ಕಾಂಗ್ರೆಸ್ ನಿಂದ ಕಾಂಗ್ರೆಸ್ಸಿಗಾಗಿ ರಾಷ್ಟ್ರೀಯ ವಾಹಿನಿ!
ನವದೆಹಲಿ, ಆಗಸ್ಟ್ 12: ಸಾಮಾಜಿಕ ಜಾಲ ಕ್ರಾಂತಿಗೆ ಇನ್ನೂ ಒಗ್ಗಿಲ್ಲದ ಕಾಂಗ್ರೆಸ್ ಮತ್ತೊಮ್ಮೆ ತನ್ನ ಹಳೆ ತಂತ್ರಕ್ಕೆ ಶರಣಾಗಲು ಸಿದ್ಧವಾಗುತ್ತಿದೆ. ದೇಶದ ಹಲವು ರಾಜ್ಯಗಳಲ್ಲಿರುವ ವ್ಯವಸ್ಥೆಯನ್ನು ಈಗ ರಾಷ್ಟ್ರಮಟ್ಟಕ್ಕೇರಿಸುವ ಯೋಚನೆ ಹಾಕಿಕೊಂಡಿದೆ. ಹೌದು, ಕಾಂಗ್ರೆಸ್ ತನ್ನದೇ ಆದ ಪ್ರತ್ಯೇಕ ರಾಷ್ಟ್ರೀಯ ವಾಹಿನಿ ಹೊಂದುವ ಇಚ್ಛೆ ವ್ಯಕ್ತಪಡಿಸಿದೆ.
ಅದರೆ, ಹೊಸದಾಗಿ ರಾಷ್ಟ್ರೀಯ ವಾಹಿನಿ ಆರಂಭಕ್ಕೆ ಅಡ್ಡಿ ಆತಂಕ ಎದುರಾಗುವ ಸಾಧ್ಯತೆ ಇರುವುದರಿಂದ ಈಗ ಚಾಲ್ತಿಯಲ್ಲಿರುವ ಪ್ರಾದೇಶಿಕ ವಾಹಿನಿಯೊಂದನ್ನು ಕಾಂಗ್ರೆಸ್ ಮುಖವಾಣಿಯಾಗಿ ರಾಷ್ಟ್ರೀಯ ಮಟ್ಟದಲ್ಲಿ ಬಿಂಬಿಸಲು ಕಾಂಗ್ರೆಸ್ ಸಜ್ಜಾಗಿದೆ ಎಂಬುದರ ಬಗ್ಗೆ ಹಿರಿಯ ಕಾಂಗ್ರೆಸ್ಸಿಗ, ಮಾಜಿ ಕೇಂದ್ರ ಸಚಿವ ಎಕೆ ಅಂಟನಿ ಸುಳಿವು ನೀಡಿದ್ದಾರೆ.

ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ಪರವಾಗಿ ಅಲ್ಲಿನ ಜೈಹಿಂದ್ ಟಿವಿ ಕಾರ್ಯ ನಿರ್ವಹಿಸುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ಈಗ ಜೈಹಿಂದ್ ಟಿವಿಯ ಹೊಸ ಕಚೇರಿ ಆರಂಭಗೊಂಡ ಬೆನ್ನಲ್ಲೇ ಈ ಬಗ್ಗೆ ಅಂಟನಿ ಮಾಧ್ಯಮಗಳಿಗೆ ತಿಳಿಸಿದರು.
ಅತ್ಯಾಧುನಿಕ ಮಾಧ್ಯಮ ಬಳಕೆಯಲ್ಲಿ ಕಾಂಗ್ರೆಸ್ ಹಿಂದೆ ಉಳಿದಿರುವುದನ್ನು ಒಪ್ಪಿಕೊಂಡ ಅಂಟನಿ, ಈಗ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಅಣತಿಯಂತೆ ರಾಷ್ಟ್ರೀಯ ಸುದ್ದಿ ವಾಹಿನಿಯನ್ನು ಕಾಂಗ್ರೆಸ್ ಪರ ಪ್ರಚಾರಕ್ಕೆ ಬಳಸಲು ನಿರ್ಧರಿಸಲಾಗಿದೆ. ಈ ಸುದ್ದಿಯನ್ನು ಕೇಳಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ
ಕಾಂಗ್ರೆಸ್ ಸರ್ಕಾರ ಕೈಗೊಂಡ ಯೋಜನೆಗಳು, ಆಶಯಗಳು ಹಾಗೂ ಯೋಜನೆಗಳ ಬಗ್ಗೆ ಈ ವಾಹಿನಿ ಮೂಲಕ ಎಲ್ಲಾ ಜನರಿಗೆ ಸುದ್ದಿ ಮುಟ್ಟಲಿದೆ ಎಂದು ಅಂಟನಿ ಹೇಳಿದ್ದಾರೆ.
2007ರಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಂದ ಆರಂಭಗೊಂಡ ಜೈ ಹಿಂದ್ ಟಿವಿ ಕಳೆದ ಎಂಟು ವರ್ಷಗಳಿಂದ ಕೇರಳ ಕಾಂಗ್ರೆಸ್ ಪರ ಪ್ರಚಾರ ನೀಡುತ್ತಿದೆ. (ಪಿಟಿಐ)
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications