ಇಂದು ಡಾ. ಶಿವಕುಮಾರ ಶ್ರೀಗಳ 117ನೇ ಜಯಂತಿ: ಮೋದಿ ನಮನ
ತ್ರಿವಿಧ ದಾಸೋಹಿ, ನಡೆದಾಡುವ ದೇವರೆಂದೇ ಖ್ಯಾತಿವೆತ್ತ ಸಿದ್ದಗಂಗೆಯ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ 117ನೇ ಜಯಂತಿ ಹಾಗೂ ಗುರುವಂದನ ಮಹೋತ್ಸವ ಇಂದು ಸಿದ್ದಗಂಗಾ ಮಠದಲ್ಲಿ ನಡೆಯುತ್ತಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲಿ ನಮನ ಸಲ್ಲಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಶಿವಕುಮಾರ ಶ್ರೀಗಳ 117ನೇ ಜಯಂತಿ ಹಿನ್ನೆಲೆ ಎಕ್ಸ್ ಮೂಲಕ ಕನ್ನಡದಲ್ಲಿ ಬರೆಯುವ ಮೂಲಕ ನಮನ ಸಲ್ಲಿಸಿದ್ದಾರೆ. 'ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ಅವರಿಗೆ ನಮನಗಳು. ನಿಸ್ವಾರ್ಥ ಮತ್ತು ಕರುಣೆಯ ನೈಜ ಸಾಕಾರಮೂರ್ತಿಗಳಾಗಿದ್ದ ಶ್ರೀಗಳು ಸಮಾಜ ಸೇವೆಗೆ ಅಪ್ರತಿಮ ಕೊಡುಗೆಗಳನ್ನು ನೀಡಿದ್ದಾರೆ. ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕ ಅಭಿವೃದ್ಧಿಯಲ್ಲಿ ಅವರ ಕೆಲಸವು ಲಕ್ಷಾಂತರ ಜನರ ಜೀವನವನ್ನು ತಲುಪಿದೆ ಮತ್ತು ಸಮರ್ಪಣೆ ಹಾಗೂ ಮಾನವೀಯ ಸೇವೆಗೆ ಅತ್ಯುನ್ನತ ಉದಾಹರಣೆಯಾಗಿದೆ. ನಮ್ಮ ಸಮಾಜದ ಕುರಿತಾಗಿ ಶ್ರೀಗಳ ಆಶಯವನ್ನು ಈಡೇರಿಸುವ ನಿಟ್ಟಿನಲ್ಲಿ ನಾವು ನಿರಂತರ ಕಾರ್ಯಮಗ್ನರಾಗಿರುತ್ತೇವೆ' ಎಂದು 'ಎಕ್ಸ್' ನಲ್ಲಿ ಬರೆದಿದ್ದಾರೆ.

ತುಮಕೂರು ಶ್ರೀಮಠದಲ್ಲಿ ಬೆಳಗ್ಗೆಯ ಕಾರ್ಯಕ್ರಮವನ್ನು ಪತಂಜಲಿ ಯೋಗಪೀಠದ ಬಾಬಾ ರಾಮದೇವ್ ಉದ್ಘಾಟನೆ ಮಾಡಿದರು. ಸಿದ್ದಗಂಗಾ ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸುತ್ತೂರು ಶ್ರೀ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು.
ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ಅವರಿಗೆ ನಮನಗಳು. ನಿಸ್ವಾರ್ಥ ಮತ್ತು ಕರುಣೆಯ ನೈಜ ಸಾಕಾರಮೂರ್ತಿಗಳಾಗಿದ್ದ ಶ್ರೀಗಳು ಸಮಾಜ ಸೇವೆಗೆ ಅಪ್ರತಿಮ ಕೊಡುಗೆಗಳನ್ನು ನೀಡಿದ್ದಾರೆ. ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕ ಅಭಿವೃದ್ಧಿಯಲ್ಲಿ ಅವರ ಕೆಲಸವು ಲಕ್ಷಾಂತರ ಜನರ ಜೀವನವನ್ನು ತಲುಪಿದೆ ಮತ್ತು ಸಮರ್ಪಣೆ ಹಾಗೂ…
— Narendra Modi (@narendramodi) April 1, 2024
ಜೊತೆಗೆ ಮುಂಡರಗಿ ಅನ್ನದಾನೇಶ್ವರ ಮಠಾಧ್ಯಕ್ಷ ಡಾ. ಅನ್ನದಾನೇಶ್ವರ ಸ್ವಾಮೀಜಿ, ಧಾರವಾಡ ಶ್ರೀ ಮುರುಘಾ ಮಠದ ಡಾ. ಮಲ್ಲಿಕಾರ್ಜುನ ಸ್ವಾಮೀಜಿ, ಗದಗದ ಶ್ರೀ ವೀರೇಶ್ವರ ಪುಣ್ಯಾಶ್ರಮದ ಅಧ್ಯಕ್ಷರಾದ ಶ್ರೀ ಕಲ್ಲಯ್ಯ ಅಜ್ಜನವರು, ಸಿದ್ದಗಂಗಾ ಮಠದ ಉತ್ತರಾಧಿಕಾರಿ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ ಅವರೂ ಈ ವೇಳೆ ಉಪಸ್ಥಿತರಿದ್ದರು.
ಈ ದಿನ ಆರು ಕಡೆ ದಾಸೋಹ ವ್ಯವಸ್ಥೆ ಮಾಡಲಾಗಿದೆ. ಒಂದೇ ಬಾರಿಗೆ ಮೂವತ್ತು ಸಾವಿರ ಭಕ್ತರು ಕುಳಿತು ಊಟ ಮಾಡುವ ವ್ಯವಸ್ಥೆ ಕೂಡ ಮಾಡಲಾಗಿದೆ. ಬೆಳಗ್ಗೆಯಿಂದ ರಾತ್ರಿವರೆಗೂ ದಾಸೋಹ ನಡೆಯಲಿದೆ.

ಇದುವರೆಗೆ 128 ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿರುವ ಸಿದ್ದಗಂಗಾ ಶ್ರೀಗಳು, ಎಪ್ಪತ್ತರ ದಶಕದ ಸುಮಾರಿನಲ್ಲಿ ಎರಡು ಸಾವಿರ ವಿದ್ಯಾರ್ಥಿಗಳ ಮೂಲಕ ಅಕ್ಷರ ದಾಸೋಹ ಆರಂಭಿಸಿದ್ದರು.ಭಕ್ತರು ಬೆಳೆದರೆ, ಮಠ ಬೆಳೆಯುತ್ತದೆ, ಮಠ ಬೆಳೆದರೆ ನಮ್ಮಂತಹ ಸ್ವಾಮೀಜಿಗಳು ಬೆಳೆಯುತ್ತಾರೆ ಎನ್ನುತ್ತಿದ್ದ ಸಿದ್ದಗಂಗಾ ಶ್ರೀಗಳು, ತಮ್ಮ ಪ್ರವಚನ ಮತ್ತು ಭಾಷಣದಲ್ಲಿ ಈ ರೀತಿಯ ಹಲವಾರು ವಾಣಿಗಳನ್ನು ಹೇಳುತ್ತಿದ್ದರು.
-
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ: 13,712 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ ಎಸ್ಐಟಿ -
Viral Video: 'ಓಂಕಾರ' ಚಿತ್ರದ ಬೀಡಿ ಜಲೈಲೆ ಹಾಡಿಗೆ ಸಖತ್ ಸ್ಟೆಪ್ಸ್ ಹಾಕಿದ ಬ್ರೆಜಿಲ್ ಬೆಡಗಿಯರು -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ












Click it and Unblock the Notifications