4 ರಾಜ್ಯ 1 ಕೇಂದ್ರಾಡಳಿತ ಪ್ರದೇಶದಲ್ಲಿ ಇರುವ ಒಟ್ಟು ಮತದಾರರೆಷ್ಟು?
ನವದೆಹಲಿ, ಏಪ್ರಿಲ್ 5: ನಾಲ್ಕು ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶಕ್ಕೆ ಚುನಾವಣೆ ನಡೆಯುತ್ತಿದ್ದು ಈ ಪ್ರದೇಶಗಳಲ್ಲಿರುವ ಒಟ್ಟು ಮತದಾರರ ಸಂಖ್ಯೆ ಕುರಿತು ಮುಖ್ಯ ಚುನಾವಣಾಧಿಕಾರಿ ಸುನಿಲ್ ಅರೋರಾ ಮಾಹಿತಿ ನೀಡಿದ್ದಾರೆ.
ಅಸ್ಸಾಂನಲ್ಲಿ 23.2 ಮಿಲಿಯನ್ ಮತದಾರರು, ತಮಿಳುನಾಡಿನಲ್ಲಿ 62.8 ಮಿಲಿಯನ್ ಮತದಾರರು, ಪಶ್ಚಿಮ ಬಂಗಾಳದಲ್ಲಿ 73.4 ಮಿಲಿಯನ್ ಮತದಾರರು, ಕೇರಳದಲ್ಲಿ 26.7 ಮಿಲಿಯನ್ ಮತದಾರರು, ಪುದುಚೇರಿಯಲ್ಲಿ 1ಮಿಲಿಯನ್ ಮತದಾರರಿದ್ದಾರೆ. ಒಟ್ಟು 187 ಮಿಲಿಯನ್ ಮತದಾರರಿದ್ದಾರೆ ಎಂದು ತಿಳಿಸಿದ್ದಾರೆ.
ಮಾರ್ಚ್ 2 ರಿಂದ ಅಸ್ಸಾಂನಲ್ಲಿ ಚುನಾವಣಾ ಪ್ರಕ್ರಿಯೆ ಆರಂಭವಾಗಿದೆ. ಪುದುಚೆರಿ, ಕೇರಳ ಮತ್ತು ತಮಿಳುನಾಡಿನಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.

ಅಸ್ಸಾಂನಲ್ಲಿ ಮೂರು ಹಾಗೂ ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಈ ಎಲ್ಲ ಚುನಾವಣೆಗಳ ಫಲಿತಾಂಶ ಮೇ 2ರಂದು ಪ್ರಕಟವಾಗಲಿದೆ. ಈಗಾಗಲೇ ಅಸ್ಸಾಂ, ಹಾಗೂ ಪಶ್ಚಿಮ ಬಂಗಾಳದಲ್ಲಿ ಎರಡು ಹಂತದ ಮತದಾನ ನಡೆದಿದೆ.
ಎಲ್ಲ ಮತಗಟ್ಟೆ ಅಧಿಕಾರಗಳಿಗೂ ಚುನಾವಣೆಗೂ ಮುನ್ನ ಕೋವಿಡ್ ಲಸಿಕೆಗಳನ್ನು ನೀಡಲಾಗುತ್ತದೆ. ಲಸಿಕೆ ಕಾರ್ಯಕ್ರಮವು ಸಕಾರಾತ್ಮಕ ಚುನಾವಣಾ ಪರಿಸರವನ್ನು ಸೃಷ್ಟಿಸಿದೆ. ಈ ಪ್ರಕ್ರಿಯೆಯಲ್ಲ ಜನರ ವಿಶ್ವಾಸವನ್ನು ವೃದ್ಧಿಸಿದೆ. ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವವರನ್ನು ಕೂಡ ಮುಂಚೂಣಿ ಕೆಲಸಗಾರರು ಎಂದು ಗುರುತಿಸಿ ಲಸಿಕೆ ನೀಡಲಾಗುವುದು ಎಂದು ಈ ಮೊದಲೇ ಅರೋರ ತಿಳಿಸಿದ್ದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications