ತನ್ನ ಜನ್ಮದಿನಕ್ಕಾಗಿ ಆನ್ಲೈನ್ನಲ್ಲಿ ಆರ್ಡರ್ ಮಾಡಿದ್ದ ಕೇಕ್ ತಿಂದು ಬಾಲಕಿ ಸಾವು
10ನೇ ವರ್ಷದ ಖುಷಿಯಲ್ಲಿದ್ದ ಬಾಲಕಿಯೊಬ್ಬಳಿಗೆ ಅದೇ ದಿನ ಸಾವು ಬರುತ್ತದೆ, ಅದು ಕೂಡ ಕೇಕ್ನಿಂದ ಎನ್ನುವ ಕಲ್ಪನೆ ಕೂಡ ಇರಲಿಲ್ಲ. ಹುಟ್ಟು ಹಬ್ಬ ಆಚರಣೆಗೆ ಆನ್ಲೈನ್ನಲ್ಲಿ ಆರ್ಡರ್ ಮಾಡಿದ್ದ ಕೇಕ್ ತಿಂದ ಬಾಲಕಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.
ಕಳೆದ ವಾರ ಪಂಜಾಬ್ನಲ್ಲಿ 10 ವರ್ಷದ ಬಾಲಕಿಯೊಬ್ಬಳು ತನ್ನ ಹುಟ್ಟುಹಬ್ಬದಂದು ಕೇಕ್ ತಿಂದ ಬಳಿಕ ಸಾವನ್ನಪ್ಪಿದ್ದಾಳೆ. ಹುಡುಗಿಯ ತಂಗಿ ಸೇರಿದಂತೆ ಇಡೀ ಕುಟುಂಬ ಕೇಕ್ ತಿಂದ ನಂತರ ಅಸ್ವಸ್ಥಗೊಂಡಿತು ಎಂದು ಆಕೆಯ ತಾತ ಮಾಹಿತಿ ನೀಡಿದ್ದಾರೆ.

ಪಟಿಯಾಲಾದ ಬೇಕರಿಯಿಂದ ಆನ್ಲೈನ್ನಲ್ಲಿ ಕೇಕ್ ಆರ್ಡರ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ಸಾವನ್ನಪ್ಪಿದ ಬಾಲಕಿಯನ್ನು ಮಾನ್ವಿ ಎಂದು ಗುರುತಿಸಲಾಗಿದೆ. ಸಾಯುವ ಕೆಲವೇ ಗಂಟೆಗಳ ಮೊದಲು, ತನ್ನ ಕುಟುಂಬದೊಂದಿಗೆ ಕೇಕ್ ಕತ್ತರಿಸಿ ಸಂಭ್ರಮಿಸುತ್ತಿರುವ ವಿಡಿಯೋ ಹಂಚಿಕೊಂಡಿದ್ದ ವ್ಯಾಪಕವಾಗಿ ವೈರಲ್ ಆಗುತ್ತಿದೆ.
ಕೇಕ್ ತಿಂದ ಕುಟುಂಬ ಅಸ್ವಸ್ಥ
ಮಾರ್ಚ್ 24 ರಂದು ರಾತ್ರಿ 7 ಗಂಟೆ ಸುಮಾರಿಗೆ ಮಾನ್ವಿ ತನ್ನ ಹುಟ್ಟುಹಬ್ಬದ ಕೇಕ್ ಕತ್ತರಿಸಿದ್ದಾಳೆ. ರಾತ್ರಿ 10 ಗಂಟೆ ವೇಳೆಗೆ ಇಡೀ ಕುಟುಂಬದ ಸದಸ್ಯರು ಅಸ್ವಸ್ಥಗೊಂಡಿದ್ದಾರೆ ಎಂದು ಸಾನ್ವಿ ಅಜ್ಜ ಹರ್ಬನ್ ಲಾಲ್ ಹೇಳಿದ್ದಾರೆ. ಇಬ್ಬರು ಬಾಲಕಿಯರು ಸ್ವಲ್ಪ ಸಮಯದ ನಂತರ ವಾಂತಿ ಮಾಡಲು ಪ್ರಾರಂಭಿಸಿದರು. ಮಾನ್ವಿ ನೀರು ಕೇಳಿದಳು, ತೀವ್ರ ಬಾಯಾರಿಕೆ ಆಗುತ್ತಿದೆ ಎಂದಳು, ಬಳಿಕ ಅವಳು ಮಲಗಲು ಹೋದಳು ಎಂದು ಅವರು ಹೇಳಿದರು.
ಮರುದಿನ ಬೆಳಗ್ಗೆ ಆಕೆಯ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಮನೆಯವರು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದರು. ಆಕೆಗೆ ಆಕ್ಸಿಜನ್ ಸಹಾಯ ನೀಡಲಾಯಿತು. ಇಸಿಜಿ (ಎಲೆಕ್ಟ್ರೋಕಾರ್ಡಿಯೋಗ್ರಾಮ್), ಹೃದಯದ ವಿದ್ಯುತ್ ಚಟುವಟಿಕೆಯ ರೆಕಾರ್ಡಿಂಗ್ - ನಡೆಸಲಾಯಿತು ಎಂದು ಹರ್ಬನ್ ಲಾಲ್ ಹೇಳಿದರು. ಆದರೆ ವೈದ್ಯರಿಗೆ ಅವಳನ್ನು ಉಳಿಸಲು ಸಾಧ್ಯವಾಗಲಿಲ್ಲ. ಶೀಘ್ರದಲ್ಲೇ ಆಕೆ ಮೃತಪಟ್ಟಿರುವುದಾಗಿ ಘೋಷಿಸಿದರು ಎಂದು ಹೇಳಿದ್ದಾರೆ.
'ಕೇಕ್ ಕನ್ಹಾ' ಎನ್ನುವ ಬೇಕರಿಯಲ್ಲಿ ಆರ್ಡರ್ ಮಾಡಲಾಗಿದ್ದ ಚಾಕೊಲೇಟ್ ಕೇಕ್ ನಲ್ಲಿ ವಿಷಕಾರಿ ಅಂಶವಿತ್ತು ಎಂದು ಕುಟುಂಬದವರು ಆರೋಪಿಸಿದ್ದಾರೆ.
ಬೇಕರಿ ಮಾಲೀಕರ ವಿರುದ್ಧಎಫ್ಐಆರ್ ದಾಖಲಿಸಲಾಗಿದೆ. "ದೇಹದ ಮರಣೋತ್ತರ ಪರೀಕ್ಷೆಯನ್ನು ಮಾಡಲಾಗಿದೆ. ಕೇಕ್ನ ಮಾದರಿಯನ್ನು ಸಹ ಪರೀಕ್ಷೆಗೆ ಕಳುಹಿಸಲಾಗಿದೆ, ನಾವು ವರದಿಗಳಿಗಾಗಿ ಕಾಯುತ್ತಿದ್ದೇವೆ" ಎಂದು ಪೊಲೀಸರು ಹೇಳಿದ್ದಾರೆ.
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications