಮಾಂಧರನ್ನು ಹಿಡಿದು ಕೊಡಿ
ಬೆಂಗಳೂರು, ಮಾ. 10: ಮಹಿಳೆಯರು ಇನ್ನು ಮುಂದೆ ದೌರ್ಜನ್ಯಕ್ಕೆ ಹೆದರಬೇಕಾಗಿಲ್ಲ. ಕೈಯಲ್ಲಿರುವ ಸ್ಮಾರ್ಟ್ ಫೋನ್ ನ್ನು ಸೆಕೆಂಡ್ ಕಾಲ ಅಲುಗಾಡಿಸಿದರೆ ಸಾಕು. ಕ್ಷಣ ಮಾತ್ರದಲ್ಲಿ ಆರೋಪಿಗಳನ್ನು ಪೊಲೀಸರ ವಶಕ್ಕೆ ಹಿಡಿದು ಕೊಡಬಹುದು.
ಮಹಿಳೆಯರ ಸುರಕ್ಷತೆ ಮತ್ತು ರಕ್ಷಣೆಗಾಗಿ ಸಿನರ್ಜಿಯಾ ಫೌಂಡೇಶನ್ ಸಂಸ್ಥೆ 'ಎಸ್-ಗಾರ್ಡ್' ಎಂಬ ವಿನೂತನ ಆಪ್ ಅಭಿವೃದ್ಧಿ ಪಡಿಸಿದ್ದು, ಸದ್ಯದಲ್ಲೇ ಜನರ ಬಳಕೆಗೆ ಮುಕ್ತಮಾಡಲಿದೆ.[WhatsApp ಮೂಲಕ ಶೀಘ್ರ ಧ್ವನಿ ಕರೆಯೂ ಸಾಧ್ಯ]

ಆಫ್ರಿಕಾ, ದಕ್ಷಿಣ ಏಷ್ಯಾ, ಆಸ್ಟ್ರೇಲಿಯಾ ಸೇರಿದಂತೆ ಹಲವೆಡೆ ಮಹಿಳೆಯರ ಸುರಕ್ಷತೆಗಾಗಿ ಹಲವಾರು ಅಪ್ಲಿಕೇಶನ್ ಬಳಸುತ್ತಿದ್ದು ಯಶಸ್ವಿಯಾಗಿವೆ. ಹಲವು ತಿಂಗಳ ಕಾಲ ಅಧ್ಯಯನ ನಡೆಸಿ, ಅದೇ ಮಾದರಿಯಲ್ಲಿ ಆಪ್ ಅಭಿವೃದ್ಧಿಪಡಿಸಲಾಗಿದೆ. ವೋಲ್ವೊ ಕಂಪನಿ ಈಗಾಗಲೇ ತನ್ನ ಉದ್ಯೋಗಿಗಳ ಸುರಕ್ಷತೆಗಾಗಿ ಆಪ್ ಪಡೆಯಲು ಮುಂದೆ ಬಂದಿದೆ ಎಂದು ಕಂಪನಿ ಪ್ರಕಟಣೆ ತಿಳಿಸಿದೆ.
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ವಿಶೇಷ ವಿಡಿಯೋ ನೋಡಿ:
ಈ ಬಗ್ಗೆ ಮಾಹಿತಿ ನೀಡಿದ ಸಂಸ್ಥೆ ಅಧ್ಯಕ್ಷ ಟಾಬಿಸೈಮನ್, ಆಪ್ ಬಗ್ಗೆ ಮಾಹಿತಿ ನೀಡಿದ್ದು, ಎಸ್-ಗಾರ್ಡ್ ಆಪ್ ಪಡೆಯುವಂತೆ ಅಪಾರ್ಟ್ಮೆಂಟ್ನ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ, ಶಿಕ್ಷಣ ಸಂಸ್ಥೆಗಳು, ಐಟಿ-ಬಿಟಿ ಕಂಪನಿಗಳೊಂದಿಗೆ ಸಮಾಲೋಚನೆ ನಡೆಸಲಾಗುವುದು. ಈ ಆಪ್ ಕೇವಲ ಮಹಿಳೆಯರಿಗಷ್ಟೇ ಅಲ್ಲ, ಹಿರಿಯ ನಾಗರಿಕರು ಮತ್ತು ಅಂಗವಿಕಲರಿಗೂ ನೆರವಾಗಲಿದೆ ಎಂದು ಹೇಳಿದ್ದಾರೆ. [ಬಿಎಂಟಿಸಿ ಮಾಹಿತಿಯನ್ನು ಮೊಬೈಲ್ ನಲ್ಲಿ ಪಡೆಯಿರಿ]
ಆಪ್ ಕಾರ್ಯನಿರ್ವಹಣೆ ಹೇಗೆ?
ಮಹಿಳೆಯರು, ಹಿರಿಯನಾಗರಿಕರು ಮನೆಯಿಂದ ಹೊರ ಹೋಗುವ ಸಂದರ್ಭದಲ್ಲಿ ಆಪ್ ಅನ್ನು ಚಾಲನೆಯಲ್ಲಿ ಇಟ್ಟುಕೊಂಡಿರಬೇಕು. ಅಪಾಯ ಎದುರಾದಾಗ 3-4 ಸೆಕೆಂಡ್ ಕಾಲ ಮೊಬೈಲ್ ಅನ್ನು ಅಲುಗಾಡಿಸಿದರೆ ಸಾಕು, ಪೊಲೀಸ್ ನಿಯಂತ್ರಣ ಕೊಠಡಿಗೆ ಸಂದೇಶ ರವಾನೆಯಾಗುತ್ತದೆ. ಲಾಗ್ ಇನ್ ಆದಾಗ ದಾಖಲು ಮಾಡಿದ ಕುಟುಂಬ ಸದಸ್ಯರು, ಸ್ನೇಹಿತರ ಮೊಬೈಲ್ ಸಂಖ್ಯೆಗೆ ಎಚ್ಚರಿಕೆಯ ಸಂದೇಶ ರವಾನೆಯಾಗುತ್ತದೆ.
ಮೊಬೈಲ್ ಅನ್ನು ಅಲುಗಾಡಿಸಿದಾಗ ಸ್ವಯಂ ಚಾಲಿತವಾಗಿ ವಿಡಿಯೊ ರೆಕಾರ್ಡ್ ಚಾಲನೆಗೊಳ್ಳುತ್ತದೆ. ಘಟನಾ ಸ್ಥಳದ ಆಡಿಯೊ ಮತ್ತು ವಿಡಿಯೊ ದೃಶ್ಯಾವಳಿಯು ನಿಯಂತ್ರಣ ಕೊಠಡಿ ಹಾಗೂ ಕುಟುಂಬ ಸದಸ್ಯರಿಗೆ ತಲುಪುತ್ತದೆ. ಬಳಕೆದಾರರು ಎಲ್ಲಿದ್ದಾರೆಂಬುದು ಜಿಪಿಎಸ್ ಮೂಲಕ ಗೊತ್ತಾಗುವುದರಿಂದ ಆರೋಪಿಗಳ ಪತ್ತೆಗೆ ಸಾಧ್ಯವಾಗುತ್ತದೆ.
-
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral












Click it and Unblock the Notifications