Best Recharge Plans: ಎಲ್ಲಾ ನೆಟ್ವರ್ಕ್ಗಳಲ್ಲೂ ಬರಲಿದೆ ಕಡಿಮೆ ಬೆಲೆಯ ರೀಚಾರ್ಜ್ ಪ್ಲಾನ್
ದಿನಕಳೆದಂತೆ ಮೊಬೈಲ್ ರೀಚಾರ್ಜ್ ದರಗಳು ಗಗನಕ್ಕೇರುತ್ತಿದ್ದು ಜನರ ಜೇಬಿಗೆ ಕತ್ತರಿ ಬೀಳುತ್ತಿದೆ. ಡಾಟಾ ಬಳಕೆಯ ಅಗತ್ಯವಿಲ್ಲದೇ ಇದ್ದರೂ ಕಂಪನಿಗಳ ಪ್ಲಾನ್ಗಳ ಪ್ರಕಾರ ಅನಿವಾರ್ಯವಾಗಿ ದುಬಾರಿ ಹಣ ನೀಡಿ ರೀಚಾಜ್ ಮಾಡಿಸಿಕೊಳ್ಳಲೇಬೇಕಾಗುತ್ತದೆ. 4ಜಿ, 5ಜಿ ಸೇವೆಗಳು ಬಂದಿದ್ದರೂ ಭಾರತದಲ್ಲಿ ಇನ್ನೂ 15 ಕೋಟಿ ಮಂದಿ 2ಜಿ ಸೇವೆಗಳನ್ನು ಬಳಕೆ ಮಾಡುತ್ತಿದ್ದಾರೆ. ಇವರು ಸಾಮಾನ್ಯ ಫೋನ್ ಕರೆಗಳು ಮತ್ತು ಎಸ್ಎಂಎಸ್ನಂತ ಮೂಲಭೂತ ಮೊಬೈಲ್ ಸೇವೆಯನ್ನು ಮಾತ್ರ ಬಳಕೆ ಮಾಡುತ್ತಾರೆ. ಡಾಟಾ ಬಳಕೆ ಮಾಡದೇ ಇದ್ದರೂ ಈ ಬಳಕೆದಾರರು ಅದಕ್ಕಾಗಿ ಹಣ ತೆರಬೇಕಿದ್ದು ಈಗ ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (TRAI) ಹೊಸ ನಿಯಮ ಜಾರಿಗೆ ಮುಂದಾಗಿದೆ.
2024ರ ಡಿಸೆಂಬರ್ 24ರಂದೇ TRAI ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದರೂ ಟೆಲಿಕಾಂ ಕಂಪನಿಗಳು ಇನ್ನೂ ಕೇಗೆಟುಕುವ ರೀಚಾರ್ಜ್ ಯೋಜನೆಗಳನ್ನು ಪರಿಚಯಿಸಿಲ್ಲ. ಇದೀಗ ಟೆಲಿಕಾಂ ಕಂಪನಿಗಳಿಗೆ ಬಿಸಿ ಮುಟ್ಟಿಸಲು ಸಜ್ಜಾಗಿದೆ.

10 ರೂಪಾಯಿ ಮುಖಬೆಲೆಯ ರೀಚಾರ್ಜ್ ಯೋಜನೆಗಳು ಹೊಸ ನಿಯಮಗಳ ಅಡಿಯಲ್ಲಿ, ಏರ್ಟೆಲ್, ಜಿಯೋ, ಬಿಎಸ್ಎನ್ಎಲ್ ಮತ್ತು ವೊಡಾಫೋನ್ ಐಡಿಯಾ (Vi) 10 ರೂಪಾಯಿ ಆರಂಭಿಕ ಬೆಲೆಯಲ್ಲಿ ಲಭ್ಯವಿರುವ ಟಾಪ್ ಅಪ್ ವೋಚರ್ ಗಳನ್ನು ಪರಿಚಯಿಸಬೇಕಾಗುತ್ತದೆ. ಆನ್ಲೈನ್ ರೀಚಾರ್ಜ್ ಹೆಚ್ಚುತ್ತಿರುವ ಕಾರಣ, ಕೋಡ್ ಮೂಲಕ ರೀಚಾರ್ಜ್ ವ್ಯವಸ್ಥೆ ತೆಗೆದುಹಾಕಲು TRAI ನಿರ್ಧರಿಸಿದೆ.
ವಿಶೇಷ ವೋಚರ್ ಗಳಿಗೆ 365 ದಿನಗಳ ಮಾನ್ಯತೆ
ವಿಶೇಷ ಸುಂಕದ ವೋಚರ್ಗಳ (STV) ಮಾನ್ಯತೆಯನ್ನು 90 ದಿನಗಳಿಂದ 365 ದಿನಗಳಿಗೆ ಹೆಚ್ಚಿಸಿದೆ. ಇದರಿಂದಾಗಿ ಬಳಕೆದಾರರು ಕಡಿಮೆ ರೀಚಾರ್ಜ್ ವೆಚ್ಚದಲ್ಲಿ ದೀರ್ಘಾವಧಿಯವರೆಗೆ ಸೌಲಭ್ಯ ಪಡೆಯಬಹುದು. ಇಂಟರ್ನೆಟ್ ಸೇವೆಗಳು ಅಗತ್ಯವಿಲ್ಲದ 2ಜಿ ಮೊಬೈಲ್ ಬಳಕೆದಾರರಿಗೆ ಅನುಕೂಲವಾಗುವಂತೆ ಧ್ವಮಿ ಮತ್ತು ಎಸ್ಎಂಎಸ್ ಮಾತ್ರ ಹೊಂದಿರುವ ಯೋಜನೆಗಳನ್ನು ವಿನ್ಯಾಸಗೊಳಿಸಲು ಟೆಲಿಕಾಂ ಆಪರೇಟರ್ ಗಳಿಗೆ ಸೂಚನೆ ನೀಡಲಾಗುತ್ತದೆ.
ಈಗಿರುವ ಯೋಜನೆಗಳ ಪ್ರಕಾರ ಡೇಟಾ ಇರುವ ಯೋಜನೆಗಳು ಅಗತ್ಯವಿಲ್ಲದೇ ಇದ್ದರೂ, ಕರೆಗಳು ಮತ್ತು ಸಂದೇಶಗಳ ಸೇವೆ ಮಾತ್ರ ಬೇಕು ಎಂದರೂ ಅನಿವಾರ್ಯವಾಗಿ ಹೆಚ್ಚಿನ ಹಣ ನೀಡಬೇಕಾಗುತ್ತಿದ್ದು ಬಳಕೆದಾರರಿಗೆ ಹೆಚ್ಚಿನ ಹೊರೆಯಾಗುತ್ತಿದೆ.
ಹೊಸ ಮಾರ್ಗಸೂಚಿಗಳನ್ನು ಈಗಾಗಲೇ ಜಾರಿಗೆ ತರಲಾಗಿದೆ. ಹೊಸ ರೀಚಾರ್ಜ್ ಯೋಜನೆಗಳನ್ನು ಜಾರಿಗೆ ತರಲು ಕೆಲವು ವಾರಗಳ ಸಮಾಯವಕಾಶ ನೀಡಲಾಗಿದೆ. ಜನವರಿ ಅಂತ್ಯದ ವೇಳೆಗೆ ಹೊಸ ರೀಚಾರ್ಜ್ ಯೋಜನೆಗಳನ್ನು ಪರಿಚಯಿಸುವ ನಿರೀಕ್ಷೆ ಇದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications