Hyderabad: ಬಿರಿಯಾನಿಗೆ ಹೆಚ್ಚು ಮೊಸರು ಕೇಳಿದ್ದಕ್ಕೆ ಗ್ರಾಹಕನನ್ನೇ ಕೊಂದ ಹೋಟೆಲ್ ಕೆಲಸಗಾರ
ಹೈದರಾಬಾದ್ನಲ್ಲಿ ಬಿರಿಯಾನಿಗೆ ಹೆಚ್ಚು ಮೊಸರು ಕೇಳಿದ್ದಕ್ಕೆ ಗ್ರಾಹಕನೊಬ್ಬನನ್ನು ಹೋಟೆಲ್ ಕಾರ್ಮಿಕ ಹೊಡೆದು ಕೊಂದ ಘಟನೆ ನಡೆದಿದೆ. ಬಿರಿಯಾನಿಗೆ ಹೆಚ್ಚುವರಿ ಮೊಸರು ಕೊಡುವ ವಿಚಾರದಲ್ಲಿ ನಡೆದ ಜಗಳವು ಕೊಲೆಯಲ್ಲಿ ಅಂತ್ಯವಾಗಿದೆ.
ಐಎಎನ್ಎಸ್ ವರದಿ ಪ್ರಕಾರ ಹೈದರಾಬಾದ್ನ ಹೃದಯ ಭಾಗದಲ್ಲಿರುವ ಪುಂಜಗುಟ್ಟದಲ್ಲಿರುವ ಮೆರಿಡಿಯನ್ ರೆಸ್ಟೋರೆಂಟ್ನಲ್ಲಿ ಭಾನುವಾರ ತಡರಾತ್ರಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮಧ್ಯರಾತ್ರಿಯ ಸುಮಾರಿಗೆ ರೆಸ್ಟೋರೆಂಟ್ನಲ್ಲಿ ಊಟ ಮಾಡುತ್ತಿದ್ದ ಲಿಯಾಕತ್ ಬಿರಿಯಾನಿಯೊಂದಿಗೆ ಹೆಚ್ಚುವರಿ ಮೊಸರು ನೀಡುವಂತೆ ಕೇಳಿದ ನಂತರ ತೀವ್ರ ವಾಗ್ವಾದದ ಸಂದರ್ಭದಲ್ಲಿ ಹೋಟೆಲ್ನ ನೌಕರರು ಹಲ್ಲೆ ನಡೆಸಿದ್ದಾರೆ. ಗಾಯಗೊಂಡ ಗ್ರಾಹಕರು ದೂರು ನೀಡಲು ಪಂಜಗುಟ್ಟ ಪೊಲೀಸ್ ಠಾಣೆಗೆ ತೆರಳಿದ್ದಾರೆ.

ಪೊಲೀಸರೊಂದಿಗೆ ಮಾತನಾಡುವಾಗ, ಲಿಕಾಯತ್ ಕುಸಿದುಬಿದ್ದರು, ನಂತರ ಪೊಲೀಸರು ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ, ಆಸ್ಪತ್ರೆಯಲ್ಲಿ ಲಿಕಾಯತ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಗಾಂಧಿ ಆಸ್ಪತ್ರೆಗೆ ರವಾನಿಸಲಾಗಿದೆ.
ನ್ಯಾಯ ಒದಗಿಸಲು ಒತ್ತಾಯ
ಘಟನೆಯ ನಂತರ, ಮಜ್ಲಿಸ್ - ಎ - ಇತ್ತೆಹಾದುಲ್ ಮುಸ್ಲಿಮೀನ್ (ಎಂಐಎಂ) ಎಂಎಲ್ಸಿ ಮಿರ್ಜಾ ರಹಮತ್ ಬೇಗ್ ಕ್ವಾದ್ರಿ ಅವರು ಆಸ್ಪತ್ರೆಗೆ ಆಗಮಿಸಿ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವಂತೆ ಒತ್ತಾಯಿಸಿದ್ದಾರೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಈ ಬಗ್ಗೆ ಎಕ್ಸ್ನಲ್ಲಿ ಹಲವರು ಪ್ರತಿಕ್ರಿಯೆ ನಡೆಸಿದ್ದು, ಇದು ಹೈದರಾಬಾದ್ನಲ್ಲಿ ಬಿರಿಯಾನಿಗೆ ಪ್ರಸಿದ್ಧವಾದ ಹೋಟೆಲ್ ಇನ್ನು ಮುಂದೆ ಇಲ್ಲಿಗೆ ಹೋಗಲ್ಲ, ಹೋದರೂ ಅಪ್ಪಿ ತಪ್ಪಿಯೂ ಮೊಸರು ಕೇಳಲ್ಲ ಎಂದು ಬರೆದುಕೊಂಡಿದ್ದಾರೆ. ಇನ್ನೂ ಹಲವರು ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೂ ಹಲವರು ಈ ರೀತಿಯ ಸಣ್ಣ ವಿಚಾರಗಳಿಗೆ ಕೊಲೆ ಮಾಡುವುದು ಹೀನಾಯ ಕೃತ್ಯ ಎಂದು ಹೇಳಿದ್ದಾರೆ.
ಸಣ್ಣ ವಿಚಾರಗಳಿಗೂ ಕೊಲೆ, ಹಲ್ಲೆ
ಕಳೆದ ತಿಂಗಳು ನಗರದ ಜಗದ್ಗಿರಿಗುಟ್ಟಾ ಪೊಲೀಸ್ ಠಾಣೆ ವ್ಯಾಪ್ತಿಯ ರಾಜೀವ್ ಗೃಹ ಕಲ್ಪದಲ್ಲಿ ಆಟೋ ರಿಕ್ಷಾ ಚಾಲಕನೊಬ್ಬ ಚಾಕುವಿನಿಂದ ಹಲ್ಲೆ ನಡೆಸಿ ಒಂಬತ್ತು ವರ್ಷದ ಬಾಲಕ ಗಂಭೀರವಾಗಿ ಗಾಯಗೊಂಡಿದ್ದ ಘಟನೆ ನಡೆದಿತ್ತು. ಆದಿತ್ಯ ಎಂದು ಗುರುತಿಸಲಾದ ಅಪ್ರಾಪ್ತ ಬಾಲಕ ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಾಗ ಆರೋಪಿಗಳು ಆತನ ಬಳಿಗೆ ಬಂದು ಚಾಕುವಿನಿಂದ ಹಲ್ಲೆ ನಡೆಸಿದ್ದರು.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ












Click it and Unblock the Notifications