ಭಾರತದಲ್ಲಿ ಇಂದು 227 ಹೊಸ ಕೋವಿಡ್ ಕೇಸ್ ಪತ್ತೆ: ವಿವಿಧ ರಾಜ್ಯಗಳಲ್ಲಿ ಕೈಗೊಂಡ ಕ್ರಮಗಳೇನು? ತಿಳಿಯಿರಿ

ಬೆಂಗಳೂರು, ಡಿಸೆಂಬರ್ 25: ಭಾರತದಲ್ಲಿ ಭಾನುವಾರ 227 ಹೊಸ ಕೊರೊನಾ ಸೋಂಕಿನ ಪ್ರಕರಣಗಳು ಕಂಡು ಬಂದಿವೆ. ಇದರಿಂದ ದೇಶದಲ್ಲಿನ ಸಕ್ರಿಯ ಕೇಸ್‌ಗಳ ಒಟ್ಟು ಸಂಖ್ಯೆ 3,424ಕ್ಕೆ ಏರಿದೆ. ಈ ಕಾರಣದಿಂದ ವಿವಿಧ ರಾಜ್ಯಗಳು ಕೋವಿಡ್ ತಪಾಸಣೆ, ಲಸಿಕೆ ನೀಡಿಕೆ ಪ್ರಮಾಣ ಹೆಚ್ಚಿಸಿ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿವೆ.

ದೇಶವ ವಿವಿಧ ರಾಜ್ಯಗಳಲ್ಲೂ ದಿನೇ ದಿನೆ ಕೊರೊನಾ ಭೀತಿ ಆವರಿಸುತ್ತಿದೆ. ಹೀಗಾಗಿ ಹಲವು ರಾಜ್ಯಗಳು ಮೇಲಿಂದ ಮೇಲೆ ಸಭೆ ನಡೆಸಿ ಅಗತ್ಯ ಕ್ರಮಕೈಗೊಂಡಿವೆ. ಆಯಾ ರಾಜ್ಯಗಳ ಪರಿಸ್ಥಿತಿ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಬಿಹಾರ: ರಾಜ್ಯದಲ್ಲಿ ಚೀನಾ ಮತ್ತು ಇತರ ಕೆಲವು ದೇಶಗಳಲ್ಲಿ ಕೋವಿಡ್ -19 ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಕೊರೊನಾ ವೈರಸ್ ಸೋಂಕಿನ ವಿರುದ್ಧ ಸುಮಾರು 40,000 -50,000 ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಅಲ್ಲದೆ, ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದ್ದು, ಹೈ ಅಲರ್ಟ್ ಆಗಿದೆ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.

ಕರ್ನಾಟಕದಲ್ಲೂ ಹೈ ಅಲರ್ಟ್: ಸಿಎಂ

ಕರ್ನಾಟಕದಲ್ಲೂ ಹೈ ಅಲರ್ಟ್: ಸಿಎಂ

ಕರ್ನಾಟಕ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಿಸೆಂಬರ್ 24 ರಂದು ಜನರು ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರ ಕೋವಿಡ್ ನಿಯಂತ್ರಿಸಲು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಬೂಸ್ಟರ್ ಡೋಸ್ ವ್ಯಾಪ್ತಿಯನ್ನು ಹೆಚ್ಚಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮಹಾರಾಷ್ಟ್ರ: ರಾಜ್ಯ ಆರೋಗ್ಯ ಸಚಿವ ತಾನಾಜಿ ಸಾವಂತ್ ಅವರು ಗುರುವಾರ ಕೋವಿಡ್ 19 ಪ್ರಕರಣಗಳ ಇತ್ತೀಚಿನ ಬೆಳೆವಣಿಗೆ ಗಮನದಲ್ಲಿಟ್ಟುಕೊಂಡು ಕೊರೊನಾ ಪರೀಕ್ಷೆ, ಟ್ರ್ಯಾಕಿಂಗ್, ಚಿಕಿತ್ಸೆ, ಲಸಿಕೆ ಮತ್ತು ಕೋವಿಡ್-ಸೂಕ್ತ ಪರಿಹಾರ ಮಾರ್ಗಗಳು ಎಂಬ 5 ಅಂಶಗಳ ಕಾರ್ಯಕ್ರಮ ಜಾರಿಗೆ ತರಲಾಗಿದೆ. ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಯಾದೃಚ್ಛಿಕ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತದೆ. ಎಲ್ಲೆಡೆ ಕಟ್ಟೆಚ್ಚವಹಿಸಲಾಗಿದೆ.

ತಾಜಮಹಲ್ ಪ್ರವೇಶಕ್ಕೆ ಲಸಿಕೆ ಕಡ್ಡಾಯ

ತಾಜಮಹಲ್ ಪ್ರವೇಶಕ್ಕೆ ಲಸಿಕೆ ಕಡ್ಡಾಯ

ಉತ್ತರ ಪ್ರದೇಶ: ಇಲ್ಲಿನ ತಾಜ್ ಮಹಲ್ ಮತ್ತು ರಾಜ್ಯದ ಇತರ ಜನಪ್ರಿಯ ಸ್ಥಳಗಳಿಗೆ ಪ್ರವೇಶಿಸಲು ರಾಜ್ಯ ಸರ್ಕಾರ ಗುರುವಾರ ಕೊರೊನಾ ಪರೀಕ್ಷೆಯನ್ನು ಕಡ್ಡಾಯಗೊಳಿಸಿದೆ. ಹೊಸ ಪ್ರಕರಣಗಳ ಜೀನೋಮ್ ಸೀಕ್ವೆನ್ಸಿಂಗ್ ನಡೆಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಲ್ಲದೆ, ಜನರು ಮಾಸ್ಕ್‌ಗಳನ್ನು ಬಳಸಲು ಪ್ರಾರಂಭಿಸಲು, ಲಸಿಕೆಗಳನ್ನು ಪಡೆಯಲು ಮತ್ತು ಇತರ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ತಿಳಿಸುವಂತೆ ಅವರು ಅಧಿಕಾರಿಗಳಿಗೆ ತಿಳಿಸಿದರು.

ಡಿ.26ಕ್ಕೆ ಉನ್ನತ ಮಟ್ಟದ ಸಭೆ

ಡಿ.26ಕ್ಕೆ ಉನ್ನತ ಮಟ್ಟದ ಸಭೆ

ನವದೆಹಲಿ: ದೆಹಲಿ ಆರೋಗ್ಯ ಕಾರ್ಯದರ್ಶಿ ಅಮಿತ್ ಸಿಂಗ್ಲಾ ಅವರು ಡಿಸೆಂಬರ್ 25 ರಂದು ಎಲ್ಲಾ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳೊಂದಿಗೆ ಸಭೆ ನಡೆಸಿದರು. ದೆಹಲಿಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಅಧಿಕಾರಿಗಳು ಭೌತಿಕವಾಗಿ ಭೇಟಿ ನೀಡಲಿದ್ದಾರೆ ಮತ್ತು ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಅವರ ಸನ್ನದ್ಧತೆಯನ್ನು ಖಚಿತಪಡಿಸಿಕೊಳ್ಳಲಿದ್ದಾರೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ಜಾರ್ಖಂಡ್: ಕೋವಿಡ್ 19 ಪರಿಸ್ಥಿತಿಗೆ ರಾಜ್ಯ ಸರ್ಕಾರದ ಸಿದ್ಧತೆಗಳನ್ನು ಪರಿಶೀಲಿಸಲು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಡಿಸೆಂಬರ್ 26 (ಸೋಮವಾರ) ರಂದು ಉನ್ನತ ಮಟ್ಟದ ಸಭೆ ನಡೆಸುವ ಸಾಧ್ಯತೆಯಿದೆ. ಬಳಿಕ ಇನ್ನಷ್ಟು ಪರಿಣಾಮಕಾರಿ ಕ್ರಮ ಕೈಗೊಳ್ಳುವ ನಿರೀಕ್ಷೆ ಇದೆ ಎಂದು ಅಲ್ಲಿನ ಅಧಿಕಾರಿಯೊಬ್ಬರು ಹೇಳಿದದ್ದಾರೆ.

ಸಭೆ ನಡೆಸಿ ಸಲಹೆ ನೀಡಿದ ಪ್ರಧಾನಿ ಮೋದಿ

ಸಭೆ ನಡೆಸಿ ಸಲಹೆ ನೀಡಿದ ಪ್ರಧಾನಿ ಮೋದಿ

ಇದೇ ರೀತಿಯ ಕ್ರಮಗಳನ್ನು ಹಲವು ರಾಜ್ಯಗಳು ತೆಗೆದುಕೊಂಡಿವೆ ಮತ್ತು ಕೆಲವು ರಾಜ್ಯಗಳು ಪರಿಸ್ಥಿತಿಯನ್ನು ನೋಡಿದ ನಂತರ ಕೆಲವು ಸಮಸ್ಯೆಗಳ ಸಲಹೆಯನ್ನು ತೆಗೆದುಕೊಳ್ಳಲು ಯೋಜಿಸುತ್ತಿವೆ. ಇದಕ್ಕೂ ಮುನ್ನ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ, ಕೋವಿಡ್ ರೂಪಾಂತರ ಬಿಎಫ್.7 ಹರಡುವಿಕೆಯನ್ನು ನಿಯಂತ್ರಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅವರು ರಾಜ್ಯಗಳಿಗೆ ಸಲಹೆ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+