Today Politics: ಚುನಾವಣಾ ಆಯುಕ್ತರ ಆಯ್ಕೆ ಸಭೆ, ಸಿಎಂ ನಿತೀಶ್ ದೆಹಲಿಗೆ, ಶೇಖ್ ಹಸೀನಾ ಪ್ರಮಾಣ ವಚನ, ಕೇಜ್ರಿವಾಲ್ ವಿಚಾರಣೆ
ದೆಹಲಿ ಫೆಬ್ರವರಿ 7: ಪ್ರಧಾನ ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮಿತಿಯು ಇಂದು (ಫೆಬ್ರವರಿ 7) ಮೊದಲ ಬಾರಿಗೆ ಸಭೆ ಸೇರಲಿದೆ. ನೂತನ ಚುನಾವಣಾ ಆಯುಕ್ತರ ಆಯ್ಕೆಗಾಗಿ ಪ್ರಧಾನಿ ಮೋದಿಯವರ ಈ ಸಭೆ ವಿಶೇಷವಾಗಿದೆ.
ಫೆಬ್ರವರಿ 14 ರಂದು ಚುನಾವಣಾ ಆಯುಕ್ತ ಅನುಪ್ ಚಂದ್ರ ಪಾಂಡೆ ಅವರು ಹುದ್ದೆಯಿಂದ ನಿರ್ಗಮಿಸಲಿದ್ದಾರೆ. ಸದ್ಯ ಈ ಸ್ಥಾನಕ್ಕೆ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಈ ಸಭೆ ನಡೆಯಲಿದೆ. ಅನೂಪ್ ಚಂದ್ರ ಪಾಂಡೆ ಅವರನ್ನು ಹೊರತುಪಡಿಸಿ, ಭಾರತದ ಚುನಾವಣಾ ಆಯೋಗವು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರನ್ನು ಒಳಗೊಂಡಿದೆ.

ಸುಶೀಲ್ ಚಂದ್ರ ನಂತರ ತೆರವಾಗಿದ್ದ ಸ್ಥಾನಕ್ಕೆ ಉತ್ತರ ಪ್ರದೇಶದ ಮಾಜಿ ಮುಖ್ಯ ಕಾರ್ಯದರ್ಶಿಯಾಗಿದ್ದ ಅನೂಪ್ ಚಂದ್ರ ಪಾಂಡೆ ಅವರನ್ನು ರಾಷ್ಟ್ರಪತಿ ರಾಮ್ನಾಥ್ ಕೋವಿಂದ್ ಚುನಾವಣಾ ಆಯುಕ್ತರನ್ನಾಗಿ ನೇಮಿಸಿದ್ದರು. ಈಗ ಅವರು ಅವಧಿ ಪೂರ್ಣಗೊಂಡ ಬೆನ್ನಲ್ಲೆ ಅವರ ಸ್ಥಾನಕ್ಕೆ ಮತ್ತೊಬ್ಬರನ್ನು ನೇಮಿಸಲು ಸಭೆ ನಡೆಯಲಿದೆ.
*ಸಿಎಂ ನಿತೀಶ್ ಕುಮಾರ್ ಇಂದು ದೆಹಲಿಗೆ
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಇಂದು ದೆಹಲಿಗೆ ತೆರಳಲಿದ್ದಾರೆ. ಸಿಎಂ ನಿತೀಶ್ ಕುಮಾರ್ ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ಬಿಹಾರದಲ್ಲಿ ಎನ್ಡಿಎ ಸರ್ಕಾರ ರಚನೆಯಾದ ನಂತರ ಇದೇ ಮೊದಲ ಬಾರಿಗೆ ಸಿಎಂ ನಿತೀಶ್ ಕುಮಾರ್ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಈ ಸಭೆಯಲ್ಲಿ ಲೋಕಸಭೆ ಚುನಾವಣೆ 2024ರ ಕುರಿತು ಚರ್ಚೆ ನಡೆಸಬಹುದು.
*ಬಾಂಗ್ಲಾದೇಶ ವಿದೇಶಾಂಗ ಸಚಿವ ಹಸನ್ ಮಹಮೂದ್ ಭಾರತಕ್ಕೆ, ಶೇಖ್ ಹಸೀನಾ ಪ್ರಮಾಣ ವಚನ
ಬಾಂಗ್ಲಾದೇಶದ ವಿದೇಶಾಂಗ ಸಚಿವ ಹಸನ್ ಮಹಮೂದ್ ಅವರು ಭಾರತಕ್ಕೆ ತಮ್ಮ ಮೊದಲ ಅಧಿಕೃತ ಭೇಟಿಗಾಗಿ ದೆಹಲಿ ತಲುಪಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ ಈ ಮಾಹಿತಿಯನ್ನು ನೀಡಿದೆ. ಮತ್ತೊಂದೆಡೆ ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಯಲ್ಲಿ ಆಡಳಿತಾರೂಢ ಅವಾಮಿ ಲೀಗ್ (ಎಎಲ್) ಗೆಲುವಿನ ನಂತರ, ಪ್ರಧಾನಿ ಶೇಖ್ ಹಸೀನಾ ಅವರು ಸತತ ನಾಲ್ಕನೇ ಅವಧಿಗೆ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
*ಸಂಜಯ್ ಸಿಂಗ್ ಜಾಮೀನು ಅರ್ಜಿ, ದೆಹಲಿ ಹೈಕೋರ್ಟ್ ನಿರ್ಧಾರ
ದೆಹಲಿ ಮದ್ಯ ಹಗರಣ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಸಂಜಯ್ ಸಿಂಗ್ ಅವರ ಜಾಮೀನು ಅರ್ಜಿಯ ಕುರಿತು ದೆಹಲಿ ಹೈಕೋರ್ಟ್ ಇಂದು ತೀರ್ಪು ಪ್ರಕಟಿಸಲಿದೆ. ಈ ಪ್ರಕರಣದಲ್ಲಿ, ಸಂಜಯ್ ಸಿಂಗ್ ಅವರನ್ನು 4 ಅಕ್ಟೋಬರ್ 2023 ರಂದು ಜಾರಿ ನಿರ್ದೇಶನಾಲಯ (ED) ಬಂಧಿಸಿತು. ನ್ಯಾಯಮೂರ್ತಿ ಸ್ವರ್ಣಕಾಂತ್ ಶರ್ಮಾ ಅವರ ಪೀಠವು ಈ ವಿಷಯದ ಬಗ್ಗೆ ತನ್ನ ನಿರ್ಧಾರವನ್ನು ಜನವರಿ 31 ರಂದು ಕಾಯ್ದಿರಿಸಿತ್ತು.
ಇತರ ಸುದ್ದಿಗಳು:-
*ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಪ್ರಕರಣದ ವಿಚಾರಣೆ ಇಂದು ದೆಹಲಿ ನ್ಯಾಯಾಲಯದಲ್ಲಿ ನಡೆಯಲಿದೆ.
*ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಕಾಂಗ್ರೆಸ್ನ 'ಭಾರತ್ ಜೋಡೋ ನ್ಯಾಯ ಯಾತ್ರೆ'ಯಲ್ಲಿ ಭಾಗವಹಿಸಲಿದ್ದಾರೆ. ಕಾಂಗ್ರೆಸ್ ಆಹ್ವಾನವನ್ನು ಅಖಿಲೇಶ್ ಯಾದವ್ ಸ್ವೀಕರಿಸಿದ್ದಾರೆ.
*ಬ್ರಿಜ್ಭೂಷಣ್ ಶರಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳ ಪ್ರಕರಣದ ವಿಚಾರಣೆ ಇಂದು ರೋಸ್ ಅವೆನ್ಯೂ ಕೋರ್ಟ್ನಲ್ಲಿ ನಡೆಯಲಿದೆ.












Click it and Unblock the Notifications