ಛಾತ್ ಪೂಜೆಗೆ ಹೋಗಿ ಮಡಿದ ಮಕ್ಕಳು, ಮಹಿಳೆಯರು
ಪಟ್ನಾ, ನವೆಂಬರ್, 7 : ಬಿಹಾರದಲ್ಲಿ ಛಾತ್ ಪೂಜೆಯ ಸಂಭ್ರಮ ಮಹಿಳೆ ಮತ್ತು ಮಕ್ಕಳ ಸಾವಿನಲ್ಲಿ ಪರ್ಯವಸಾನವಾಗಿದೆ.
ದರ್ಬಾಂಗದಿಂದ ಛಾತ್ ಪೂಜೆಯನ್ನು ಮುಗಿಸಿಕೊಂಡು ಬರುವ ದಾರಿ ಮಧ್ಯದಲ್ಲಿ ರಾಮಭದ್ರಾಪುರ ರೈಲ್ವೆ ನಿಲ್ದಾಣದಲ್ಲಿ ರೈಲ್ವೆಹಳಿ ದಾಟುವ ವೇಳೆ ಮಹಿಳೆಯರು ಮೃತಪಟ್ಟಿದ್ದಾರೆ.
ರೈಲಿನ ಹೊಡೆತದಿಂದಾಗಿ ಆರು ಜನ ಮಹಿಳೆಯರು ಸಾವಿಗೀಡಾಗಿದ್ದು, ಈ ಘಟನೆಯಿಂದಾಗಿ ಕ್ರೋಧಗೊಂಡಿರುವ ಇಲ್ಲಿನ ಜನರು ರೈಲಿನ ಸೇವೆ ವಿರುದ್ಧ ತಮ್ಮ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.[ಗೋವು ಕಳ್ಳತನ ಗ್ಯಾಂಗ್ ಪತ್ತೆಹಚ್ಚಿದ ಬಜ್ಪೆ ಪೊಲೀಸರು]

ಇನ್ನು ಭಾನುವಾರ ಬಿಹಾರದ ಮುಜಾಫರ್ ಪುರದಲ್ಲಿ ಐದು ಮಕ್ಕಳು ಛಾತ್ ಪೂಜಾ ಆಚರಣೆ ವೇಳೆ ಸಾವಿಗೀಡಾಗಿದ್ದಾರೆ.
ಬಿಹಾರದ ಸಿದ್ದವನ್ ಕಾಲುವೆಯಲ್ಲಿ ಛಾತ್ ಪೂಜಾ ಸಂದರ್ಭದಲ್ಲಿ 6 ವರ್ಷದ ಬಾಲಕ ನೀರಿನಲ್ಲಿ ಮುಳುಗಿದ್ದಾನೆ. ಭಕ್ತರು ತಮ್ಮ ಪೂಜಾ ವಿಧಿವಿಧಾನಗಳನ್ನು ಮಗಿಸಿ ಕಾಲುವೆಯಿಂದ ಮೇಲೆ ಬಂದಿದ್ದಾರೆ. ಕಾಲುವೆಯಲ್ಲಿ ನೀರಿನ ಹರಿವನ್ನು ಹೆಚ್ಚಿಸಲಾಗಿದೆ ಮಗು ಮೇಲೆ ಬರಲಾರದೆ ನೀರಿನಲ್ಲಿ ಮುಳುಗಿ ಮೃತಪಟ್ಟಿದೆ.[ಬೀದರ್: ಸಹಪಾಠಿಗಳ ರ್ಯಾಗಿಂಗ್ ಗೆ ಬಲಿ ಆಯ್ತು ವಿದ್ಯಾರ್ಥಿಯ ಜೀವ!]
ಪಾಟ್ನಾ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಧಿಕಾರಿಗಳೊಂದಿಗೆ ಘಾಟ್ಗಳಿಗೆ ಭೇಟಿ ನೀಡಿದ್ದು, ಸಾವಧಾನವಾಗಿ ವ್ರತವನ್ನು ಅಚರಿಸಲು ಸೂಚಿಸಿದ್ದಾರೆ.
ಇನ್ನು ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಂಸದರೊಂದಿಗೆ ವಿವಿಧ ಛಾತ್ ಘಾಟ್ ಗಳಿಗೆ ಭೇಟಿ ನೀಡಿದ್ದು ಕ್ರಮಕೈಗೊಳ್ಳುವಂತೆ ನೀರಾವರಿ ಸಚಿವರಿಗೆ ಸೂಚಿಸಿದ್ದಾರೆ.
ದೀಪಾವಳಿಯಾದ ಆರನೇ ದಿನವನ್ನು ಛಾತ್ ಅಥವಾ ಛಾಟ್ ಎಂಬ ಹೆಸರಿನಲ್ಲಿ ಉತ್ತರ ಭಾರತದಲ್ಲಿ ವಿಶೇಷವಾಗಿ ಪೂಜೆ ಅಚರಿಸಲಾಗುತ್ತದೆ. ಇದನ್ನು ನದೀ ತೀರದಲ್ಲಿ ಆಚರಿಸುವ ಹಬ್ಬವಾಗಿದ್ದು ಹಿಂದೂ ಅಚರಣೆಗಳಲ್ಲೊಂದಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications