Coconut: ಎಳನೀರು ತಾಜಾವಾಗಿಡಲು ಚರಂಡಿ ನೀರು ಚುಮುಕಿಸಿದ ವ್ಯಾಪಾರಿ- ವಿಡಿಯೋ ವೈರಲ್
ಲಕ್ನೋ ಜೂನ್ 6: ಇತ್ತೀಚೆಗೆ ಹೆಚ್ಚಾಗುತ್ತಿರುವ ತಾಪಮಾನದಿಂದಾಗಿ ನೀರಿನ ದಾಹವನ್ನು ಕಡಿಮೆ ಮಾಡಲು ಹಲವಾರು ಜನ ತಂಪು ಪಾನೀಯಗಳನ್ನು ಕುಡಿಯಲು ಬಯಸುತ್ತಾರೆ. ಅದರಲ್ಲೂ ನೈಸರ್ಗಿಕವಾಗಿ ಲಭ್ಯವಿರುವ ಎಳನೀರು ಕುಡಿಯುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಬೇಸಿಗೆಯಲ್ಲಿ ಎಳನೀರನ್ನು ಕುಡಿಯುವಂತೆ ವೈದ್ಯರು ಕೂಡ ಹೆಚ್ಚಾಗಿ ಸಲಹೆ ನೀಡುತ್ತಾರೆ. ಆದರೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋವೊಂದು ರಸ್ತೆ ಬದಿ ಮಾರಾಟವಾಗುವ ಎಳನೀರು ಕುಡಿಯುವ ಮುನ್ನ ನೂರು ಬಾರಿ ಯೋಚಿಸುವಂತೆ ಮಾಡಿದೆ.
ಸಾಮಾನ್ಯವಾಗಿ ಜನ ಎಳನೀರು ಮಾರಾಟ ಮಾಡುವ ಸ್ಥಳಗಳು ಕಂಡು ಬಂದರೆ ಸಾಕು ತಮ್ಮ ವಾಹನವನ್ನು ನಿಲ್ಲಿಸಿ ಎಳನೀರು ಕುಡಿದು, ಬೇಕಾದರೆ ಖರೀದಿ ಕೂಡ ಮಾಡಿಕೊಂಡು ಹೋಗುತ್ತಾರೆ. ಆದರೆ ಇಲ್ಲೊಂದು ವೈರಲ್ ಆದ ವಿಡಿಯೋದಲ್ಲಿ ವ್ಯಾಪಾರಿಯೊಬ್ಬ ಎಳನೀರು ಕಾಯಿ ಮೇಲೆ ಚರಂಡಿ ನೀರು ಚುಮುಕಿಸಿದ್ದು ಕಂಡುಬಂದಿದೆ. ಈ ವೈರಲ್ ವಿಡಿಯೋ ಆಕ್ರೋಶಕ್ಕೆ ಗುರಿಯಾಗಿದೆ.

ಈ ಘಟನೆಯ ವಿಡಿಯೋವನ್ನು ಉತ್ತರಪ್ರದೇಶದಲ್ಲಿ ಸೆರೆ ಹಿಡಿಯಲಾಗಿದೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ವೈರಲ್ ವೀಡಿಯೊದಲ್ಲಿ ತೆಂಗಿನಕಾಯಿ ಮಾರಾಟಗಾರರೊಬ್ಬರು ತೆಂಗಿನಕಾಯಿಗಳನ್ನು ತಾಜಾ ಮತ್ತು ಸ್ವಚ್ಛವಾಗಿರಿಸಲು ಚರಂಡಿ ನೀರನ್ನು ಚುಮುಕಿಸುತ್ತಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದರಿಂದ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಈ ವಿಡಿಯೋ 25 ಸೆಕೆಂಡ್ಗಳಾಗಿದ್ದು, ಬಿಸ್ರಾಖ್ ಪೊಲೀಸ್ ಠಾಣೆ ವ್ಯಾಪ್ತಿಯ ರಾಧಾ ಸ್ಕೈ ಗಾರ್ಡನ್ ಸೊಸೈಟಿಯ ಹೊರಗೆ ನಡೆದಿದೆ ಎಂದು ಹೇಳಲಾಗುತ್ತಿದೆ. ವರದಿಗಳ ಪ್ರಕಾರ, ಸಮೀರ್ ಎಂಬ ವ್ಯಾಪಾರಿ ದೀರ್ಘಕಾಲದವರೆಗೆ ಸಮಾಜದ ಹೊರಗೆ ತೆಂಗಿನ ನೀರನ್ನು ಮಾರಾಟ ಮಾಡುತ್ತಿದ್ದನು. ಈತ ತೆಂಗಿನಕಾಯಿಯನ್ನು ತಾಜಾವಾಗಿಡಲು ಚರಂಡಿ ನೀರನ್ನು ಎರಚುವುದು ಕಂಡು ಬಂದಿದೆ. ತನ್ನ ಎಳನೀರು ಬಂಡಿಯ ಪಕ್ಕದಲ್ಲೇ ಇದ್ದ ಚರಂಡಿ ನೀರನ್ನು ತುಂಬಿಕೊಂಡು ಬಂದು ಎಳನೀರಿಗೆ ಚುಮುಕಿಸುತ್ತಾನೆ.
ग्रेटर नोएडा वेस्ट का एक वीडियो वायरल है जिसमे समीर नाम का युवक नाले का पानी नारियल पानी पर डालता हुआ दिखाई दे रहा है। वीडियो का संज्ञान लेते हुए बिसराख थाना पुलिस ने आरोपी को गिरफ्तार कर लिया है @noidapolice#VideoViral pic.twitter.com/t22OhBM3WT
— Amit Choudhary (@amitchoudhar_y) June 6, 2023
ಈ ದೃಶ್ಯವನ್ನು ವಾಹನ ಸವಾರರು ಸೆರೆ ಹಿಡಿದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ಪೊಲೀಸರು ಎಳನೀರು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಈ ಬಗ್ಗೆ ಬಿಸ್ರಖ್ ಪೊಲೀಸ್ ಠಾಣೆಯ ಪ್ರಭಾರಿ ಅನಿಲ್ ರಜಪೂತ್ ಅವರು ಮಾಹಿತಿ ನೀಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ವೈರಲ್ ಆಗಿತ್ತು. ಇದನ್ನು ಆಧರಿಸಿ ನಾವು ಎಳನೀರು ವ್ಯಾಪಾರಿಯನ್ನು ಬಂಧಿಸಿದ್ದೇವೆ. ವಿಡಿಯೋದಲ್ಲಿ ವ್ಯಾಪಾರಿ ಎಳನೀರು ಮೇಲೆ ಚರಂಡಿ ನೀರು ಎರಚುವುದು ಸ್ಪಷ್ಟವಾಗಿ ಕಾಣಿಸುತ್ತದೆ. ನಾವು ತಕ್ಷಣ ಕ್ರಮ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎಂದರು.
ಪೊಲೀಸರ ಪ್ರಕಾರ, ಬಂಧಿತನ ಹೆಸರು ಸಮೀರ್. ಅವನು ಬರೇಲಿಯ ತಿಗಡಿ ಗ್ರಾಮದ ನಿವಾಸಿ. ನೋಯ್ಡಾದ ಸ್ಕೈ ಗಾರ್ಡನ್ ಸೊಸೈಟಿ ಬಳಿಯ ಕೊಳೆಗೇರಿಯಲ್ಲಿ ಕುಟುಂಬದೊಂದಿಗೆ ವಾಸಿಸುತ್ತಿದ್ದಾರೆ. ಸಮೀರ್ ವಿರುದ್ಧ ಐಪಿಸಿ ಸೆಕ್ಷನ್ 270, 504 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪ್ರತಿದಿನ ಎಳನೀರು ಕುಡಿಯುವುದರಿಂದ ಹೃದಯ ಸಂಬಂಧಿ ಸಮಸ್ಯೆಗಳು ಕಡಿಮೆಯಾಗುತ್ತವೆ. ಅಧಿಕ ರಕ್ತದೊತ್ತಡದ ಸಮಸ್ಯೆಯನ್ನು ಸಹ ಕಡಿಮೆ ಮಾಡುತ್ತದೆ. ಅಲ್ಲದೆ ದೇಹದ ತೂಕ ಕಡಿಮೆ ಮಾಡುತ್ತದೆ. ಹೀಗೆ ಎಳನೀರು ಕುಡಿಯುವುದರಲ್ಲಿ ಹಲವಾರು ಪ್ರಯೋಜನಗಳು ಇವೆ. ಕೆಲ ಪ್ರಯೋಜನಗಳ ನಡುವೆ ಎಳನೀರಿನ ಈ ರೀತಿಯ ಬಳಕೆ ಅಪಾಯವನ್ನು ತಂದೊಡ್ಡಬಹುದು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications