Tirumala Tirupati: ತಿರುಮಲದಲ್ಲಿ ದುರಂತ.. ಶ್ರೀವಾರಿ ದೇವಸ್ಥಾನದ ಬಳಿ ಕುಸಿದು ಬಿದ್ದು ನವವಧು ಸಾವು!
ತಿರುಮಲದಲ್ಲಿ ದುರಂತವೊಂದು ನಡೆದಿದೆ. ಶ್ರೀಗಳ ದರ್ಶನಕ್ಕೆ ಬಂದ ನವ ವಧು ಚಿನ್ನದ ಮಂಟಪದ ಬಳಿ ಕುಸಿದು ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಇದರಿಂದಾಗಿ ತಿಮ್ಮಪ್ಪನ ದರ್ಶನ ಪಡೆದ ನವದಂಪತಿಗಳ ಸಂತಸ ತಕ್ಷಣವೇ ಆವಿಯಾಗಿ ಹೋಗಿದೆ. ಈ ಘಟನೆಯಿಂದಾಗಿ ವರ ಶಾಕ್ ಆಗಿದ್ದಾರೆ.
ಲಕ್ಷ್ಮಿಸಂತೋಷಿ ಅವರು ಹೈದರಾಬಾದ್ನ ಭಾರ್ಗವ್ ಅವರನ್ನು ಇದೇ ತಿಂಗಳ 23 ರಂದು ವಿವಾಹವಾಗಿದ್ದಾರೆ. ವಧು-ವರರು ಇದೇ ತಿಂಗಳ 27ರಂದು ಶ್ರೀವಾರಿಯ ದರ್ಶನಕ್ಕಾಗಿ ತಿರುಮಲಕ್ಕೆ ತೆರಳಿದ್ದರು. 28ರಂದು ಸ್ವಾಮಿಯ ದರ್ಶನ ಮುಗಿಸಿ ವಧು ಲಕ್ಷ್ಮಿಸಂತೋಷಿ ಹೊರಗೆ ಬಂದ ತಕ್ಷಣ ವರನ ತೆಕ್ಕೆಗೆ ಬಿದ್ದಿದ್ದಾಳೆ. ವಿಜಿಲೆನ್ಸ್ ಸಿಬ್ಬಂದಿಯ ಸಹಾಯದಿಂದ ಆಕೆಯನ್ನು ದೇವಸ್ಥಾನದ ಹೊರಗೆ ಕರೆತಂದು ಆಂಬ್ಯುಲೆನ್ಸ್ನಲ್ಲಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಷ್ಟರಲ್ಲಾಗಲೇ ಅವರ ಜೀವ ಹೊರಟು ಹೋಗಿದೆ.

ಲಕ್ಷ್ಮೀಸಾಯಿ ಸಂತೋಷಿಗೆ ಬಾಲ್ಯದಿಂದಲೂ ಉಸಿರಾಟದ ಸಮಸ್ಯೆ ಇತ್ತು ಎನ್ನಲಾಗಿದೆ. ದರ್ಶನದ ವೇಳೆ ಉಸಿರಾಟದ ಸಮಸ್ಯೆ ಉಂಟಾಗಿದೆ ಎಂದು ಸಂಬಂಧಿಕರು ತಿಳಿಸಿದ್ದಾರೆ. ಮೃತ ದೇಹವನ್ನು ಬುಧವಾರ ಟಿಟಿಡಿ ಆಂಬ್ಯುಲೆನ್ಸ್ನಲ್ಲಿ ನರಸ ರಾವ್ಪೇಟೆಗೆ ಸ್ಥಳಾಂತರಿಸಲಾಯಿತು.
ಪೊಲೀಸರು, ಟಿಟಿಡಿ ವಿಜಿಒ ಹಾಗೂ ಅಶ್ವಿನಿ ಆಸ್ಪತ್ರೆ ವೈದ್ಯರ ಸಮ್ಮುಖದಲ್ಲಿ ಮೃತ ದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ ಎಂದು ಆಸ್ಪತ್ರೆ ಅಧೀಕ್ಷಕಿ ಡಾ.ಕುಸುಮಾ ಕುಮಾರಿ ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತರಿಂದ ಯಾವುದೇ ದೂರು ಬಂದಿಲ್ಲ ಎಂದು ತಿರುಮಲ ಪೊಲೀಸರು ತಿಳಿಸಿದ್ದಾರೆ. ಕಳೆದ ದಿನ ವಧುವಿನ ಅಂತ್ಯಕ್ರಿಯೆ ಮಾಡಲಾಗಿದೆ. ಈ ಅಘಾತದಿಂದಾಗಿ ಆರೋಗ್ಯ ಸಮಸ್ಯೆ ಎದುರಿಸಿದ ವರನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ತಿರುಪತಿ ತಿಮ್ಮಪ್ಪನ ಸನ್ನಿದಾನದಲ್ಲಿ ನಡೆದಿದ್ದು ಭಕ್ತರು ಅಚ್ಚರಿಗೊಂಡಿದ್ದಾರೆ. ತಿರುಪತಿಯಲ್ಲಿ ಇಂಥಹ ಘಟನೆ ಹಿಂದೆಂದೂ ನಡೆದಿರುವುದು ಬೆಳಕಿಗೆ ಬಂದಿಲ್ಲ. ಈ ಘಟನೆ ಬೇಸರ ತಂದಿದೆ.
ನಿತ್ಯ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಲು ಲಕ್ಷಾಂತರ ಜನರು ಆಗಮಿಸುತ್ತಾರೆ. ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ಕಾದು ತಿಮ್ಮಪ್ಪನ ಆಶೀರ್ವಾದ ಪಡೆಯುತ್ತಾರೆ. ತಮ್ಮ ಇಷ್ಟಾರ್ಥಗಳ ನೆರವೇರಿಸುವಂತೆ ಬೇಡಿಕೊಳ್ಳುತ್ತಾರೆ. ಹೀಗೆ ಇಷ್ಟಾರ್ಥಗಳು ನೆರವೇರಿದರೆ ಹರಕೆ ತೀರಿಸಲುವವರ ಸಂಖ್ಯೆ ನಿತ್ಯ ಅಧಿಕವಾಗಿರುತ್ತದೆ. ಹೀಗೆ ಬೇಡಿದ್ದನ್ನು ಕರುಣಿಸುವ ತಿಮ್ಮಪ್ಪನ ಆಶೀರ್ವಾದ ಪಡೆಯಲು ಸಾವಿರಾರು ಸಂಖ್ಯೆಯಲ್ಲಿ ಜನ ಬರುವ ಈ ಸ್ಥಳದಲ್ಲಿ ಇಂಥಹ ಘಟನೆ ಅನಿರೀಕ್ಷಿತವಾಗಿದೆ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications