Bengaluru Train: ಬೆಂಗಳೂರು - ಮುಂಬೈ ನಡುವೆ ದುರಂತೋ ಎಕ್ಸ್ಪ್ರೆಸ್ ರೈಲು ಸೇವೆಗೆ ರೈಲ್ವೆ ಸಿದ್ಧತೆ
ನವದೆಹಲಿ: ಬೆಂಗಳೂರು ಹಾಗೂ ಮುಂಬೈ ಮೆಟ್ರೋ ನಗರಗಳ ಪ್ರಯಾಣಿಕರಿಗೆ ಗುಡ್ನ್ಯೂಸ್ ನೀಡುವುದಕ್ಕೆ ಭಾರತೀಯ ರೈಲ್ವೆ ಮುಂದಾಗಿದೆ. ರೈಲ್ವೆ ಇಲಾಖೆಯು 18 ಗಂಟೆಗಳಲ್ಲಿ ಬೆಂಗಳೂರು ಮತ್ತು ಮುಂಬೈ ಸಂಪರ್ಕಿಸುವ ದುರಂತೋ ಎಕ್ಸ್ಪ್ರೆಸ್ ರೈಲು ಪರಿಚಯಿಸಲು ಚಿಂತನೆ ನಡೆಸಿದೆ ಎಂದು Deccan Herald ವರದಿ ಮಾಡಿದೆ.
ಇನ್ನು ಬೆಂಗಳೂರು ಹಾಗೂ ಮುಂಬೈ ನಗರಗಳ ನಡುವೆ ವಾರಕ್ಕೆ ಎರಡು ಬಾರಿ ಸೂಪರ್ ಫಾಸ್ಟ್ ರೈಲು ಅನುಮೋದಿಸಿದ ಕೆಲವೇ ವಾರಗಳ ನಂತರ ಈ ಪ್ರಸ್ತಾವನೆ ಬಂದಿದೆ.ಇದು ಅಸ್ತಿತ್ವದಲ್ಲಿರುವ ಉದ್ಯಾನ್ ಎಕ್ಸ್ಪ್ರೆಸ್ಗಿಂತ ಸುಮಾರು 24 ಗಂಟೆಗಳಲ್ಲಿ 1,209 ಕಿಮೀ ದೂರವನ್ನು ಕ್ರಮಿಸುತ್ತದೆ. ಬಂಗಾಳಿಯಲ್ಲಿ ದುರಂತೋ ಎಂದರೆ ವಿರಾಮವಿಲ್ಲದ ಸೇವೆ ಎಂರ್ಥ ಬರುತ್ತದೆ. ಇನ್ನು ರೈಲ್ವೆ ಮಂಡಳಿಯು ಕಳೆದ ವರ್ಷ ಡಿಸೆಂಬರ್ನಲ್ಲಿ ಈ ಸೇವೆಯನ್ನು ಪ್ರಾರಂಭಿಸುವುದಾಗಿ ತಿಳಿಸಿತ್ತು.

ಇನ್ನು ರೈಲು ಸಂಖ್ಯೆ 16553 ಶನಿವಾರ ಮತ್ತು ಮಂಗಳವಾರ ರಾತ್ರಿ 8.35 ಕ್ಕೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು ಮರುದಿನ ರಾತ್ರಿ 8.40 ಕ್ಕೆ ಎಲ್ಟಿಟಿ ಮುಂಬೈ ತಲುಪಬೇಕಿತ್ತು. ರೈಲು ಸಂಖ್ಯೆ 16554, ಭಾನುವಾರ ಮತ್ತು ಬುಧವಾರದಂದು ರಾತ್ರಿ 11.15 ಕ್ಕೆ ಎಲ್ಟಿಟಿ ಮುಂಬೈನಿಂದ ಹೊರಟು ಮರುದಿನ ರಾತ್ರಿ 10.30ಕ್ಕೆ ಎಸ್ಎಂವಿಟಿ ಬೆಂಗಳೂರು ತಲುಪುವ ನಿರೀಕ್ಷೆ ಇತ್ತು.
ಈ ಸೇವೆಯು ಹುಬ್ಬಳ್ಳಿ ಮತ್ತು ಪುಣೆ ಸೇರಿದಂತೆ 14 ನಿಲುಗಡೆಗಳನ್ನು ಹೊಂದಿದೆ. ಅಲ್ಲದೇ 17 ಎಲ್ಎಚ್ಬಿ ಬೋಗಿಗಳೊಂದಿಗೆ ಎಸ್ಎಂವಿಟಿ ಬೆಂಗಳೂರಿನಲ್ಲಿ ಪ್ರಾಥಮಿಕ ನಿರ್ವಹಣೆಯೊಂದಿಗೆ ಕಾರ್ಯನಿರ್ವಹಿಸಬೇಕಾಗಿತ್ತು. ಆದರೆ, ನೈಋತ್ಯ ರೈಲ್ವೆ ನಿರ್ದಿಷ್ಟ ಅಧಿಸೂಚನೆಯನ್ನು ಹೊರಡಿಸದಿದ್ದರೂ, ಹೊಸ ಸೇವೆಯು ದೀರ್ಘ ಪ್ರಯಾಣದ ಸಮಯದ ಬಗ್ಗೆ ವ್ಯಾಪಕ ಟೀಕೆಗೆ ಗುರಿಯಾಗಿತ್ತು.
ಈ ಮಾರ್ಗಗಳ ನಡುವೆ ದುರಂತೋ ಎಕ್ಸ್ಪ್ರೆಸ್ ರೈಲು
ಇನ್ನು ಭಾರತೀಯ ರೈಲ್ವೆಯು ಇದೀಗ ತುಮಕೂರು, ದಾವಣಗೆರೆ, ಹುಬ್ಬಳ್ಳಿ, ಬೆಳಗಾವಿ, ಮೀರಜ್ ಹಾಗೂ ಪುಣೆ ಮಾರ್ಗ ಮೂಲಕ ಕೆಎಸ್ಆರ್ ಬೆಂಗಳೂರು ಮತ್ತು ಸಿಎಸ್ಎಂಟಿ ಮುಂಬೈ ನಡುವೆ ದುರಂತೋ ಎಕ್ಸ್ಪ್ರೆಸ್ ರೈಲು ಪರಿಚಯಿಸಲು ಮುಂದಾಗಿದೆ. ಈ ಸೇವೆಗಾಗಿ ಎರಡು ರೇಕ್ಗಳನ್ನು (ಹಲವಾರು ಬೋಗಿಗಳನ್ನು ಒಟ್ಟಾಗಿ ಜೋಡಿಸಿ, ಒಂದೇ ಎಂಜಿನ್ನಿಂದ ಎಳೆಯುವ ರೈಲು ಬಂಡಿ) ಪ್ರಸ್ತಾಪಿಸಲಾಗಿದೆ. ಪ್ರಾಥಮಿಕ ನಿರ್ವಹಣೆಯನ್ನು ಕೆಎಸ್ಆರ್ ಬೆಂಗಳೂರಿನಲ್ಲಿ ಮಾಡಲಾಗುತ್ತದೆ.
ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ, ರೈಲು ಸಂಜೆ 4.30 ಕ್ಕೆ ಕೆಎಸ್ಆರ್ ಬೆಂಗಳೂರಿನಿಂದ ಹೊರಟು ಮರುದಿನ ಬೆಳಿಗ್ಗೆ 10.30 ಕ್ಕೆ ಸಿಎಸ್ಎಂಟಿ ಮುಂಬೈ ತಲುಪುತ್ತದೆ. ಮರುದಿನ ಮಧ್ಯಾಹ್ನ 3 ಗಂಟೆಗೆ ಸಿಎಸ್ಎಂಟಿ ಮುಂಬೈನಿಂದ ಹೊರಟು ಬೆಳಿಗ್ಗೆ 9.30 ಕ್ಕೆ ಕೆಎಸ್ಆರ್ ಬೆಂಗಳೂರು ತಲುಪುತ್ತದೆ. ಈ ತಿಂಗಳ ಕೊನೆಯಲ್ಲಿ ಬೆಂಗಳೂರು - ಮುಂಬೈ ನಡುವಿನ ಈ ಹೊಸ ರೈಲು ಸಂಚಾರಕ್ಕೆ ಸಂಬಂಧಿಸಿದಂತೆ ನಿರ್ದಿಷ್ಟ ಹಾಗೂ ಇನ್ನಷ್ಟು ನಿಖರ ಮಾಹಿತಿ ಲಭ್ಯವಾಗುವ ನಿರೀಕ್ಷೆ ಇದೆ.
-
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
ಬೆಂಗಳೂರಲ್ಲಿ ಗೇಲ್ ಗ್ಯಾಸ್ ಯೋಜನೆಗೆ ವೇಗ: ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹೇಳಿದ್ದೇನು -
ಗ್ರೇಟರ್ ಬೆಂಗಳೂರು ಚುನಾವಣೆ 2026: ಕರಡು ಮತದಾರರ ಪಟ್ಟಿ ದೂರು ಸಲ್ಲಿಕೆ ಅವಧಿ ವಿಸ್ತರಣೆ, ಅಂತಿಮ ಪಟ್ಟಿ ಮುಂದೂಡಿಕೆ -
Ugadi Special Train: ವಿಶೇಷ ರೈಲು ಸಂಚಾರ, ಬೆಂಗಳೂರು-ಬೆಳಗಾವಿ ಪ್ರಯಾಣಿಕರೇ ಗಮನಿಸಿ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ -
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಆಗ್ರಹ; ರಾಜ್ಯದ ಎಲ್ಲ ಸಂಸದರಿಗೆ ಪುರುಷೋತ್ತಮ ಬಿಳಿಮಲೆ ಪತ್ರ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ












Click it and Unblock the Notifications