ದಿನದ ಪ್ರಮುಖ ಸುದ್ದಿ ಜೊತೆಗೆ ಪಟಪಟ ಪಿಟಿಐ ಫೋಟೋ ನೋಡಿ
ದೆಹಲಿ, ಡಿಸೆಂಬರ್.26: ದೇಶದ ಮಟ್ಟಿಗಷ್ಟೇ ಅಲ್ಲ. ಜಗತ್ತಿನ ಪಾಲಿಗೆ ಡಿಸೆಂಬರ್.26ರ ಗುರುವಾರ ವಿಶೇಷವಾಗಿತ್ತು. ಇಡೀ ವಿಶ್ವವೇ ಬಾಹ್ಯಾಕಾಶದಲ್ಲಿ ಸೃಷ್ಟಿಯಾಗುವ ಕೌತುಕವನ್ನು ಎದುರು ನೋಡುತ್ತಾ ನಿಂತಿದ್ದರು. ಜನರೆಲ್ಲ ಸೂರ್ಯನತ್ತ ದಿಟ್ಟಿಸಿ ನೋಡುತ್ತಿದ್ದರು. ಅದಕ್ಕೆ ಕಾರಣವಾಗಿದ್ದೇ ಕಂಕಣ ಸೂರ್ಯಗ್ರಹಣ.
ಬಾಹ್ಯಾಕಾಶದಲ್ಲಿ ನಡೆದ ಕೌತುಕವು ಎಲ್ಲರಲ್ಲೂ ಅಚ್ಚರಿ ಮೂಡಿಸುವಂತಿತ್ತು. ಬೆಳಗ್ಗೆ 8 ಗಂಟೆ 6 ನಿಮಿಷಕ್ಕೆ ಆರಂಭವಾದ ಸೂರ್ಯಗ್ರಹಣ 11 ಗಂಟೆ 11 ನಿಮಿಷಕ್ಕೆ ಅಂತ್ಯಗೊಂಡಿತು. ಅಪರೂಪಕ್ಕೊಮ್ಮೆ ಸಂಭವಿಸುವ ಕಂಕಣ ಸೂರ್ಯಗ್ರಹಣವನ್ನು ದೇಶಾದ್ಯಂತ ಜನರು ಕುತೂಹಲದಿಂದ ಕಣ್ತುಂಬಿಕೊಂಡರು.
ಗುರುವಾರ ನಡೆದ ಪ್ರಮುಖ ಘಟನೆಗಳನ್ನು ಚಿತ್ರರೂಪದಲ್ಲಿ ತೋರಿಸುವ ಹಾಗೂ ಅವರ ಬಗ್ಗೆ ಮಾಹಿತಿ ನೀಡುವುದೇ ಈ ವರದಿಯ ಮುಖ್ಯ ಉದ್ದೇಶ. ಪಿಟಿಐನಿಂದ ಆಯ್ದ ಚಿತ್ರಗಳು ಹಾಗೂ ಅವುಗಳ ಪ್ರಾಮುಖ್ಯತೆಯನ್ನು ಈ ವರದಿಯಲ್ಲಿ ಸಂಕ್ಷಿಪ್ತವಾಗಿ ವಿವರಿಸಲಾಗಿದೆ.

ಕೇರಳದಲ್ಲಿ ಕಂಡ ಕಂಕಣ ಸೂರ್ಯ ಗ್ರಹಣ
ಗುರುವಾರ ದೇಶಾದ್ಯಂತ ಕಂಕಣ ಸೂರ್ಯಗ್ರಹಣ ಸಂಭವಿಸಿತು. ಸೂರ್ಯಗ್ರಹಣದ ಆರಂಭದಿಂದ ಅಂತ್ಯದವರೆಗೂ ಸೂರ್ಯನ ಚಿತ್ರ ಹೇಗಿತ್ತು ಎಂಬುದನ್ನು ಸ್ಪಷ್ಟವಾಗಿ ಈ ಚಿತ್ರವು ಹೇಳುತ್ತದೆ. ಕೇರಳದ ಕೋಜಿಕೋಡ್ ಬಳಿ ವದಕರ್ ಬಳಿ ಸೆರೆ ಹಿಡಿದ ಸೂರ್ಯಗ್ರಹಣದ ಚಿತ್ರವಿದು.

ಸೂರ್ಯಗ್ರಹಣ ವೀಕ್ಷಣೆಗೆ ಅಡ್ಡವಾದಲ ಮೋಡಗಳು
ದೇಶದ ಪ್ರಜೆಗಳಷ್ಟೇ ಅಲ್ಲ. ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿ ಕೂಡಾ ಸೂರ್ಯಗ್ರಹಣ ವೀಕ್ಷಿಸಲು ಕಾತರರಾಗಿದ್ದರು. ಆದರೆ, ಮೋಡಗಳು ಅಡ್ಡಿಯಾಗಿದ್ದರಿಂದ ಗ್ರಹಣ ವೀಕ್ಷಿಸಲು ಆಗಲಿಲ್ಲ ಎಂದು ಟ್ವಿಟರ್ ನಲ್ಲಿ ಬರೆದುಕೊಂಡರು. ಇದಾಗಿ ಕೆಲ ಗಂಟೆಗಳಲ್ಲೇ ಈ ಚಿತ್ರ ಟ್ರೋಲ್ ಪೇಜ್ ಗಳಿಗೆ ಆಹಾರವಾಗಿ ಬಿಟ್ಟಿತು. ಅದನ್ನು ಅರಿತ ಪ್ರಧಾನಮಂತ್ರಿ ನರೇಂದ್ರ ಮೋದಿ, ಎಷ್ಟಾದರೂ ಟ್ರೋಲ್ ಮಾಡಿಕೊಳ್ಳಿ ಎಂದು ಮತ್ತೊಂದು ಟ್ವೀಟ್ ಮಾಡಿದರು.

ಹೆತ್ತವಳ ಜೊತೆ ಸೂರ್ಯಗ್ರಹಣ ವೀಕ್ಷಿಸಿದ ಕಂದ
ಒಂದು ಕಡೆ ಪ್ರಧಾನಿ ಸೂರ್ಯಗ್ರಹಣ ವೀಕ್ಷಿಸಲು ಸಾಧ್ಯವಾಗಲಿಲ್ಲ ಎಂದು ಟ್ವೀಟ್ ಮಾಡಿದರು. ಇತ್ತ ಬಿಹಾರದ ಪಾಟ್ನಾದಲ್ಲಿ ಜನರು ಕೌತಕದಿಂದ ಆಕಾಶದತ್ತ ಮುಖ ಮಾಡಿ ನಿಂತಿದ್ದರು. ಈ ಪೈಕಿ ತನ್ನ ಪುಟ್ಟ ಕಂದನನ್ನು ಕಂಕಳಲ್ಲಿ ಎತ್ತುಕೊಂಡ ಹೆತ್ತಮ್ಮ ತನ್ನ ಜೊತೆಗೆ ಮಗುವಿಗೂ ಕೂಡಾ ಸೂರ್ಯಗ್ರಹಣದ ದರ್ಶನ ಮಾಡಿಸಿದರು.

ಮರಳಿನಲ್ಲಿ ಹೂತುಕೊಂಡ ವ್ಯಕ್ತಿ: ಕಾರಣ ಗೊತ್ತಾ?
ಕಂಕಣ ಸೂರ್ಯ ಗ್ರಹಣ ಸಂದರ್ಭದಲ್ಲಿ ಜನರ ಆಚರಣೆಗಳು ತೀರಾ ವಿಭಿನ್ನವಾಗಿರುತ್ತವೆ. ಇದು ಭಾರತಕ್ಕಷ್ಟೇ ಸೀಮಿತವಾಗಿಲ್ಲ. ನೆರೆರಾಷ್ಟ್ರ ಪಾಕಿಸ್ತಾನದಲ್ಲೂ ಈ ನಂಬಿಕೆಗಳು ಇಂದಿಗೂ ಜೀವಂತವಾಗಿವೆ ಎಂಬುದಕ್ಕೆ ಈ ಚಿತ್ರವೇ ಜೀವಂತ ಉದಾಹರಣೆ. ಸೂರ್ಯಗ್ರಹಣದ ಸಮಯದಲ್ಲಿ ಕರಾಚಿ ಬಳಿ ವ್ಯಕ್ತಿಯೊಬ್ಬ ತನ್ನ ಕತ್ತನ್ನು ಹೊರತುಪಡಿಸಿ ತನ್ನ ಇಡೀ ದೇಹವನ್ನು ಮರಳಿನಿಂದ ಮುಚ್ಚಿಕೊಂಡಿದ್ದನು.

ಸಮುದ್ರ ತೀರ ನನೆಪಿಸಿದ ಕಹಿ ನೆನಪಿಗೆ 15 ವರ್ಷ
ಪುಟ್ಟ ಮಗುವನ್ನು ಎತ್ತಿಕೊಂಡು ಸಮುದ್ರದ ಅಳೆಗಳನ್ನು ವೀಕ್ಷಿಸುತ್ತಿರುವ ಈ ತಾಯಿಯ ಎದೆಯಲ್ಲಿ ಕಹಿ ನೆನಪಿನ ಅಲೆಗಳು ಅಪ್ಪಳಿಸುತ್ತಿದ್ದವು. ಸರಿಯಾಗಿ 15 ವರ್ಷಗಳ ಹಿಂದೆ ಸಂಭವಿಸಿದ ಕಹಿ ನೆನಪು ಅದು. ಡಿಸೆಂಬರ್.26ರ 2004ರಲ್ಲಿ ತಮಿಳುನಾಡಿನಲ್ಲಿ ರಕ್ಕಸ ಸುನಾಮಿ ಅಪ್ಪಳಿಸಿತ್ತು. ಪ್ರಕೃತಿ ವಿಕೋಪಕ್ಕೆ ಸಾವಿರ ಸಾವಿರ ಕುಟುಂಬಗಳು ಬೀದಿಗೆ ಬಂದಿದ್ದವು.
-
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ -
ಮ್ಯಾಕ್ಸ್ವೆಲ್, ಗೇಲ್ ರೆಕಾರ್ಡ್ ಬ್ರೇಕ್: ವಿಶ್ವದಾಖಲೆ ಮಾಡಿದ ಫಿನ್ ಅಲೆನ್ಗೆ ಸಚಿನ್ ತೆಂಡೂಲ್ಕರ್ ವಿಶೇಷ ಸಂದೇಶ -
Petrol - Diesel: ಪೆಟ್ರೋಲ್ - ಡೀಸೆಲ್ ಖರೀದಿಗೆ ಮುಗಿ ಬಿದ್ದ ಜನ ವಿಡಿಯೋ ವೈರಲ್: ಕೇಂದ್ರ ಸರ್ಕಾರ ಹೇಳಿದ್ದೇನು -
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್ ಅದ್ಧೂರಿ ವಿವಾಹ -
Gold Rate March 05: ಮಧ್ಯಪ್ರಾಚ್ಯ ಯುದ್ಧದ ನಡುವೆ ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಇಳಿಕೆ: ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka School Fee: ಪ್ರೈವೇಟ್ ಸ್ಕೂಲ್ ಫೀ ಮತ್ತೆ ದುಬಾರಿ: ಶುಲ್ಕ ಹೆಚ್ಚಿಸಲು ಸಜ್ಜಾದ ಖಾಸಗಿ ಶಾಲೆಗಳು, ಪೋಷಕರಲ್ಲಿ ಆತಂಕ -
''ತೆರಿಗೆ ಹೇರುವ ರಾಮಯ್ಯನಿಂದ ರಾಜ್ಯದಲ್ಲಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡನೆ'' -
ಕೈಚೆಲ್ಲಿ ನಿಂತ ಸಿಂಗಂ ಪೊಲೀಸರು, ದೈನೇಸಿ ಸ್ಥಿತಿಗೆ ಜನಸಾಮಾನ್ಯರು: ಪುಂಡರಿಗೆ ಹೆದರಿದ ಬೆಂಗಳೂರು - ರವಿಕೃಷ್ಣಾ ರೆಡ್ಡಿ ಬರಹ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ












Click it and Unblock the Notifications